ಜನರ ಸಮಸ್ಯೆ ಪರಿಹರಿಸುವಲ್ಲಿ ನಗರಸಭೆ ವಿಫ‌ಲ


Team Udayavani, Sep 16, 2017, 12:29 PM IST

16-bellary-3.jpg

ಹೊಸಪೇಟೆ: ನಗರದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ಸಮರ್ಪಕ ಮೂಲ‌ ಸೌಲಭ್ಯಗಳನ್ನು
ಒದಗಿಸಲು ನಗರಸಭೆ ಆಡಳಿತ ಮಂಡಳಿ, ಸಂಪೂರ್ಣವಾಗಿ ವಿಫ‌ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಸಕ ಆನಂದ್‌ ಸಿಂಗ್‌, ದಿಢೀರ್‌ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕಚೇರಿಯಿಂದ ಹೊರ ಕಳುಹಿಸಿದ ಘಟನೆ ಶುಕ್ರವಾರ ನಡೆಯಿತು.

ಶಾಸಕರು ಹೇಳುತ್ತಿದಂತಯೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಒಬೊಬ್ಬರಾಗಿ ಕಚೇರಿಯಿಂದ ಹೊರ ನಡೆದರು. ಕೆಲ ಸದಸ್ಯರು, ಶಾಸಕರನ್ನು ಹಿಂಬಾಲಿಸಿದರೆ, ಕೆಲ ಸದಸ್ಯರು ಕಚೇರಿಯಲ್ಲಿ ಉಳಿದರು. ಕೆಲವರು ಹೊರ ಬಾರದಿದಕ್ಕೆ ಕುಪಿತಗೊಂಡ ಶಾಸಕರು, ಸಾರ್ವಜನಿಕರು, ನಗರಸಭೆಯನ್ನು ಬಹಿಷ್ಕರಿಸುವಂತೆ ಕರೆ ನೀಡಿದರು.

ನಗರದಲ್ಲಿ ಕುಡಿವ ನೀರು ಹಾಗೂ ಒಳ ಚರಂಡಿ ಯೋಜನೆ ಆರಂಭವಾಗಿ ಆರೇಳು ವರ್ಷಗಳಾಗಿದ್ದರೂ, ಕಾಮಗಾರಿ ಪೂರ್ಣಗೊಂಡಿಲ್ಲ. ಇದಕ್ಕಾಗಿ ರಸ್ತೆಯನ್ನೆಲ್ಲ ಅಗೆದು, ಹಾಳು ಮಾಡಲಾಗಿದ್ದು, ಮಳೆಗಾಲದಲ್ಲಿ ರಸ್ತೆಗಳು ಕೆಸರು ಗದ್ದೆಗಳಾಗಿ ಮಾರ್ಪಾಟ್ಟಿವೆ.

ನಗರದಲ್ಲಿ ಕುಡಿವ ನೀರು ಹಾಗೂ ಒಳ ಚರಂಡಿ ಯೋಜನೆ ಆರಂಭವಾಗಿ ಆರೇಳು ವರ್ಷಗಳಾಗಿದ್ದರೂ, ಕಾಮಗಾರಿ
ಪೂರ್ಣಗೊಂಡಿಲ್ಲ. ಇದಕ್ಕಾಗಿ ರಸ್ತೆಯನ್ನೆಲ್ಲ ಅಗೆದು, ಹಾಳು ಮಾಡಲಾಗಿದ್ದು, ಮಳೆಗಾಲದಲ್ಲಿ ರಸ್ತೆಗಳು ಕೆಸರು ಗದ್ದೆಗಳಾಗಿ ಮಾರ್ಪಾಟ್ಟಿವೆ. ನಗರದಲ್ಲಿ ಡೆಂಘೀ ಎಂತಹ ಮಾರಕ ಕಾಯಿಲೆಗಳು ಜನರು ತಮ್ಮ ಪ್ರಾಣಗಳನ್ನು ಕಳೆದು ಕೊಳ್ಳುವಂತಾಗಿದೆ. ಎಲ್ಲದಕ್ಕೂ ಅಧಿಕಾರಿಗಳು ಸಬೂಬು ಹೇಳುವುದನ್ನೇ ಮೈಗೂಡಿಸಿಕೊಂಡಿದ್ದಾರೆ. ಕೆಲಸ ಮಾತ್ರ ಶೂನ್ಯ ಎಂದು ತರಾಟೆ ತೆಗೆದುಕೊಂಡರು. ನಗರದಲ್ಲಿ ಉಲ್ಬಣಗೊಂಡಿರುವ ಡೆಂಘೀ, ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗ-ರುಜಿನಗಳಿಗೆ ಹತೋಟಿಗೆ ಬಾರದೆ ನಾಗರಿಕರು ಪರದಾಡುವಂತಾಗಿದೆ. ಅಧಿಕಾರಿಗಳ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದರು.

ಕೊನೆಗೆ ಪೌರಾಯುಕ್ತ ರಮೇಶ್‌ ಸೇರಿ ಇತರರು 45  ನಗಳಲ್ಲಿ ನಗರದ ಬಹತೇಕ ಸಮಸ್ಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಮೇಲೆ ಶಾಸಕರು ನಗರಸಭೆಯಿಂದ ಮರಳಿದರು. ಎಇಇ ಸೈಯದ್‌ ಮಹ್ಮಮದ್‌ ಮನ್ಸೂರ್‌, ಕುಡಿವ ನೀರು ಯೋಜನೆ ಅಭಿಯಂತರ ಖಾಜಿ, ಕಂದಾಯ ಅಧಿಕಾರಿ ಅಜಿತ್‌ ಸಿಂಗ್‌, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಡು, ಸದಸ್ಯರಾದ ಗುಡಗಂಟಿ ಮಲ್ಲಿಕಾರ್ಜುನ, ಗಿಂಜಿ ಮಂಜುನಾಥ ಇದ್ದರು.

ಸ್ವಾರ್ಥ ರಾಜಕೀಯ ಸಲ್ಲ: ಕೊಟ್ರೇಶ್‌ ತಾತ್ವಿಕ ಮತ್ತು ಸೈದ್ಧಾಂತಿಕ ನಿಲುವು ಇಲ್ಲದವರಿಗೆ ಸಾಮಾಜಿಕ ಜವಾಬ್ದಾರಿಗಳು ಬರೋಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಪಕ್ಷದವರನ್ನು ರಾಜಕೀಯವಾಗಿ ಬಲಹೀನಗೊಳಿಸುವುದು ಕೂಡ ಭ್ರಷ್ಟಾಚಾರ. ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಜನರು ಶಾಸಕರನ್ನು ಆಯ್ಕೆ ಮಾಡಿ ಕಳಿಸಿದರೆ ಸುಮಾರು ನಾಲ್ಕು ವರ್ಷಗಳಲ್ಲಿ ಶಾಸಕ ಆನಂದಸಿಂಗ್‌ ಕನಿಷ್ಠ 60 ದಿನಗಳಷ್ಟು ಸಹ ಹಾಜರಾಗಿಲ್ಲ. ಇನ್ನೂ ಅಭಿವೃದ್ಧಿ ಹೇಗೆ ತಾನೆ ಆಗುತ್ತದೆ. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ನಗರಸಭೆ ಆಡಳಿತ ಯಂತ್ರವನ್ನು ಕುಂಠಿತಗೊಳಿಸಿದ್ದಾರೆ. ಕಾಂಗ್ರೆಸ್‌ನಿಂದ ಚುನಾಯಿತ ಸದಸ್ಯರನ್ನು ಪ್ರಭಾವ ಬಳಸಿ ಸೆಳೆದು ಬಲಹೀನಗೊಳಿಸುತ್ತಿದ್ದಾರೆ. ಶಾಸಕರು ಶಾಸನ ಸಭೆಯಲ್ಲಿ ಧ್ವನಿ ಎತ್ತಬೇಕು. ನಗರಸಭೆಯಲ್ಲಿ ಮೇಲಿಂದ ಮೇಲೆ ಆಗಮಿಸಿ ಆಡಳಿತದಲ್ಲಿ ಮೂಗು ತೂರಿಸುವುದು ಅವರಿಗೆ ಶೋಭ ತರುವಂಥದ್ದಲ್ಲ. ನಗರಸಭೆ ಮೇಲೆ ಹಿಡಿತ ಸಾಧಿಸಬೇಕೆಂದಿದ್ದರೆ ನಗರಸಭೆ ಚುನಾವಣೆಗೆ ಸ್ಪರ್ಧಿಸಿ ಆಡಳಿತ ನಡೆಸಿ, ಅಭಿವೃದ್ಧಿಗೊಳಿಸಲು ಅವಕಾಶವಿದೆ. ಶಾಸಕರ ಅವಧಿಯುದ್ದಕ್ಕೂ ನಗರದಲ್ಲಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲವೆಂಬುದನ್ನು ಅವರೇ ಪ್ರತಿಭಟನೆ ಮೂಲಕ ಹೊರಹಾಕಿದ್ದಾರೆ ಎಂದು ನಗರಸಭೆ ಮಾಜಿ ಉಪಾಧ್ಯಕ್ಷ ಕೆ.ಕೊಟ್ರೇಶ್‌ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.