ಬಳ್ಳಾರಿಯ ಸಣ್ಣ ದುರ್ಗಮ್ಮ ದೇಗುಲದಲ್ಲಿ ಕಳುವು
Team Udayavani, Aug 26, 2019, 11:03 AM IST
ಬಳ್ಳಾರಿ: ಇಲ್ಲಿನ ಪಟೇಲ್ ನಗರದಲ್ಲಿನ ಸಣ್ಣ ದುರ್ಗಮ್ಮ ದೇಗುಲದಲ್ಲಿ ಭಾನುವಾರ ನಡುರಾತ್ರಿ ಎರಡು ಗಂಟೆಯ ಸುಮಾರಿಗೆ ಕಳ್ಳತನ ನಡೆದಿದ್ದು, ಕಾಣಿಕೆ ಹುಂಡಿಯಲ್ಲಿನ ಹಣ ಸೇರಿ ದೇವಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಈ ದೇಗುಲಕ್ಕೆ ತಡರಾತ್ರಿ ನುಗ್ಗಿರುವ ಕಳ್ಳರು ದೇಗುಲದ ಹುಂಡಿಯನ್ನು ಒಡೆದು ಬಿಡಿಗಾಸು ಕಾಣಿಕೆ ಹಾಗೂ ದುರ್ಗಮ್ಮ ದೇವಿಗೆ ಅಲಂಕರಿಸುವ ಬೆಳ್ಳಿ ಮತ್ತು ಚಿನ್ನಾಭರಣ ದೋಚುತ್ತಿರುವ ಕಳ್ಳರ ಕೈಚಳಕದ ಸನ್ನಿವೇಶವು ದೇಗುಲದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬಳ್ಳಾರಿಯ ಪಟೇಲ್ ನಗರದಲ್ಲಿರೋ ಈ ದೇಗುಲಕ್ಕೆ ನುಗ್ಗಿದ ಕಳ್ಳರು ನಿನ್ನೆ ರಾತ್ರಿ ದೇವರ ಬೆಳ್ಳಿ , ಬಂಗಾರದ ಒಡವೆ ಸೇರಿದಂತೆ ಹುಂಡಿಯನ್ನು ಒಡೆದು ಹಣ ದೋಚಿದ್ದಾರೆ.
ಕಳ್ಳರ ಪ್ರತಿಯೊಂದು ಚಲನವಲವು ಸಿಸಿ ಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಆದ್ರೇ, ಮುಖಕ್ಕೆ ಬಟ್ಟೆ ಕಟ್ಟಿದ ಪರಿಣಾಮ ಕಳ್ಳರನ್ನು ಗುರುತಿಸುವುದು ಕಷ್ಟ ಎನ್ನಲಾಗುತ್ತಿದೆ.
ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಗಾಂಧಿನಗರ ಪೊಲೀಸರು ಶ್ವಾನ ದಳದೊಂದಿಗೆ ತಪಾಸಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್