ರೈತರಿಗೆ ಯೂರಿಯಾ ಸಮರ್ಪಕವಾಗಿ ವಿತರಣೆಯಾಗಲಿ: ಪ್ರಭಾಕರ


Team Udayavani, Sep 15, 2020, 4:56 PM IST

ರೈತರಿಗೆ ಯೂರಿಯಾ ಸಮರ್ಪಕವಾಗಿ ವಿತರಣೆಯಾಗಲಿ: ಪ್ರಭಾಕರ

ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ಯೂರಿಯಾ ಗೊಬ್ಬರ ಸಮಸ್ಯೆ ಹೆಚ್ಚಾಗಿದ್ದು ರೈತರು ಗೊಬ್ಬರಕ್ಕಾಗಿ ಪರದಾಡುವಂತಾಗಿದೆ ಎಂದು ತಾಪಂ.ಸದಸ್ಯ ಪ್ರಭಾಕರ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಯೂರಿಯ ಗೊಬ್ಬರ ಸಮರ್ಪಕವಾಗಿ ರೈತರಿಗೆ ಲಭ್ಯವಾಗುವಂತೆ ಸೂಕ್ತ ಕ್ರಮವಹಿಸಿ. ತಾಡಪಲ್ಲುಗಳಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಲಿ ಎಂದುತಿಳಿಸಿದರು. ತಾಡಪಲ್ಲು ಆಯ್ಕೆಗೆ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವಾಗ ಜನಪ್ರತಿನಿಧಿ  ಗಳನ್ನು ಕರೆದು ಆಯ್ಕೆ ಮಾಡಿ ಎಂದು ತಾಪಂ ಸದಸ್ಯ ಪಾಂಡುನಾಯ್ಕ ಆಗ್ರಹಿಸಿದರು. ಕೃಷಿ ಸಹಾಯಕ ನಿರ್ದೇಶಕ ಜೀವನ್‌ಸಾಬ್‌ ಪ್ರತಿಕ್ರಿಯಿಸಿ, ಯೂರಿಯಾಸಮರ್ಪಕ ವಿತರಣೆಗೆ ಈಗಾಗಲೇ ಕ್ರಮವಹಿಸಲಾಗಿದೆ. ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಲಾಟರಿ ಮೂಲಕ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ತಾಪಂ ಸಿಬ್ಬಂದಿಗಳು ಆಫೀಸಲ್ಲಿ ಇರುವುದಿಲ್ಲ, ಯಾರ ಬಳಿ ಕೆಲಸ ಮಾಡಿಸಿಕೊಳ್ಳಬೇಕು ಎಂದು ತಾಪಂ ಸದಸ್ಯ ಮಾಳಿಗಿ ಗಿರೀಶ್‌ ಬೇಸರದಿಂದ ಹೇಳಿದರು. ತಾಪಂಇಒ ಸಿದ್ದೇಶ್‌ ಪ್ರತಿಕ್ರಿಯಿಸಿ ಕೆಲಸದ ಸಮಯದಲ್ಲಿ ಹಾಜರಿರದ ಸಿಬ್ಬಂದಿಗೆ ನೋಟಿಸ್‌ ನೀಡಲಾಗುವುದುಎಂದು ತಿಳಿಸಿದರು. ತಾಲೂಕು ಕಚೇರಿಯಲ್ಲಿ ಸರ್ವೇಇಲಾಖೆ ಅಧಿ ಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ತಾಪಂ ಸದಸ್ಯ ಅನಿಲ್‌ ಜಾಣ ತಹಶೀಲ್ದಾರ್‌ರಿಗೆ ತಿಳಿಸಿದರು. ಸರ್ವೇಯವರು ಫಿಲ್ಡ್‌ ವರ್ಕ್  ಗೆ ಹೋಗಿರುತ್ತಾರೆ, ನಿಮ್ಮ ಕೆಲಸ ಹೇಳಿ ಕೂಡಲೇ ಬಗೆಹರಿಸಲಾಗುವುದು ಎಂದು ತಹಶೀಲ್ದಾರ್‌ ಶಿವಕುಮಾರಗೌಡ ತಿಳಿಸಿದರು. ಓಬಳಾಪುರ ಗ್ರಾಮದ ಬಳಿ ಇರುವ ಕೋಳಿಫಾರಂನ ತ್ಯಾಜ್ಯ ವಿಲೇವಾರಿ ಮಾಡಿಲ್ಲ ಎಂದು ಸದಸ್ಯ ಅನಿಲ್‌ ಜಾಣ ಆರೋಪಿಸಿ, ಕೂಡಲೇ ಮಾಲಿಕರ ವಿರುದ್ಧ ಕ್ರಮಕೈಗೊಳ್ಳಿ ಎಂದು ದೂರಿದರು.

ಧ್ವನಿಗೂಡಿಸಿದ ತಾಲೂಕು ವೈದ್ಯಾಧಿಕಾರಿ ಡಾ| ಶಿವರಾಜ್‌ ಲಾರ್ವ ಸಿಂಪಡಣೆ ಮಾಡಲು ಹೋದಾಗ ಯಾರು ಬರದೆ ಫಾರಂನ ಬೀಗ ತೆಗೆಯದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ತಿಳಿಸಿದರು. ಇವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಎಂದು ಸದಸ್ಯ ಅನಿಲ್‌ ಇಒರನ್ನು ಒತ್ತಾಯಿಸಿದರು. ಅರಣ್ಯ ಇಲಾಖೆವಲಯದ ಕಚೇರಿಯನ್ನು ತಾಲೂಕಿನಲ್ಲಿ ಸ್ಥಾಪಿಸಲು ಕ್ರಮಕೈಗೊಳ್ಳಿ ಎಂದು ಅರಣ್ಯ ಇಲಾಖೆಯ ಕರಿಬಸಪ್ಪ ತಾಪಂ ಸದಸ್ಯರನ್ನು ಒತ್ತಾಯಿಸಿದರು.

ತಾಲೂಕಿನ ತಂಬ್ರಹಳ್ಳಿಯ ಪ್ರಾಥಮಿಕ ಶಾಲೆಯಲ್ಲಿ ಉನ್ನತೀಕರಿಸಿದ ಪ್ರೌಢಶಾಲೆಯನ್ನು ಪ್ರಾರಂಭಿಸಿ ಎಂದು ಸದಸ್ಯ ಪಿ.ಕೊಟ್ರೇಶ ಒತ್ತಾಯಿಸಿದಾಗ ಬಿಇಒ ಶೇಖರಪ್ಪಮೂರು ಕಿಲೋಮೀಟರ್‌ ಒಳಗಡೆ ಪ್ರೌಢಶಾಲೆಇರುವುದರಿಂದ ಪ್ರೌಢಶಾಲೆ ಪ್ರಾರಂಭಿಸುವುದು ಕಷ್ಟಸಾಧ್ಯ ಎಂದು ಪ್ರತಿಕ್ರಿಯಿಸಿದರು. ತಾಲೂಕಿನಲ್ಲಿ ವಿದ್ಯಾಗಮ ಯಶಸ್ವಿಯಾಗಿದ್ದು ಶಿಕ್ಷಕರು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ. ಸಮುದಾಯ ಭವನ,ದೇವಸ್ಥಾನ ಸೇರಿ ಒಟ್ಟು 750ಕಡೆ ವಿದ್ಯಾಗಮ ನಡೆಯುತ್ತಿದ್ದು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬೋರಯ್ಯ ತಿಳಿಸಿದರು.

ಪ್ರತಿ ಗ್ರಾ.ಪಂ.ನಲ್ಲಿ ಯಾವುದಾದರೂ ಹಣಕಾಸು ಯೋಜನೆಯಲ್ಲಿ ಪ್ರತಿ ಶಾಲೆಗೆ ಒಂದು ಟಿವಿಯನ್ನು ಕೊಡಿಸಿ ಮಕ್ಕಳ ಬೋರಯ್ಯ ಕೇಳಿದಾಗ, ಸದಸ್ಯ ಪಿ. ಕೊಟ್ರೇಶ ತಾ.ಪಂ.ಸದಸ್ಯರೆಲ್ಲ 14ಜನ ಆಯಾ ಪಂಚಾಯ್ತಿ ವ್ಯಾಪ್ತಿಯ ಒಂದು ಶಾಲೆಗೆ ಸ್ವಂತ ಅನುದಾನದಲ್ಲಿ ಟಿವಿಯನ್ನು ಕೊಡಿಸುತ್ತೇವೆ ಎಂದು ತಿಳಿಸಿದರು. ತಾಪಂ ಇಒ ಪ್ರತಿಕ್ರಿಯಿಸಿ ಪಂಚಾಯ್ತಿ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ ಕೊಡಿಸುವುದು ಕಷ್ಟ, ಪಂಚಾಯ್ತಿಯ ಒಂದು ಶಾಲೆಗೆ ಕೊಡಿಸಲು ಪಿಡಿಒಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು. ಶಿಕ್ಷಣದ ಕಾರ್ಯಕ್ರಮಗಳಿಗೆ ತಾಪಂ ಉಪಾಧ್ಯಕ್ಷರನ್ನು ಕರೆಯಿರಿ ಎಂದು ತಾಪಂ ಅಧ್ಯಕ್ಷೆ ನಾಗಮ್ಮ ಒತ್ತಾಯಿಸಿದರು.

ತಾಲೂಕಿನಲ್ಲಿ ಈರುಳ್ಳಿ ಬೆಳೆ ಸಂಪೂರ್ಣ ಕೊಳೆ ರೋಗದಿಂದ ನಷ್ಟಕ್ಕೆ ಒಳಗಾಗಿದ್ದು ಪರಿಹಾರಕ್ಕೆಕ್ರಮಕೈಗೊಳ್ಳಿ ಎಂದು ಸದಸ್ಯ ಪಾಂಡುನಾಯ್ಕ ಒತ್ತಾಯಿಸಿದರು. ನಷ್ಟ ಪರಿಹಾರದಲ್ಲಿ ತಾರತಮ್ಯಬೇಡ ನಷ್ಟವಾದ ಫಲಾನುಭವಿಗೆ ಪರಿಹಾರ ದೊರಕಲಿ ಎಂದರು. ತೋಟಗಾರಿಕೆ ಸಹಾಯಕ ನಿರ್ದೇಶಕಡಾ| ಪರಮೇಶ್ವರಪ್ಪ ಪ್ರತಿಕ್ರಿಯಿಸಿ ಬೆಳೆನಷ್ಟದ ಅರ್ಜಿ ಸಲ್ಲಿಸಿದವರಿಗೆ ಪರಿಹಾರ ದೊರಕುತ್ತದೆ ಯಾವುದೇತಾರತಮ್ಯ ಮಾಡುವುದಿಲ್ಲ. ಬೆಳೆಸಮೀಕ್ಷೆ ಅಪ್‌ನಲ್ಲಿ ಬೆಳೆ ದಾಖಲಾಗಿರುವುದು ಪರಿಹಾರ ವಿತರಣೆಗೆ ಸುಲಭವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಬಿಕ್ಯಾ ಮುನ್ನಿಬಾಯಿ, ಸದಸ್ಯರಾದ ತಿಪ್ಪೇರುದ್ರಮುನಿ, ಚೌಟಿ ಗೀತಾ, ರಮೀಜಾ, ಶ್ಯಾಮಲಾ, ಜೆಸ್ಕಾಂ ಎಇಇ ತೇಜನಾಯ್ಕ, ಪಶು ಸಹಾಯಕ ನಿರ್ದೇಶಕ ಡಾ| ದೇವಗಿರಿ, ಕುಡಿಯುವ ನೀರು ಸರಬರಾಜು ಇಲಾಖೆ ಎಇಇಸುರೇಶ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯೋಜನಾಧಿಕಾರಿ ಉಮೇಶಗೌಡ, ವ್ಯವಸ್ಥಾಪಕ ಮಲ್ಲನಗೌಡ, ಕುಮಾರಸ್ವಾಮಿ ನಿರ್ವಹಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.