ಬಳ್ಳಾರಿಯಲ್ಲಿ ಬಾಡಿಗೆ ಮನೆ ಪ್ರವೇಶಿಸಿದ ಉಗ್ರಪ್ಪ
Team Udayavani, Oct 20, 2018, 6:25 AM IST
ಬಳ್ಳಾರಿ: ಲೋಕಸಭೆ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರು ಬಳ್ಳಾರಿಯಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದು, ವಿಜಯದಶಮಿಯಂದು ಗೃಹಪ್ರವೇಶ ಮಾಡಿದ್ದಾರೆ.
ಉಗ್ರಪ್ಪ ಹೊರಗಿನವರು, ಅಡ್ರೆಸ್ ಇಲ್ಲದವರು ಎಂದು ಬಿಜೆಪಿಯವರ ಆರೋಪಕ್ಕೆ ಗುರಿಯಾಗಿದ್ದ ವಿ.ಎಸ್. ಉಗ್ರಪ್ಪ, ಮನೆ ಮಾಡಲು ನಿರ್ಧರಿಸಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಅಲ್ಲದೆ ವಿಜಯ ದಶಮಿಯಂದು ಗೃಹಪ್ರವೇಶ ಮಾಡುವ ಮೂಲಕ ಪ್ರತಿಸ್ಪರ್ಧಿ ಮತ್ತವರ ಬೆಂಬಲಿಗರ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ಇಲ್ಲಿನ ಕಪ್ಪಗಲ್ ರಸ್ತೆಯ ಸರ್.ಎಂ.ವಿಶ್ವೇಶ್ವರಯ್ಯ ನಗರದ 1ನೇ ಅಡ್ಡರಸ್ತೆಯಲ್ಲಿರುವ ಎರಡು ಅಂತಸ್ತಿನ ಮನೆಯನ್ನು ಬಾಡಿಗೆಗೆ ಪಡೆದು ಇಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, “ನಾನು ಇನ್ಮುಂದೆ ಇಲ್ಲೇ ಇರುವೆ. ಅಡ್ರೆಸ್ ಇಲ್ಲದವರು ಎನ್ನುತ್ತಿದ್ದವರಿಗೆ ಅಡ್ರೆಸ್ ತಿಳಿಸುವ ಕಾರಣಕ್ಕೆ ಮನೆಯನ್ನು ಬಾಡಿಗೆಗೆ ಪಡೆದಿದ್ದೇನೆ. ಇನ್ಮುಂದೆ ನನಗೆ ಇಲ್ಲಿಯದೇ ಅಡ್ರೆಸ್. ಚುನಾವಣೆಯಲ್ಲಿ ಸೋತರೂ ಇಲ್ಲೇ ಇರುವೆ. ನನ್ನ ಪ್ರವಾಸ ಬಳ್ಳಾರಿಯತ್ತ ಕಡ್ಡಾಯವಾಗಿ ಇದ್ದೇ ಇರುತ್ತದೆ’ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್