ರೈಲು ಸಂಚಾರ ಕನಸು ನನಸು
Team Udayavani, Sep 17, 2019, 1:20 PM IST
ಹೊಸಪೇಟೆ: ನಗರದಿಂದ ಕೊಟ್ಟೂರುವರೆಗೆ ರೈಲ್ವೆ ಸುರಕ್ಷತಾ ಅಧಿಕಾರಿಗಳು ಟ್ರಾಲಿಗಳ ಮೂಲಕ ಹಳಿ ಸುರಕ್ಷತಾ ಪರಿಶೀಲನೆ ಕಾರ್ಯ ಆರಂಭಿಸಿದರು.
ಹೊಸಪೇಟೆ: ಹೊಸಪೇಟೆ-ಕೊಟ್ಟೂರು ರೈಲು ಸಂಚಾರಕ್ಕೆ ದಿನಗಣನೆ ಆರಂಭವಾಗಿದ್ದು, ಈ ಭಾಗದ ಜನರ ಎರಡು ದಶಕಗಳ ಹೋರಾಟದ ಬಳಿಕ ಕೊಟ್ಟೂರು-ಹೊಸಪೇಟೆ ರೈಲು ಸಂಚಾರಕ್ಕೆ ಶುಭಾರಂಭ ದೊರೆಯುವ ಎಲ್ಲ ಸಾಧ್ಯತೆಗಳಿದ್ದು ಸೆ. 21ರಂದು ಚಾಲನೆ ಸಿಗಲಿದೆ ಎಂಬ ವಿಶ್ವಾಸ ಗರಿಗೆದರಿದೆ.
ಈಗಾಗಲೇ ರೈಲ್ವೆ ಇಲಾಖೆ ಅಧಿಕಾರಿಗಳು ರೈಲ್ವೆ ಸಂಚಾರದ ‘ಗ್ರೀನ್ ಸಿಗ್ನಲ್’ ತೋರಿಸಿದ್ದಾರೆ. ಹೀಗಾಗಿ ರೈಲ್ವೆ ಸಂಚಾರಕ್ಕಾಗಿ ಈವರೆಗೆ ನಡೆಸಿದ ಹೋರಾಟಕ್ಕೆ ಫಲ ನೀಡಿದಂತಾಗಿದೆ. ಪ್ಯಾಸೆಂಜರ್ ರೈಲು ಓಡಾಟ ಆರಂಭಿಸುವುದರಿಂದ ಪೂರಕ ಕಾಮಗಾರಿಗಳು ಚುರುಕುಗೊಂಡಿವೆ. ರೈಲ್ವೆ ನಿಲ್ದಾಣದ ಅಭಿವೃದ್ಧಿ ಸೇರಿದಂತೆ ಪ್ರಯಾಣಿಕರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವ ದಿಸೆಯ ಕೆಲಸಗಳು ಭರದಿಂದ ನಡೆದಿವೆ. ತುಂಗಭದ್ರಾ ಡ್ಯಾಂ ನಿಲ್ದಾಣ, ವ್ಯಾಸನಕೆರೆ ನಿಲ್ದಾಣ, ಹಗರಿಬೊಮ್ಮನಹಳ್ಳಿ ನಿಲ್ದಾಣದಲ್ಲಿ ಕಟ್ಟಡಗಳಿಗೆ ವಿದ್ಯುತ್ ಅಳವಡಿಕೆ ಕಾರ್ಯ ನಡೆದಿದೆ. ಉಳಿದಂತೆ ಹೊಸಪೇಟೆಯಿಂದ ಕೊಟ್ಟೂರುವರೆಗೆ ಸಾಗುವ ದಾರಿ ಮಧ್ಯದಲ್ಲಾಗಬೇಕಾದ ಕಾಮಗಾರಿಗಳು ಚುರುಕಾಗಿದ್ದು ಪ್ಲಾಟ್ಫಾರಂ, ಹೈಟೆಷನ್ ತಂತಿ ಸ್ಥಳಾಂತರ ಕೆಲಸ ಬಹುತೇಕ ಪೂರ್ಣಗೊಂಡಿದೆ.
ಹೊಸಪೇಟೆಯಿಂದ ಕೊಟ್ಟೂರುವರೆಗೆ ರೈಲು ಸಂಚಾರ ಆರಂಭಿಸುತ್ತಿರುವುದು ಅತ್ಯಂತ ಸಂತಸದ ಸಂಗತಿಯಾಗಿದ್ದು, ನಿರಂತರ ಹೋರಾಟಕ್ಕೆ ಪ್ರತಿಫಲ ಸಿಕ್ಕಂತಾಗಿದೆ ಎನ್ನುತ್ತಾರೆ ರೈಲ್ವೆ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಎಂ. ಮಹೇಶ್ವರಸ್ವಾಮಿ. ರೈಲು ಸಂಚಾರದಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ರೈಲನ್ನು ಬಳ್ಳಾರಿಯಿಂದ ಓಡಾಡಿಸುವಂತಾಗಬೇಕು ಎಂಬುದು ಈ ಭಾಗದ ಜನರ ಒತ್ತಾಸೆಯಾಗಿದೆ ಎನ್ನುತ್ತಾರೆ. ಮೊದಲು ಹೊಸಪೇಟೆ ಹಾಗೂ ಕೊಟ್ಟೂರು ರೈಲು ಸಂಚಾರ ಶುರುವಾಗಲಿ. ನಂತರ ಇದನ್ನು ವಿಸ್ತರಿಸುವುದು ಕಷ್ಟವಲ್ಲ. ಬಳ್ಳಾರಿ ಜಿಲ್ಲೆ ರೈಲ್ವೆ ಇಲಾಖೆಗೆ ಅತಿ ಹೆಚ್ಚು ಆದಾಯವನ್ನು ನೀಡಿದ ಜಿಲ್ಲೆ. ದಕ್ಷಿಣ ಮಧ್ಯ ರೈಲ್ವೆಗೆ ಬಳ್ಳಾರಿ ಕೊನೆಯ ಪಾಂಯಿಂಟ್ ಆಗಿದೆ. ಹೀಗಾಗಿ ಬಳ್ಳಾರಿಗೆ ಈ ರೈಲು ವಿಸ್ತರಣೆಯಾದರೆ ಬಳ್ಳಾರಿಯಿಂದ ಹೊಸಪೇಟೆಗೆ ನಿತ್ಯ ಸಾವಿರಾರು ಜನರು ಓಡಾಡುತ್ತಿದ್ದು, ಅವರಿಗೆ ಅನುಕೂಲವಾಗಲಿದೆ. ಬಳ್ಳಾರಿಯಿಂದ ನೇರವಾಗಿ ಕೊಟ್ಟೂರಿಗೆ ತೆರಳುವ ಪ್ರಯಾಣಿಕರ ಸಹ ಹೆಚ್ಚಿನ ಅನುಕೂಲವಾಗಿದೆ ಎಂದು ಮಹೇಶ್ವರ ಸ್ವಾಮಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ