ಬಳ್ಳಾರಿಯಲ್ಲಿ ಮೂವರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ
Team Udayavani, Apr 23, 2020, 12:00 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿನ 13 ಕೋವಿಡ್-19 ವೈರಸ್ ಸೋಂಕಿತರ ಪೈಕಿ ಹೊಸಪೇಟೆಯ ಮೂವರು ಸೋಂಕಿತರನ್ನು ನಗರದ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಬಿಡುಗಡೆಗೊಳಿಸಿ ಮನೆಗೆ ಕಳುಹಿಸಿದರು.
ಹೊಸಪೇಟೆ ನಗರದ ಎಸ್.ಆರ್.ನಗರದ ಒಂದೇ ಕುಟುಂಬದ 11 ಜನರಲ್ಲಿ ಕೋವಿಡ್ 19 ಪತ್ತೆಯಾಗಿದ್ದು, ಈ ಪೈಕಿ ಮಾ.30 ರಂದು ದೃಢಪಟ್ಟಿದ್ದ ಪಿ.89, ಪಿ.91, 141 ಸೋಂಕಿತರು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಹಿನ್ನೆಲೆಯಲ್ಲಿ ಈ ಮೂವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯಾಧಿಕಾರಿ ಡಾ.ಜನಾರ್ಧನ್, ಜಿಲ್ಲಾ ಶಸ್ತ್ರತಜ್ಞ ಡಾ.ಬಸಾರೆಡ್ಡಿ, ತಹಶೀಲ್ದಾರ್ ಯು.ನಾಗರಾಜ್, ವಿಮ್ಸ್ ನಿರ್ದೇಶಕ ಡಾ.ದೇವಾನಂದ್ ಅವರು ಹೂಗುಚ್ಛ, ಸಿಹಿ ತಿನಿಸು, ಸಸಿಗಳನ್ನು ನೀಡಿ ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಬಿಡುಗಡೆಗೊಳಿಸಿದರು.
ಈ ವೇಳೆ ಪಿ.91 ರೋಗಿ ಮಾತನಾಡಿ, ಕಳೆದ ಮಾರ್ಚ್ 25 ರಂದು ಶಂಕಿತ ಕೋವಿಡ್ 19 ನಿಂದ ನಮ್ಮನ್ನು ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಕೋವಿಡ್ 19 ಪಾಸಿಟಿವ್ ಇದೆ ಎಂದಾಕ್ಷಣ ಮೊದಲು ಭಯ, ಆತಂಕ ನಮ್ಮನ್ನು ಕಾಡಿತು. ಆದರೆ, ಆಸ್ಪತ್ರೆಯಲ್ಲಿನ ವೈದ್ಯರು, ಸಿಬ್ಬಂದಿಗಳು ಅಧಿಕಾರಿಗಳು ನಮ್ಮನ್ನು ಉತ್ತಮವಾಗಿ ನೋಡಿಕೊಂಡರು. ಇದರಿಂದ ನಮಗೆ ಧೈರ್ಯ ಬಂತು. ಇದರಿಂದ ಯಾರು ಭಯ ಪಡುವ ಅಗತ್ಯವಿಲ್ಲ. ಆದರೆ, ನಿರ್ಲಕ್ಷ್ಯ ವಹಿಸುವುದು ಬೇಡ ಎಂದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಸಾರೆಡ್ಡಿ ಮಾತನಾಡಿ, ಕೋವಿಡ್-19 ವೈರಸ್ ಇತರರಿಗೆ ಹರಡುವ ಹಿನ್ನೆಲೆಯಲ್ಲಿ ಇದನ್ನು ನಿರ್ಲಕ್ಷಿಸುವಂತಿಲ್ಲ. ಮೇಲಾಗಿ ಸೋಂಕಿತ ರೋಗಿಗಳು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ಬೇಗ ಗುಣಮುಖರಾಗಿದ್ದಾರೆ ಎಂದರು.
ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಲ್.ಜನಾರ್ಧನ್, ವಿಮ್ಸ್ ನಿರ್ದೇಶಕ ಡಾ.ದೇವಾನಂದ್, ಡಾ.ಮರಿಯಂಬಿ, ಡಾ.ಅನೀಲ್ ಕುಮಾರ್, ಡಾ.ಇಂದ್ರಾಣಿ, ಶುಶ್ರೂಷಕಿ ಅಧೀಕ್ಷಕಿ ಶಾತಾಬಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್