ಜಾತ್ರೆಯಲ್ಲಿ ಸರಗಳ್ಳರ ಬಂಧನ
Team Udayavani, Mar 22, 2022, 1:08 PM IST
ಕುರುಗೋಡು: ಪೊಲೀಸರ ಮಿಂಚಿನ ದಾಳಿಯಿಂದ ಕುರುಗೋಡು ಜಾತ್ರೆಯಲ್ಲಿ ಮೂರು ಮಂದಿ ಮಹಿಳಾ ಸರಗಳ್ಳರನ್ನು ಶನಿವಾರ ಬಂಧಿಸಲಾಗಿದೆ.
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯವರಾದ ಸುಶೀಲಾ (55), ವಿಮಲಾ (55), ಉಷಾ (45)ಬಂಧಿತ ಮಹಿಳೆಯರು.
ಬಳ್ಳಾರಿಯ ಶಿಲ್ಪಾ ಎನ್ನುವವರು ಮಾ. 18ರಂದು ಕುರುಗೋಡು ಶ್ರೀ ದೊಡ್ಡಬಸವೇಶ್ವರ ಸ್ವಾಮಿಯ ಮಹಾರಥೋತ್ಸಕ್ಕೆ ಬಂದಾಗ ಅಪರಿಚಿತ ಹೆಂಗಸಿನ ಕೊರಳಲ್ಲಿದ್ದ ಅಂದಾಜು 80,000ರೂ. ಬೆಲೆಬಾಳುವ 20 ಗ್ರಾಂ ಬಂಗಾರದ ಮಾಂಗಲ್ಯ ಸರವನ್ನು ಕದ್ದು ತನ್ನ ಸಹಚರರೊಂದಿಗೆ ಪರಾರಿಯಾಗಿದ್ದರು.
ಈ ಕುರಿತು ಶಿಲ್ಪಾ ಮಾ.18ರಂದು ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿ ಪತ್ತೆಗಾಗಿ ಮೇಲಧಿಕಾರಿಗಳ ಮಾರ್ಗದರ್ಶನದಂತೆ, ಕುರುಗೋಡು ಪಿಎಸ್ಐ ಮೌನೇಶ್ ಯು.ರಾಥೋಡ್, ಸಿಪಿಐ ಚಂದನ್ಗೋಪಾಲ ನೇತೃತ್ವದಲ್ಲಿ ಸಿಬ್ಬಂದಿ ಮೂವರನ್ನು ಬಂಧಿಸಿದ್ದಾರೆ. ಕಳುವಾಗಿದ್ದ ಬಂಗಾರದ ಸರ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಒಂದು ಕಬ್ಬಿಣದ ಕಟರ್ ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
MUST WATCH
ಹೊಸ ಸೇರ್ಪಡೆ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ