ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ
Team Udayavani, Feb 26, 2021, 3:34 PM IST
ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರ ನಾಯಕತ್ವದ ಲಕ್ಷಣಗಳು ಇಲ್ಲ. ಸ್ವಾತಂತ್ರ್ಯ ಸೇನಾನಿ ಸರ್ದಾರ್ ಪಟೇಲರ ಹೆಸರಲ್ಲಿದ್ದ ಗುಜರಾತ್ ನ ಅಹಮದಾಬಾದ್ ಕ್ರಿಕೆಟ್ ಮೈದಾನವನ್ನು ಅಭಿವೃದ್ಧಿಪಡಿಸಿದ ಮಾತ್ರಕ್ಕೆ ಅದರ ಹೆಸರು ಹೆಸರು ಬದಲಾಯಿಸಿ ನರೇಂದ್ರ ಮೋದಿಯವರ ಹೆಸರು ಇಡೋದು ಸರಿಯಲ್ಲ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರಿಂದ ಅವರು ರಾಷ್ಟ್ರ ನಾಯಕರು ಎಂದೆನಿಸಿಕೊಳ್ಳಲ್ಲ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದಾಗ ಕೇವಲ ನೂರು ದಿನಗಳಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸುವುದಾಗಿ ಹೇಳಿದ್ದರು. ಆದರೆ, ಈಗ ಇಂಧನ ಬೆಲೆ 100 ರೂ.ಗಳ ಸಮೀಪದಲ್ಲಿದೆ. ರಾಜಸ್ಥಾನ ಸೇರಿ ಕೆಲ ರಾಜ್ಯಗಳಲ್ಲಿ ನೂರು ರೂ ದಾಟಿದೆ ಎಂದು ಟೀಕಿಸಿದರು.
ಇದನ್ನೂ ಓದಿ:1,800 ಕೋಟಿ ರೂ. ಮೊತ್ತದ ಟೆಂಡರ್ ರದ್ದು ವಿಚಾರ: ಸಚಿವ ಸುಧಾಕರ್ ಗೆ ಹೈಕೋರ್ಟ್ ನೋಟಿಸ್
ಅಡುಗೆ ಅನಿಲ ಬೆಲೆ ಒಂದೇ ತಿಂಗಳಲ್ಲಿ 100 ರೂ. ಏರಿಕೆಯಾಗಿದೆ. ಸಾರಿಗೆ ವೆಚ್ಚ ಸೇರಿ 810 ರೂ.ಗೆ ಬೆಲೆ ಏರೆಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಉಗ್ರಪ್ಪ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?