ಗಾಂಧಿ ಸಂಡೂರು ಭೇಟಿ ಐತಿಹಾಸಿಕ


Team Udayavani, Oct 2, 2019, 3:35 PM IST

ballary-tdy-2

ಸಂಡೂರು: ದೇಶಕ್ಕೆ ಸ್ವಾತಂತ್ರ್ಯತಂದು ಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೂ ಸಂಡೂರಿಗೂ ಅವಿನಾಭಾವ ಸಂಬಂಧವಿದೆ. ಘೋರ್ಪಡೆ ವಂಶಸ್ಥರಾದ ಎಂ.ವೈ. ಘೋರ್ಪಡೆಯವರು ಪಟ್ಟಣದ ಆದರ್ಶ ಸಮುದಾಯ ಭವನದಲ್ಲಿ ಬೃಹತ್‌ ಕಂಚಿನ ಮೂರ್ತಿ ಸ್ಥಾಪಿಸುವ ಮೂಲಕ ಆ ನೆನಪನ್ನು ಜೀವಂತವಾಗಿಟ್ಟಿದ್ದಾರೆ.

ಇಲ್ಲಿಯ ಘೋರ್ಪಡೆ ರಾಜ ವಂಶಸ್ಥರು 1932ರಲ್ಲಿ ರಾಜ ಯಶವಂತರಾವ್‌ ಹಿಂದೂರಾವ್‌ ಘೋರ್ಪಡೆ ಒಂದು ಪ್ರೊಕ್ಲಾಮೇಷನ್‌ (ಆದೇಶ) ಹೊರಡಿಸಿದ್ದರು. ಅದರ ಪ್ರಕಾರ ಹರಿಜನರಿಗೆ ಸಮಾನವಾಗಿ ದೇವಸ್ಥಾನಗಳಲ್ಲಿ ಮುಕ್ತ ಪ್ರವೇಶ ಅವಕಾಶ ಮಾಡಿಕೊಡಲಾಯಿತು. ಆದ್ದರಿಂದ ಈ ಪ್ರದೇಶದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಲಾಯಿತು. ಇದರಿಂದ ಆಕರ್ಷಿತರಾದ ಮಹಾತ್ಮ ಗಾಂಧಿಜಿಯವರು 1934ರಲ್ಲಿ ಸಂಡೂರಿಗೆ ಭೇಟಿ ನೀಡಿ ತಮ್ಮ “ಹರಿಜನ’ ಪತ್ರಿಕೆಯಲ್ಲಿ ಈ ರೀತಿ ವಿವರಿಸುತ್ತಾರೆ.

“ದಕ್ಷಿಣ ಭಾರತದ ಚಿಕ್ಕ ಸಂಸ್ಥಾನವಾದ ಸಂಡೂರು ಸಂಸ್ಥಾನ ಹರಿಜನರಿಗೆ ಗುಡಿಗಳ ಬಾಗಿಲು ತೆರೆದಿದೆ. ಇದರಿಂದ ಸ್ವರ್ಗವೇನು ಕೆಳಗಿ ಬೀಳಲಿಲ್ಲ’ ಎಂದು ಬರೆದರು. ಗಾಂಧೀಜಿಯವರ ಕನಸನ್ನು ಸಂಡೂರು ಸಂಸ್ಥಾನ ಸ್ವಾತಂತ್ರ್ಯ ಪೂರ್ವದಲ್ಲೇ ಜಾರಿಗೆ ತಂದಿತ್ತು. 1932ರಲ್ಲಿ ಸಂಡೂರು ಸಂಸ್ಥಾನದಲ್ಲಿ ನ್ಯಾಯಾಂಗ ವ್ಯವಸ್ಥೆ ಜಾರಿಗೆ ತಂದರು. ಬಳ್ಳಾರಿ ಜಿಲ್ಲಾ ನ್ಯಾಯಾಧಿಧೀಶರನ್ನು

ಸಂಡೂರು ಚೀಫ್‌ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಿದರೆಂಬುದು ಸಂಡೂರಿನ ಐತಿಹಾಸಿಕ ಅಂಶವಾಗಿದೆ. ಗಾಂಧಿಧೀಜಿಯವರ ಸ್ಮರಣೆಯ ನಿಮಿತ್ತ ಅಂದಿನ ಕರ್ನಾಟಕದ ರಾಜ್ಯಪಾಲರಾದ ಖುರ್ಷಿದ್‌ ಅಲಂಖಾನ್‌ ಅವರನ್ನು ಆಹ್ವಾನಿಸಿ ಪದ್ಮಭೂಷಣ ಪ್ರಶಸ್ತಿ ಪಡೆದ ಶಿಲ್ಪಿ ರಾಮಸುತಾರ್‌ ಅವರಿಂದ ತಯಾರಿಸಿದ ಬೃಹತ್‌ ಗಾಂಧೀಜಿಯವರ ಕಂಚಿನ ಮೂರ್ತಿಯನ್ನು ಗಾಂಧಿಧೀಜಿಯವರ 125ನೇ ಜನ್ಮದಿನ ಅಂಗವಾಗಿ 11ನೇ ಅಕ್ಟೋಬರ್‌ 1995ರಲ್ಲಿ ಪಟ್ಟಣದ ಆದರ್ಶ ಸಮುದಾಯ ಭವನದಲ್ಲಿ ಸ್ಥಾಪಿಸಲಾಯಿತು.

 

-ಬಸವರಾಜ ಬಣಕಾರ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.