farmers ಪಂಪ್ ಸೆಟ್ ಗಳ ಕಳ್ಳತನ : ಆರೋಪಿಗಳ ಬಂಧನ
Team Udayavani, Aug 19, 2023, 6:01 PM IST
ಕುರುಗೋಡು: ರೈತರು ತಮ್ಮ ಜಮೀನುಗಳಿಗೆ ನೀರಾವರಿ ಕಲ್ಪಿಸಿಕೊಳ್ಳಲು ಸಮೀಪದ ಸಿರಿಗೇರಿ ಗ್ರಾಮದಲ್ಲಿ ಅಳವಡಿಸಿದ್ದ 5 ಎಚ್. ಪಿಪಂಪ್ ಸೆಟ್ ಮೋಟರ್ ಗಳನ್ನು ಇಬ್ಬರು ಕಳ್ಳರು ಕಳ್ಳತನ ಮಾಡಿದ್ದು, ಆರೋಪಿಗಳನ್ನು ಸಿರಿಗೇರಿ ಪೊಲೀಸರು ಬಂಧಿಸಿದ್ದಾರೆ.
ಸಿರಿಗೇರಿ ಗ್ರಾಮದ ಜಡೆಪ್ಪ ಎಂಬ ರೈತರು ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ಲೂಬಿ ಕಂಪನಿಯ 5 ಎಚ್. ಪಿ ನೀರೇತ್ತುವ ಮನೋ ಬ್ಲಾಕ್ ಪಂಪ್ ಸೆಟ್ ಕಳುವಾದ ಬಗ್ಗೆ ಸಿರಿಗೇರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ದೂರಿನ ಅನ್ವಯ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಎಎಸ್ಪಿ ನಟರಾಜ್, ಡಿವೈಎಸ್ಪಿ ವೆಂಕಟೇಶ್, ತೆಕ್ಕಲಕೋಟೆ ಸಿಪಿಐ ಸುಂದರೇಶ್ ಅವರ ಮಾರ್ಗದರ್ಶನದಲ್ಲಿ ಸಿರಿಗೇರಿ ಪಿಎಸ್ ಐ ಸದ್ದಾಂ ಹುಸೇನ್ ಹೆಚ್. ಅವರ ನೇತೃತ್ವದಲ್ಲಿ ತಂಡ ರಚಿಸಿದ್ದು, ಸದರಿ ತಂಡವು ಈ ಪ್ರಕರಣವನ್ನು ಭೇದಿಸಿ ಸಿರಿಗೇರಿ ಗ್ರಾಮದ ಕೆ. ಮಾರುತಿ (20). ಕರಿಬಸವ (25) ಈ ಆರೋಪಿಗಳನ್ನು ಬಂಧಿಸಿ ಬಂದಿತರಿಂದ ವಿವಿಧ ಕಂಪನಿಗಳ 5 ಪಂಪ್ ಸೆಟ್ ಗಳ ಮೋಟರನ್ನು ಜಪ್ತಿ ಮಾಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸಿರಿಗೇರಿ ಪೊಲೀಸರು ತಿಳಿಸಿದ್ದಾರೆ.
ಈ ತಂಡದಲ್ಲಿ ಸಿರಿಗೇರಿ ಠಾಣೆಯ ಎಎಸ್ ಐ ಹೆಚ್. ಗಂಗಣ್ಣ, ಸಿಬ್ಬಂದಿಯಾದ ಉಮಾಶಂಕರ್, ಶಿವರಾಯಪ್ಪ, ಹುಲಿಕುಂಟೆಪ್ಪ, ಮಂಜುನಾಥ್, ರಮೇಶ್, ಚಂದ್ರಶೇಖರ, ರಾಮಕೃಷ್ಣ, ಪ್ರಭಾಕರ್, ವಿನೋದ್ ಗೌಡ, ರಂಗಣ್ಣ, ದಿವಾಕರ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ