ತುಂಗಭದ್ರಾ ಜಲಾಶಯ ಭರ್ತಿ: 6635 ಕ್ಯೂಸೆಕ್ ನೀರು ನದಿಗೆ
Team Udayavani, Jul 25, 2021, 5:03 PM IST
ಬಳ್ಳಾರಿ (ಹೊಸಪೇಟೆ): ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಭಾನುವಾರ ಭರ್ತಿಯಾಗಿದ್ದು, ಹೆಚ್ವುವರಿ 6635 ಕ್ಯೂಸೆಕ್ ನೀರನ್ನು 10 ಕ್ರಷ್ಟ್ ಗೇಟ್ ಗಳನ್ನು ತೆರೆಯುವ ಮೂಲಕ ನದಿಗೆ ಹರಿಸಲಾಯಿತು.
ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಎಡಬಿಡದೇ ಸುರಿಯುತ್ತಿರುವ ಆಧಿಕ ಮಳೆಯ ಪರಿಣಾಮ ಶಿವಮೊಗ್ಗ ಜಿಲ್ಲೆಯ ತುಂಗ ಹಾಗೂ ಭದ್ರಾ ಜಲಾಶಯ ಎರಡೂ ಭರ್ತಿಯಾದ ಹಿನ್ನಲೆಯಲ್ಲಿ ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗಿದೆ. ಹೀಗಾಗಿ ಜಲಾಶಯದ ಒಳ ಹರಿವು ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಇದನ್ನೂ ಓದಿ: ‘ಭಜರಂಗಿ ಭಾಯಿಜಾನ್’ ಗೆ ನಿರ್ದೇಶನ ಮಾಡಲು ರಾಜಮೌಳಿ ‘ನೋ’ ಎಂದಿದ್ದೇಕೆ ?
ಶನಿವಾರವೇ ಜಲಾಶಯದ ಒಳ ಹರಿವು 1.20 ಲಕ್ಷ ಕ್ಯೂಸೆಕ್ ದಾಟಿದ ಪರಿಣಾಮ ಡ್ಯಾಂನಿಂದ ನದಿಗೆ ಹೆಚ್ಚುವರಿ ನೀರು ಹರಿಬಿಡುವ ಸೂಚನೆ ನೀಡಿದ್ದ ತುಂಗಭದ್ರಾ ಮಂಡಳಿ ಮುಂಜಾಗ್ರತ ಕ್ರಮವಾಗಿ ನದಿಪಾತ್ರದ ಜನ-ಜಾನುವಾರುಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಎಚ್ಚರಿಕೆ ನೀಡಿತ್ತು.
ಸದ್ಯ ಜಲಾಶಯದ ಒಳ ಹರಿವು 1.73 ಲಕ್ಷ ಕ್ಯೂಸೆಕ್ ಹರಿದು ಬರುತ್ತಿದೆ. 103 ಟಿಎಂಸಿ ಸಾಮಾರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತ 83.277 ಟಿಎಂಸಿ ನೀರು ಸಂಗ್ರಹವಿದೆ. ಗರಿಷ್ಠ ಮಟ್ಟ 1633 ಅಡಿಗಳು ಇದ್ದು, ಇಂದಿನ ಮಟ್ಟ 1628.15 ಅಡಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್