ಬೆಳೆಗೆ ಅಗತ್ಯವಿರುವಷ್ಟೇ ನೀರು ಬಳಸಿ: ನಜೀರ್
ರೈತರೊಂದಿಗೆ ಕೃಷಿ ವಿಜ್ಞಾನಿ, ಅಧಿಕಾರಿಗಳ ಸಂವಾದ
Team Udayavani, Mar 17, 2022, 12:52 PM IST
ಸಿರುಗುಪ್ಪ: ರೈತರು ಭತ್ತದ ಬೆಳೆಯಲ್ಲಿ ಹೆಚ್ಚು ನೀರನ್ನು ನಿಲ್ಲಿಸುವುದರಿಂದ ಭೂಮಿ ಫಲವತ್ತತೆ ಕಡಿಮೆಯಾಗುತ್ತದೆ. ಅಲ್ಲದೆ ಭೂಮಿ ಸವಕಳಿಯಾಗುತ್ತದೆ. ಆದ್ದರಿಂದ ಭತ್ತದ ಬೆಳೆಗೆ ಎಷ್ಟು ನೀರು ಬೇಕೋ ಅಷ್ಟು ನೀರನ್ನು ಮಾತ್ರ ಬಳಕೆ ಮಾಡಬೇಕೆಂದು ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್ ತಿಳಿಸಿದರು.
ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿ ಕ್ರಿಭ್ಕೋ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ರೈತರೊಂದಿಗೆ ಕೃಷಿ ವಿಜ್ಞಾನಿ ಮತ್ತು ಕೃಷಿ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಭತ್ತದ ಗದ್ದೆಯಲ್ಲಿ ಯಥೇಚ್ಚ ನೀರು ನಿಲ್ಲಿಸುವುದರಿಂದ ಗದ್ದೆಗೆ ಹಾಕಿದ ಗೊಬ್ಬರ ನೀರಿನೊಂದಿಗೆ ಹರಿದು ಹೋಗುತ್ತದೆ. ರೋಗರುಜಿನಗಳ ಕಾಟ ಹೆಚ್ಚಾಗುತ್ತದೆ. ಆದ್ದರಿಂದ ಭತ್ತದ ಗದ್ದೆಯಲ್ಲಿ ಕೂದಲೆಳೆಯ ಅಂತರದ ಬಿರುಕು ಬಿಟ್ಟನಂತರ ನೀರನ್ನು ಹರಿಸುವುದರಿಂದ ಉತ್ತಮ ಬೆಳವಣಿಗೆಯಾಗುತ್ತದೆ. ಅಲ್ಲದೆ ರೋಗ ರುಜಿನಗಳು, ಕ್ರಿಮಿಕೀಟಗಳ ಕಾಟ ಕಡಿಮೆಯಾಗುತ್ತದೆ ಎಂದು ಹೇಳಿದರು.
ಕೃಷಿ ವಿಜ್ಞಾನಿ ಡಾ| ಎಂ.ಎ. ಬಸವಣ್ಣೆಪ್ಪ ಮಾತನಾಡಿ, ಪ್ರತಿಯೊಬ್ಬ ರೈತರು ತಮ್ಮ ಜಮೀನಿನಲ್ಲಿ ಹಸಿರೆಲೆ ಗೊಬ್ಬರವನ್ನು ಬೆಳೆಸಿ ಭೂಮಿಗೆ ಬೆರೆಸುವುದರಿಂದ ಭೂಮಿಯಲ್ಲಿ ಫಲವತ್ತತೆ ಹೆಚ್ಚುತ್ತದೆ. ರೈತರು ತಿಪ್ಪೆ ಗೊಬ್ಬರದೊಂದಿಗೆ ಸಾವಯವ ಗೊಬ್ಬರವನ್ನು ಭೂಮಿಗೆ ನೀಡಿದರೆ ಉತ್ತಮ ಇಳುವರಿ ಬರುತ್ತದೆ. ಮಣ್ಣಿನ ಆರೋಗ್ಯ ಉತ್ತಮವಾಗುತ್ತದೆ. ಉತ್ತಮ ಮಣ್ಣಿನಿಂದ ಹೆಚ್ಚಿನ ಇಳುವರಿಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಕ್ರಿಭ್ಕೋ ಮಾರುಕಟ್ಟೆ ಅಧಿಕಾರಿ ಬಾಬು, ಪ್ರಗತಿಪರ ರೈತರಾದ ಖಾಸಿಂಸಾಬ್, ಅಶೋಕ್, ಮಲ್ಲನಗೌಡ, ಶಂಭನಗೌಡ, ಗಫೂರ್ಸಾಬ್, ಎಸ್.ನಾಗರಾಜ, ಜಿ. ಬಸವನಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ