ಈ ಗೋಶಾಲೆ ಆ ದೇವರಿಗೆ ಪ್ರೀತಿ!


Team Udayavani, Aug 17, 2017, 2:14 PM IST

Untitled-1.jpg

ಕೂಡ್ಲಿಗಿ: ತಾಲೂಕಿನಲ್ಲಿ ಈ ಬಾರಿಯೂ ಮುಂಗಾರು ಕೈಕೊಟ್ಟ ಪರಿಣಾಮ ಮೇವಿನ ಕೊರತೆಯಿಂದಾಗಿ ಜಾನುವಾರುಗಳ ಮೂಕ ವೇದನೆ ಹೇಳತೀರದಾಗಿದೆ. ಗೋಶಾಲೆಗೆ ಅತಿ ಹೆಚ್ಚು ಸಂಖ್ಯೆಯಲ್ಲಿ ಬರುವ ಜಾನುವಾರುಗಳಿಗೆ ಮೇವು ಒದಗಿಸಲು ಪರದಾಡುವಂತಾಗಿದೆ.

ತಾಲೂಕಿನ ಗಂಡಬೊಮ್ಮನಹಳ್ಳಿ ಗೋಶಾಲೆಗೆ ಬರುವ ಜಾನುವಾರುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅವುಗಳಿಗೆ ಮೇವು ಪೂರೈಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗೋಶಾಲೆಯಲ್ಲಿ ಮೇವಿನ ಕೊರತೆ ಕಂಡು ಬರುತ್ತಿದ್ದು , ಹಸಿ ಮೇವು ಇಲ್ಲದೇ ಜಾನುವಾರುಗಳು ಕಂಗಾಲಾಗಿವೆ. ಹಸಿ ಮೇವು ನೀಡುವ ಮೂಲಕ ಇಲ್ಲಿನ ಗೋಶಾಲೆಯ ಜಾನುವಾರುಗಳು ಚೆನ್ನಾಗಿರುವಂತೆ ನೋಡಿಕೊಳ್ಳುವ ಹೊಣೆಗಾರಿಕೆ ಈಗ ಅ ಧಿಕಾರಿಗಳ ಮೇಲಿದೆ. ತಾಲೂಕಿನಲ್ಲಿರುವ ಏಕೈಕ ಗೋಶಾಲೆಯಲ್ಲಿ ಈ ಮೊದಲು ಸುಮಾರು 4300 ಜಾನುವಾರಗಳು ಇದ್ದವು. ಆದರೆ, ಕಳೆದೊಂದು ತಿಂಗಳಿಂದ ಇಲ್ಲಿಯವರೆಗೆ ಈಗ 7400 ಜಾನುವಾರುಗಳು ಗೋಶಾಲೆಗೆ ಬಂದಿವೆ. ಜಾನುವಾರುಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಪ್ರತಿನಿತ್ಯ 30 ಟನ್‌ ಮೇವು ಪೂರೈಕೆ ಮಾಡಲಾಗುತ್ತದೆ. ಗೋಶಾಲೆಯನ್ನು ತಿಂಗಳ ಕಾಲ ಮುಂದುವರಿಸಿದರೆ 900 ಟನ್‌ ಮೇವು ಅಗತ್ಯವಿದೆ. ಈಗಾಗಿ ಮೇವು ಪೂರೈಕೆ ಮಾಡುವುದು ಹೇಗೇ ಎಂಬುದು ಅಧಿ ಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ.

ತಾಲೂಕಿನ ಅತಿ ದೊಡ್ಡ ಕೆರೆಯಾದ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ನೀರು ಖಾಲಿಯಾಗಿರುವುದರಿಂದ ಗೋಶಾಲೆಗೆ ಈಗ ಕೊಳವೆಬಾವಿ ಮೂಲಕ ನೀರು ಪೂರೈಸಲಾಗುತ್ತಿದೆ. ಈಗ ಪ್ರಮುಖ ಸಮಸ್ಯೆ ಏನೆಂದರೆ ಗೋವುಗಳನ್ನು ನೋಡಿಕೊಳ್ಳುವವರಿಗೆ ಊಟದ ವ್ಯವಸ್ಥೆ ಕಳೆದೊಂದು ತಿಂಗಳಿಂದ ಸ್ಥಗಿತಗೊಳಿಸಲಾಗಿದೆ. ಮತ್ತು ಕರೆಂಟ್‌ ವ್ಯವಸ್ಥೆಯಿಲ್ಲದೆ ಕತ್ತಲಲ್ಲಿ ಕಾಲಕಳೆಯುವ ಪರಿಸ್ಥಿತಿ ರೈತರದ್ದಾಗಿದೆ. 10ಕ್ಕೂ ಹೆಚ್ಚು ಶೆಡ್‌ಗಳನ್ನು ನಿರ್ಮಿಸಿ ನೆರಳಿನ ವ್ಯವಸ್ಥೆ ಮಾಡಿಲಾಗಿದೆಯಾದರೂ ಇನ್ನೂ ಸಾವಿರಾರು ಜಾನುವಾರು ಬಿಸಿಲಿನಲ್ಲಿ ನಿತ್ಯವು ಬಸವಿಳಿಯುತ್ತಿವೆ. ಈ ಸಮಸ್ಯೆಗೆ ಜಾನುವಾರಗಳ ಹೆಚ್ಚಳವೇ ಪ್ರಮುಖ ಕಾರಣವಾಗಿದೆ ಎಂಬುದು ಅಧಿಕಾರಿಗಳ  ಉತ್ತರವಾಗಿದೆ.

ಸಂಗ್ರಹ ಕೊರತೆ: ಗೋಶಾಲೆಯಲ್ಲಿನ ಜಾನುವಾರುಗಳ ಮೇವು ಪೂರೈಕೆ ಮಾಡಲು ಹೊಸಪೇಟೆ, ಹಗರಿ ಮತ್ತು ಸಿರುಗುಪ್ಪದಲ್ಲಿ ಮೇವು ಬ್ಯಾಂಕ್‌ನಲ್ಲಿ ಮೇವು ಸಂಗ್ರಹ ಮಾಡಲಾಗಿತು. ಆದರೆ, ಅಲ್ಲೂ ಸಹ ಮೇವು ಸಾವಿರಾರು ಟನ್‌ ಮೇವು ಇಲ್ಲಿಗೆ ಪೂರೈಕೆ ಮಾಡಿರುವ ಕಾರಣ ಮೇವಿನ ಸಂಗ್ರಹಗದಲ್ಲಿ ಕೊರತೆಯಾಗಿದೆ. ಹೀಗಾಗಿ ಅಗತ್ಯ ಮೇವು ಪೂರೈಕೆ ಮಾಡಲು ಸಮಸ್ಯೆಯಾಗಿದೆ. ಅಲ್ಲದೆ, ಮೇವು ಪೂರೈಕೆ ಮಾಡುವ ಪ್ರಯತ್ನ ಅಧಿಕಾರಿಗಳು ಮುಂದುವರಿಸಿದ್ದಾರೆ. ಮುಂಗಾರು ಮಳೆ ಆರಂಭದಿಂದ ಇಲ್ಲಿಯವರೆಗೆ ಮಳೆಯಾಗದಿರುವುದರಿಂದ ಜಾನುವಾರಗಳಿಗೆ
ಸ್ಥಳೀಯವಾಗಿ ಮೇವು ಸಿಗುತ್ತಿಲ್ಲ. ಹೀಗಾಗಿ ಗೋಶಾಲೆಯನ್ನು ಸರ್ಕಾರ ಮುಂದುವರಿಸಬೇಕು. ಅಲ್ಲದೇ ಇಲ್ಲಿಯವರೆಗೂ ನಾಲ್ಕೈದು ತಿಂಗಳು ಇಲ್ಲಿನ ಗೋಶಾಲೆಯ ಜಾನುವಾರುಗಳು ಒಣಮೇವು ತಿಂದು ಬಡಕಲಾಗಿವೆ. ಈಗ ನದಿ ದಡ ಇರುವ ಪ್ರದೇಶದ ಕಡೆ ಮಳೆಯಾಗಿರುವ ಕಡೆ ಹಸಿ ಮೇವು ಸಿಗುತ್ತದೆ. ಇಲ್ಲಿನ ಜಾನುವಾರುಗಳಿಗೆ ಹಸಿ ಮೇವು ಪೂರೈಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗಂಡಬೊಮ್ಮನಹಳ್ಳಿ ಗ್ರಾಮದ ರೈತ ಪಾಪಯ್ಯ ಆಗ್ರಹಿಸಿದ್ದಾರೆ.

ಗೋಶಾಲೆಯಲ್ಲಿನ ಜಾನುವಾರುಗಳಿಗೆ ಮೇವು ಕೊರತೆ ಬಾರದಂತೆ ನೋಡಿಕೊಳ್ಳುತ್ತಿದ್ದೇವೆ. ಜಾನುವಾರುಗಳಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಜಾನುವಾರುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಶೆಡ್‌ ಸಾಲುತ್ತಿಲ್ಲ. ಇನ್ನೂ 5 ಶೆಡ್‌ ನಿರ್ಮಿಸಲು ಸೂಚಿಸಲಾಗಿದೆ. ಮೇಲಾ  ಧಿಕಾರಿಗಳ ಆದೇಶ ಬರುವವರಿಗೂ ಗೋಶಾಲೆ ಮುದುವರಿಸಲಾಗುವುದು. ರೈತರು ಆತಂಕ ಪಡುವ ಅಗತ್ಯವಿಲ್ಲ. 
ಎಲ್‌.ಕೃಷ್ಣಮೂರ್ತಿ ತಹಶೀಲ್ದಾರ್‌, ಕೂಡ್ಲಿಗಿ.

ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಸಮಾರ್ಪಕ ಮೇವು, ನೀರು ಪೂರೈಸಲಾಗಿದೆ. ಪ್ರಸುತ್ತ ನಿತ್ಯ 30 ಟನ್‌ ಮೇವು ವಿತರಿಸುತ್ತಿದ್ದು, ಸೊಪ್ಪೆ ಮತ್ತು ಭತ್ತದ ಮೇವು ಸಂಗ್ರಹವಿದೆ. ಜಾನುವಾರುಗಳ ನಿತ್ಯ ಆರೋಗ್ಯ ತಪಾಸಣೆ
ಮಾಡಲಾಗುತ್ತಿದ್ದು, ಪಶುವೈದ್ಯ ಕೇಂದ್ರ ತೆರೆಯಲಾಗಿದೆ. ಅಗತ್ಯ ಮೇವು ಮೇವಿನ ಬ್ಯಾಂಕಿನಿಂದ ಬರುತ್ತದೆ. ಸ್ವತ್ಛತೆಗೆ ಒತ್ತು ನೀಡಲಾಗಿದೆ. 
ಯಜಮಾನಪ್ಪ, ಕಂದಾಯ ನಿರೀಕ್ಷಕ, ಗೋಶಾಲೆ ಉಸ್ತುವಾರಿ ಅಧಿಕಾರಿ

ಕೆ.ನಾಗರಾಜ 

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.