ಬಿಸಿಲ ಝಳಕ್ಕೆ ಬಸವಳಿದ ಜನತ


Team Udayavani, Apr 13, 2018, 12:48 PM IST

bell-2.jpg

ಹೊಸಪೇಟೆ: ಬಿಸಿಲು ನಾಡಿನ ಜಿಲ್ಲೆಯೆಂದು ಬಳ್ಳಾರಿ ಪ್ರಖ್ಯಾತಿಯಾಗಿದ್ದು, ಇಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಉಲ್ಬಣಗೊಳ್ಳುತ್ತಿದೆ. ಇದಕ್ಕೆ ಹೊಸಪೇಟೆ ತಾಲೂಕು ಸಹ ಹೊರತಾಗಿಲ್ಲ. ಇದರಿಂದ ಹೊರಬರಲು ತಾಲೂಕಿನ ಜನರು ಪರಿತಪಿಸುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಹೊರಬಾರದ ಜನರು
ದನಿವಾರಿಸಿಕೊಳ್ಳಲು ಪರದಾಡುವಂತಾಗಿದೆ.

ವಿಶ್ವ ವಿಖ್ಯಾತ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯು ಕಳೆದ ಒಂದು ವಾರದಿಂದ ಇಳಿಮುಖವಾಗಿದೆ. ಇದಕ್ಕೆ ಬಿಸಿಲಿನ ಪ್ರಖರತೆಯೇ ಕಾರಣವಾಗಿದೆ. ಹಂಪಿ ಎಂದರೆ ಕಲ್ಲು ಬಂಡೆ ಹಾಗೂ ಗುಡ್ಡಗಳ ಪ್ರದೇಶವಾಗಿದ್ದು, ತಾಲೂಕಿನಲ್ಲಿ 40 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರುವುದರಿಂದ ಹಂಪಿಯತ್ತ ಪ್ರವಾಸಿಗರು ಮುಖ ಮಾಡುತ್ತಿಲ್ಲ, ಇದರಿಂದ ಹಂಪಿಯ ಪರಿಸರದಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿದೆ.
 
ಈಗಾಗಲೇ ಶಾಲಾ-ಕಾಲೇಜುಗಳು ರಜೆ ಬಿಟ್ಟಿದ್ದು, ರಾಜ್ಯದ ವಿವಿಧ ಭಾಗಗಳಿಂದ ಈ ದಿನಗಳಲ್ಲಿ ಸಾವಿರಾರು ಪ್ರವಾಸಿಗರು ಹಂಪಿಗೆ ಆಗಮಿಸುತ್ತಿದ್ದರು. ಆದರೆ ಈ ವರ್ಷ ಅತೀ ಹೆಚ್ಚು ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಪ್ರವಾಸಿಗರು ಹಂಪಿಯತ್ತ ಆಗಮಿಸಲು ಹಿಂದೇಟು ಹಾಕುತ್ತಿದ್ದಾರೆ.

ಹಂಪಿಯಲ್ಲಿ ವಾಸವಾಗಿದ್ದ ನಿವಾಸಿಗಳನ್ನು ಈಗಾಗಲೇ ತೆರವು ಮಾಡಿರುವುದರಿಂದ ಹಂಪಿಗೆ ಬರುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಇಲ್ಲವಾಗಿದೆ. ವಿದೇಶಿ ಪ್ರವಾಸಿಗರು ತಂಗಲು ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಹೊಸಪೇಟೆ ನಗರದ ತುಂಗಾಭದ್ರಾ ಜಲಾಶಯವು ಕೂಡ ಈಗಾಗಲೇ ಬರಿದಾಗಿದ್ದು, ಈ ಭಾಗಕ್ಕೂ ಪ್ರವಾಸಿಗರು ಆಗಮಿಸುತ್ತಿಲ್ಲ. ಹಂಪಿಯ ಪರಿಸರದ ಕಲ್ಲು ಬಂಡೆಗಳು ಬಿಸಿಲಿನ ಝಳಕ್ಕೆ ಕಾದ ಕಬ್ಬಿಣದ ಕಡಲೆಯಂತಾಗಿವೆ. ಇದರ ಝಳವು ಕೂಡ ಮತ್ತಷ್ಟು ಜನತೆಯನ್ನು ಆತಂಕಕ್ಕೆ ದೂಡಿವೆ.
 
ವಿಶ್ವವಿಖ್ಯಾತ ಹಂಪಿಗೆ ದೇಶ ವಿದೇಶಗಳಿಂದ ಪ್ರತಿ ದಿನವು ಸಾವಿರಾರು ಜನರು ಆಗಮಿಸಿ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುತ್ತಿರುವ ತುಂಗಾಭದ್ರಾ ನದಿಯಲ್ಲಿ ಸ್ನಾನ ಮಾಡಿ ಬಿಸಿಲಿನ ಧಗೆನೀಗಿಸಿಕೊಳ್ಳುತ್ತಿದ್ದರು.  ಪ್ರವಾಸಿಗರು ಈ ಬಾರಿ ನದಿಯಲ್ಲಿ ನೀರು ಇಲ್ಲದ ಕಾರಣ ಪರದಾಡುವ ಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಬಿಸಿಲಿನ ತಾಪಮಾನದ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಬೆಳಗಿನ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿವೆ.
 
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಿಸಿಲಿನ ಧಗೆಗೆ ಜನಸಾಮಾನ್ಯರು ತತ್ತರಿಸಿದರೆ, ಮಕ್ಕಳು ವೃದ್ಧರ ಮೈಮೇಲೆ ಬೇಸಿಗೆ ಗುಳ್ಳೆಗಳು ಕಾಣಿಸಿಕೊಂಡಿವೆ. ನಗರದಲ್ಲಿ ನೀರಿನ ಅಭಾವ ತಲೆದೋರಿದ್ದು, ನೀರಿಗೂ ಪರದಾಡುವ ಸ್ಥಿತಿ ವರ್ಷಕ್ಕಿಂತ ಪ್ರಸಕ್ತ ವರ್ಷ ಹೆಚ್ಚಾಗಿದೆ. ಇದೇ ಪರಿಸ್ಥಿತಿ
ಮುಂದುವರಿದರೆ ಅಪಾಯ ತಪ್ಪಿದ್ದಲ್ಲ ಎಂಬ ಆತಂಕದಲ್ಲಿ ಹೊಸಪೇಟೆ ಜನತೆ ಇದ್ದಾರೆ. 

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.