ಕ್ರೈಸ್ತ ಮಷಿನರಿಯಿಂದ ಶೌಚಾಲಯ ಕ್ರಾಂತಿ


Team Udayavani, Apr 2, 2018, 4:47 PM IST

bell-2.jpg

ಬಳ್ಳಾರಿ: ಅರ್ಜಿ ಸಲ್ಲಿಸಿದ್ದರೂ ಮನೆಗೊಂದು ಶೌಚಾಲಯ ನಿರ್ಮಿಸಿಕೊಡದ ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಬೇಸತ್ತ
ಇಲ್ಲಿನ ಗೌತಮ್‌ ನಗರ ನಿವಾಸಿಗಳು ಕ್ರೈಸ್ತ ಮಷಿನರಿಗಳ ಮೊರೆ ಹೋಗಿದ್ದಾರೆ. ಕೇವಲ ನಾಲ್ಕು ಸಾವಿರ ರೂ.ಪಾವತಿಸಿ, ಸಾವಿರಾರು ರೂ. ಮೌಲ್ಯದ ಸುಸಜ್ಜಿತ ಶೌಚಾಲಯ ನಿರ್ಮಿಸಿಕೊಂಡಿರುವ ನಿವಾಸಿಗಳು, ಪಾಲಿಕೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹುಬ್ಬೇರಿಸು ವಂತೆ ಮಾಡಿದ್ದಾರೆ.

ಬಯಲು ಬಹಿರ್ದೆಸೆಯನ್ನು ನಿರ್ಮೂಲನೆ ಮಾಡುವ ಹಾಗೂ ಎಲ್ಲೆಡೆ ಸ್ವತ್ಛತೆ ಕಾಪಾಡುವ ಸಲುವಾಗಿ ನಿರ್ಮಲ ಭಾರತ್‌, ಸ್ವತ್ಛ ಭಾರತ್‌ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಯೋಜನೆ ಅನುಷ್ಠಾನಕ್ಕೆ ಸಾಕಷ್ಟು ಅನುದಾನವನ್ನೂ ನೀಡಲಾಗುತ್ತಿದ್ದು, ಮನೆಗೊಂದು ಪ್ರತ್ಯೇಕ ಶೌಚಾಲಯ ನಿರ್ಮಿಸಿಕೊಂಡರೆ, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ತಲಾ ಇಂತಿಷ್ಟು ಹಣ ಫಲಾನುಭವಿ ಖಾತೆಗೆ ಜಮಾಗೊಳ್ಳಲಿದೆ. ಆದರೆ, ಇಲ್ಲಿನ ಗೌತಮನಗರ ನಿವಾಸಿಗಳು 2013-14, 2014-15ರಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಪಾಲಿಕೆಗೆ ಅರ್ಜಿ ಸಲ್ಲಿಸಲಾಗಿತ್ತು. ಜತೆಗೆ ಸ್ಥಳೀಯ ಪಾಲಿಕೆ ಸದಸ್ಯರು, ನಗರ ಶಾಸಕರ ಗಮನಕ್ಕೂ ತರಲಾಗಿತ್ತು. ಯಾರೊಬ್ಬರೂ ಎಚ್ಚೆತ್ತುಕೊಳ್ಳಲಿಲ್ಲ. ಹೀಗಾಗಿ ನಿವಾಸಿಗಳು ಕೈಸ್ತ ಮಷಿನರಿ ಮೊರೆ ಹೋಗಿದ್ದಾರೆ.

ಆಟೋ ಚಾಲಕರು, ಕೂಲಿ ಕಾರ್ಮಿಕರೇ ಅಧಿಕ ಸಂಖ್ಯೆಯಲ್ಲಿ ವಾಸಿಸುತ್ತಿರುವ ಗೌತಮ ನಗರದಲ್ಲಿನ ಮಹಿಳೆಯರು ಬಹಿರ್ದೆಸೆಗೆ ರಸ್ತೆ ಬದಿಗಳನ್ನೇ ಆಶ್ರಯಿಸಿದ್ದಾರೆ. ಮೇಲಾಗಿ ರಾತ್ರಿ ಹೊತ್ತಲ್ಲಿ ಮಾತ್ರ ಬಹಿರ್ದೆಸೆಗೆ ತೆರಳಬೇಕಿದ್ದು, ವಾತಾವರಣ ಸರಿಯಿಲ್ಲದ್ದರಿಂದ ವಾಪಸ್‌ ಬರುವವರೆಗೂ ದಾರಿ ಕಾಯಬೇಕಾದ ಪರಿಸ್ಥಿತಿಯಿದೆ. ಹೀಗಾಗಿ ಮನೆಗೊಂದು ಶೌಚಾಲಯ ನಿರ್ಮಾಣ ಅನಿವಾರ್ಯವಾಗಿದೆ. ಈ ಬಗ್ಗೆ ಪಾಲಿಕೆ ಅಧಿಕಾರಿ, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳದ್ದರಿಂದ ಕ್ರೈಸ್ತ ಮಷಿನರಿ ಕ್ಯಾಥೋಲಿಕ್‌ ಚರ್ಚ್‌ ಮೊರೆ ಹೋಗಿತ್ತು. ಧರ್ಮಾಧ್ಯಕ್ಷ ಡಾ| ಹೆನ್ರಿ ಡಿಸೋಜಾರಿಗೂ ಮನವಿ ಸಲ್ಲಿಸಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಡಿಸೋಜಾ, ತಮ್ಮ ಸಿಬ್ಬಂದಿ ಕಳುಹಿಸಿ, ನಮ್ಮಿಂದ ಒಳಚರಂಡಿ ಗುಂಡಿ ಅಗೆಯಲು 4 ಸಾವಿರ ರೂ. ಮತ್ತು ಆಧಾರ್‌ಕಾರ್ಡ್‌ ಪಡೆದರು. ಕೆಲವೇ ದಿನಗಳಲ್ಲಿ 4×6 ಅಡಿ ಅಳತೆಯಲ್ಲಿ ಸುಸಜ್ಜಿತ ಮತ್ತು ಗುಣಮಟ್ಟದ ಶೌಚಾಲಯ ನಿರ್ಮಿಸಿ, ಬಣ್ಣವನ್ನೂ ಬಳಿದುಕೊಟ್ಟಿದ್ದಾರೆ ಎನ್ನುತ್ತಾರೆ ಫಲಾನುಭವಿ ಸುಧಾಕರ್‌, ಕೃಷ್ಣಾನಾಯ್ಕ.

ಗೌತಮ್‌ ನಗರದಲ್ಲಿ ಒಟ್ಟು 35ಕ್ಕೂ ಹೆಚ್ಚು ಮನೆಗಳಿಗೆ ಶೌಚಾಲಯ ನಿರ್ಮಿಸಿಕೊಟ್ಟಿದ್ದು, ಪ್ರತಿಯೊಂದಕ್ಕೆ 23,500 ರೂ.ಗಳಂತೆ ಅಂದಾಜು 8 ಲಕ್ಷರೂ. ವೆಚ್ಚ ಮಾಡಲಾಗಿದೆ. ಪ್ರತಿ ಶೌಚಾಲಯಕ್ಕೂ ಚಾಲೀಸ್‌ ಸಿಸ್ಟರ್ ಆಫ್‌ ದಿ ಗುಡ್‌ ಶೆಫೆರ್ಡ್‌ ಎಂಬ ನಾಮಫಲಕ ಅಳವಡಿಸಲಾಗಿದೆ.

ಈಗಾಗಲೇ 35ಕ್ಕೂ ಹೆಚ್ಚು ಶೌಚಾಲಯ ನಿರ್ಮಿಸಿಕೊಟ್ಟಿರುವ ಕ್ರೈಸ್ತ ಮಷಿನರಿಗೆ ಇದೀಗ ಪುನಃ 160ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಹಂತ ಹಂತವಾಗಿ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದೆ. ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ಅಲೆದಾಡುವುದಕ್ಕಿಂತ, ಇಂಥಹ ಸಂಸ್ಥೆಗೆ ಅರ್ಜಿ ಸಲ್ಲಿಸಿ, ಶೌಚಾಲಯ ನಿರ್ಮಿಸಿಕೊಳ್ಳುವುದು ಲೇಸು ಎಂಬುದು ಸ್ಥಳೀಯ ನಿವಾಸಿಗಳದ್ದು. 

ಮಹಿಳೆಯರ ಪರಿಸ್ಥಿತಿ ಹೇಳತೀರದಾಗಿದೆ. ಮಹಿಳೆಯರು ಬಹಿರ್ದೆಸೆಗೆ ಬೆಳಗಿನ ಜಾವ ಅಥವಾ ರಾತ್ರಿ ವೇಳೆಯಲ್ಲಿ ತೆರಳಬೇಕಾದ ಪರಿಸ್ಥಿತಿ ಇದೆ. ಈ ಸಮಸ್ಯೆ ಬಗ್ಗೆ ಗಮನಕ್ಕಿದ್ದರೂ ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಕಿಂಚಿತ್ತೂ ಅರ್ಥ ಮಾಡಿಕೊಳ್ಳಲಿಲ್ಲ. ಕೇವಲ ಚುನಾವಣೆ ಬಂದಾಗ ಮಾತ್ರ ಮತಕ್ಕಾಗಿ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು, ಸೌಲಭ್ಯ ಕೇಳಿದರೆ ನುಣುಚಿಕೊಳ್ಳುತ್ತಾರೆ. ಸುಧಾಕರ್‌, ಸ್ಥಳೀಯ ನಿವಾಸಿ 

ವಿಶೇಷ ವರದಿ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.