ಅನಧಿಕೃತ ಜಾಹೀರಾತು ಫಲಕ ತೆರವು; ಸ್ಥಾಯಿ ಸಮಿತಿ

ಅನಧಿಕೃತ ಫಲಕಗಳನ್ನು ತೆರವುಗೊಳಿಸಲಾಗುವುದು

Team Udayavani, Dec 15, 2022, 6:19 PM IST

ಅನಧಿಕೃತ ಜಾಹೀರಾತು ಫಲಕ ತೆರವು; ಸ್ಥಾಯಿ ಸಮಿತಿ

ಬಳ್ಳಾರಿ: ಇಲ್ಲಿನ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ರಸ್ತೆ, ವೃತ್ತಗಳಲ್ಲಿ ಅನ ಧಿಕೃತವಾಗಿ ಅಳವಡಿಸಿರುವ ಜಾಹೀರಾತು ಫಲಕಗಳನ್ನು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಬುಧವಾರ ತೆರವುಗೊಳಿಸಿತು.

ನಗರದ ಸಂಗಮ್‌ ವೃತ್ತದಲ್ಲಿ ಜೆಸಿಬಿಯೊಂದಿಗೆ ತೆರವು ಕಾರ್ಯಾಚರಣೆಗಿಳಿದ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಮಾಂಜಿನಿ, ಸದಸ್ಯ ಮುಂಡ್ಲೂರು ಪ್ರಭಂಜನ್‌, ಸದಸ್ಯ ಮುಲ್ಲಂಗಿ ನಂದೀಶ್‌, ಪಾಲಿಕೆ ಅ ಧಿಕಾರಿಗಳಾದ ಕಿರಣ್‌, ಶ್ರೀನಿವಾಸ್‌, ಹರ್ಷವರ್ಧನ್‌ ಇತರರು ವೃತ್ತದಲ್ಲಿ ಅನ ಧಿಕೃತವಾಗಿ ಅಳವಡಿಸಿದ್ದ ನಾಲ್ಕು ಫಲಕ ತೆರವುಗೊಳಿಸುವ ಮೂಲಕ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದರು.

ಪಾಲಿಕೆಯಿಂದ ಅನುಮತಿ ಪಡೆದು ಅಳವಡಿಸಿರುವ ಅಧಿಕೃತ ನಾಮಫಲಕಗಳಷ್ಟೇ ಶೇ.50ರಷ್ಟು ಅನಧಿಕೃತ ನಾಮಫಲಕಗಳನ್ನೂ ಅಳವಡಿಸಲಾಗಿದೆ. ಕಳೆದೊಂದು ವಾರದಿಂದ ಸಿಬ್ಬಂದಿಗಳಿಂದ ಸರ್ವೇ ಮಾಡಿಸಲಾಗಿದೆ. ಅನಧಿಕೃತ ಫಲಕಗಳಿಂದ ಪಾಲಿಕೆಗೆ ಆದಾಯದ ಕೊರತೆ ಎದುರಾಗಿದೆ. ಹೀಗಾಗಿ ಜಾಹೀರಾತು ಫಲಕಗಳ ಪಟ್ಟಿ ಇಟ್ಟುಕೊಂಡು ಜಾಹೀರಾತು ಫಲಕಗಳ ಬಳಿಗೆ ತೆರಳುತ್ತಿದ್ದೇವೆ. ಸಂಬಂಧಪಟ್ಟವರು ಈ ಕುರಿತು ಪಾಲಿಕೆಯಿಂದ ಅನುಮತಿ ಪಡೆದಿರುವ ಅಧಿಕೃತ ದಾಖಲೆ ತೋರಿಸಿದಲ್ಲಿ ಬಿಡುತ್ತೇವೆ. ಇಲ್ಲದಿದ್ದಲ್ಲಿ ತೆರವುಗೊಳಿಸುತ್ತೇವೆ. ಹೀಗಾಗಿ ಸಂಗಮ್‌ ವೃತ್ತದಲ್ಲಿದ್ದ 8 ಜಾಹೀರಾತು ಫಲಕಗಳ ಪೈಕಿ ಮೂರು ಅ ಧಿಕೃತವಾಗಿದ್ದು, ಉಳಿದ 5 ಅನಧಿಕೃತ ಫಲಕ ತೆರವುಗೊಳಿಸಲಾಯಿತು ಎಂದು ಸಮಿತಿ ಸದಸ್ಯ ಮುಂಡ್ಲೂರು ಪ್ರಭಂಜನ್‌ ತಿಳಿಸಿದ್ದಾರೆ.

ಇನ್ನು ನಗರದ ಪ್ರಮುಖ ವೃತ್ತ ಗಡಗಿ ಚನ್ನಪ್ಪ ವೃತ್ತದಲ್ಲಿ ಪಾಲಿಕೆ ಆವರಣದಲ್ಲಿನ ಒಂದು ಜಾಹೀರಾತು ನಾಮಫಲಕ ಹೊರತುಪಡಿಸಿದರೆ ಉಳಿದಂತೆ ನಾಲ್ಕು ಫಲಕಗಳು ಅನಧಿಕೃತವಾಗಿದ್ದು ತೆರವುಗೊಳಿಸಲಾಗಿದೆ. ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ಪಾಲಿಕೆ ಆವರಣದಲ್ಲಿನ ಅಧಿಕೃತ ಜಾಹೀರಾತು ಫಲಕ ಸಹ ತೆರವುಗೊಳಿಸಲಾಗಿದೆ.

ತೆರವಿಗೂ ಮುನ್ನ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗುವುದು. ಅವರು ಪಾಲಿಕೆಗೆ ಹಣ ಸಂದಾಯ ಮಾಡಿದ್ದಾರಾ-ಇಲ್ಲ ಎಂಬುದನ್ನು ಖಚಿತ ಪಡಿಸಿಕೊಳ್ಳಲಾಗುವುದು. ಇಲ್ಲದಿದ್ದಾಗ ನೋಟೀಸ್‌ ನೀಡಿ, ಹಣ ಪಾವತಿಸುವಂತೆ ಗಡುವು ನೀಡಲಾಗುವುದು. ಈಗಾಗಲೇ ಪಡೆದು ನಿರ್ಲಕ್ಷ್ಯ ವಹಿಸಿದ್ದಲ್ಲಿ ಅಂಥವರ ಅನಧಿಕೃತ ಫಲಕಗಳನ್ನು ತೆರವುಗೊಳಿಸಲಾಗುವುದು ಎಂದರು.

ಅರ್ಜಿ ಸಲ್ಲಿಸದೆ ಫಲಕ ಅಳವಡಿಕೆ: ಪಾಲಿಕೆಯಿಂದ ಗುರುತಿಸಲಾಗಿದ್ದ ಸ್ಥಳಗಳಲ್ಲಿ ಜಾಹೀರಾತು ಫಲಕ ಅಳವಡಿಸುವ ಕುರಿತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಆಸಕ್ತರು, ವಾರ್ಷಿಕವಾಗಿ ಇಂತಿಷ್ಟು ಹಣ ಸಂದಾಯ ಮಾಡುವ ಸಲುವಾಗಿ ಪಾಲಿಕೆ ಶುಲ್ಕ ನಮೂದಿಸುತ್ತದೆ. ಅರ್ಜಿದಾರರು ಪಾಲಿಕೆ ಸೂಚಿಸುವ ಶುಲ್ಕಕ್ಕಿಂತ ಹೆಚ್ಚು ಹಣ ಸಂದಾಯ ಮಾಡುವುದಾಗಿ ಅರ್ಜಿಯಲ್ಲಿ ನಮೂದಿಸಿದವರಿಗೆ ಸ್ಥಳದಲ್ಲಿ ಜಾಹೀರಾತು ಫಲಕ
ಅಳವಡಿಸಲು ಅನುಮತಿ ನೀಡಲಾಗುತ್ತದೆ. ಆದರೆ, ಸದ್ಯ ತೆರವುಗೊಳಿಸಿರುವ ಫಲಕಗಳಿಗೆ ಸಂಬಂಧಪಟ್ಟವರು ಅನುಮತಿ ಕೋರಿ ಪಾಲಿಕೆಗೆ ಅರ್ಜಿ ಸಲ್ಲಿಸಿಲ್ಲ, ಅನುಮತಿ ಪಡೆದಿಲ್ಲ. ಹಾಗಾಗಿ ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆ ಹೀಗೆ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.