ಭಗವದ್ಗೀತೆ ಪಠ್ಯಕ್ಕೆ ವಿರೋಧ ಇಲ್ಲ : ಖಾದರ್
Team Udayavani, Mar 20, 2022, 11:54 AM IST
ಬಳ್ಳಾರಿ: ಹೃದಯ ಶುದ್ಧಿ ಮಾಡುವ ಶಕ್ತಿ ಹೊಂದಿರುವ ಹಾಗೂ ನೈತಿಕ ಮೌಲ್ಯ ತುಂಬುವ ಧಾರ್ಮಿಕ ವಿಚಾರಧಾರೆ ತಿಳಿಸುವುದನ್ನು ಸ್ವಾಗತಿಸುತ್ತೇವೆ ಎಂದು ಕಾಂಗ್ರೆಸ್ ವಿಧಾನಸಭ ಉಪನಾಯಕ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಶಾಲೆಗಳಲ್ಲಿ ಭಗವದ್ಗೀತೆ ಪಠ್ಯ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜನರ ಹೃದಯ ಶುದ್ಧಿ ಮಾಡುವ, ಮಕ್ಕಳಲ್ಲಿ ನೈತಿಕತೆ ಬಿತ್ತುವ ಭಗವದ್ಗೀತೆ, ಕುರಾನ್, ಬೈಬಲ್, ಬಸವಣ್ಣನವರ ವಚನ, ನಾರಾಯಣ ಗುರುಗಳ ತತ್ವವನ್ನು ಬಿತ್ತುವ ಶಿಕ್ಷಣ ಕೊಡಿಸಬೇಕಿದೆ. ಹೀಗಾಗಿ ಶಾಲೆಯಲ್ಲಿ ಭಗವದ್ಗೀತೆ ಪ್ರವಚನ ಮಾಡಿಸುವುದರ ಕುರಿತು ಯಾವುದೇ ವಿರೋಧ ಇಲ್ಲ ಎಂದು ಸ್ಪಷ್ಟಪಡಿಸಿದರು.
ಶಾಲಾ-ಕಾಲೇಜುಗಳಲ್ಲಿ ಧರ್ಮಾಧಾರಿತ ಹಿಜಾಬ್ಗ ವಿರೋಧ ವ್ಯಕ್ತಪಡಿಸಿದ ಬಿಜೆಪಿಯವರು, ಪಠ್ಯಪುಸ್ತಕಗಳಲ್ಲಿ ಧರ್ಮಾಧಾರಿತ ಭಗವದ್ಗೀತೆಯನ್ನು ಹೇಗೆ ಪಠಿಸುತ್ತಾರೆ. ಒಳ್ಳೆಯದು ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಓಟ್ ಬ್ಯಾಂಕ್ಗಾಗಿ ಗೊಂದಲ ಸೃಷ್ಟಿಸಿ, ಸಮಾಜವನ್ನು ಸದಾ ಗೊಂದಲದಲ್ಲಿ ಇಡುವುದು ಸರಿಯಲ್ಲ. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯಗಳನ್ನು ಕಲಿಸುವುದು ಅಗತ್ಯವಿದೆ ಎಂದವರು ತಿಳಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಸಿದ್ದರಾಮಯ್ಯ ಮತ್ತೂಮ್ಮೆ ಮುಖ್ಯಮಂತ್ರಿ ಆಗುವುದು ಖಚಿತ ಎಂದರು.
ಹಿಜಾಬ್ ಹಿಂದೆ ಕಾಣದ ಕೈಗಳಿವೆ
ಹಿಜಾಬ್ ಸಂಬಂಧ ಹೈಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪಿನ ಘಟನೆ ಹಿಂದೆ ಕಾಣದ ಕೈಗಳಿವೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ವಕೀಲ ವೃತ್ತಿ ಜೀವನದಲ್ಲಿ ಇಂತಹ ತೀರ್ಪು ನೋಡಿಲ್ಲ. ಹೈಕೋರ್ಟ್ ಈ ರೀತಿ ಹೇಳಿದೆ ಎಂದರೆ ರಾಜ್ಯ-ಕೇಂದ್ರ ಸರ್ಕಾರಗಳಿಗೆ ಈ ಬಗ್ಗೆ ಏಕೆ ಮಾಹಿತಿ ಇರಲಿಲ್ಲ. ಗುಪ್ತಚರ ಇಲಾಖೆ ಏನು ಮಾಡುತ್ತಿದೆ. ಹಿಜಾಬ್ ವಿಷಯದಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದರು.
ಇದೊಂದು ಜೀವವಿಲ್ಲದ ಸರ್ಕಾರವಾಗಿದೆ ಎಂದು ಆರೋಪಿಸಿದ ಉಗ್ರಪ್ಪ, ರಾಜ್ಯ ಸರ್ಕಾರ ಸಮಾಜವನ್ನು ಒಡೆದು ಓಟ್ ಬ್ಯಾಂಕ್ ಮಾಡುವ ಕೆಲಸ ಮಾಡುತ್ತಿದೆ. ಹಿಜಾಬ್, ಭಗವದ್ಗೀತೆ, ಕಾಶ್ಮೀರ ಫೈಲ್ಸ್ ಚಿತ್ರಗಳಂತಹ ಭಾವನಾತ್ಮಕ ವಿಷಯಗಳಿಂದ ಜನರನ್ನು ಓಟ್ ಬ್ಯಾಂಕ್ ಮಾಡಿಕೊಳ್ಳಲು ಮುಂದಾಗಿದೆ. ಇದಕ್ಕೆ ಜನರೇ ತಕ್ಕ ಬುದ್ಧಿ ಕಲಿಸಲಿದ್ದಾರೆ ಎಂದರು.ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಕೆಪಿಸಿಸಿ ಮುಖಂಡ ಮಂಜುನಾಥ್, ಜಿಲ್ಲಾಧ್ಯಕ್ಷ ಜಿ.ಎಸ್. ಮಹ್ಮದ್ ರಫೀಕ್, ಯತೀಂದ್ರಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್