ವಠಾರ ಶಾಲೆಗಳಿಗೆ ಉತ್ತಮ ಸ್ಪಂದನೆ


Team Udayavani, Aug 19, 2020, 6:47 PM IST

BALLARY-TDY-1

ಸಂಡೂರು: ತಾಲೂಕಿನಾದ್ಯಂತ ವಿದ್ಯಾಗಮ ವಠಾರ ಶಾಲೆಗಳು ಬಹು ಚುರುಕಿನಿಂದಲೇ ಪ್ರಾರಂಭವಾಗಿವೆ. ಕಾರಣ ಇದಕ್ಕೆ ತಾಲೂಕಿನ ಬಹಳಷ್ಟು ಪಾಲಕರು ಸ್ಪಂದಿಸುತ್ತಿದ್ದು ಕೋವಿಡ್ ಕಂಠಕದ ಮಧ್ಯದಲ್ಲಿಯೇ ಕಲಿಕೆ ಪ್ರಾರಂಭವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ.

ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ 273 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಇದರಲ್ಲಿ ವಠಾರ ಶಾಲೆಗೆ 6 ಬ್ಲಾಕ್‌ಗಳನ್ನು ಮಾಡಿದ್ದು 1 ಕೇಂದ್ರದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಗಾಳೆಮ್ಮ ದೇವಸ್ಥಾನದಲ್ಲಿ ನಡೆಯುವ ಕೇಂದ್ರಕ್ಕೆ ಅತಿ ಹೆಚ್ಚು ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಈ ಗ್ರಾಮದ ಶಾಲೆಯಲ್ಲಿ ಒಟ್ಟು 8 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು ಸರತಿ ಮೇಲೆ ವಿದ್ಯಾರ್ಥಿಗಳನ್ನು ವಠಾರ ಶಾಲೆಗೆ ಬರುವಂತೆ ಮಾಡುತ್ತಿದ್ದಾರೆ. ಅಲ್ಲದೆ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಶ್ನೆ ಉತ್ತರಗಳನ್ನು ಝರಾಕ್ಸ್‌ ಪ್ರತಿಗಳಲ್ಲಿ ವಿತರಿಸುವ ಕಾರ್ಯವೂ ನಡೆಯುತ್ತಿದೆ. ಈ ಬಗ್ಗೆ ಶಿಕ್ಷಕರಾದ ಬಸವರಾಜ ಅವರು ಪ್ರತಿಕ್ರಿಯಿಸಿ, ಶಿಕ್ಷಕರು ಅಸಕ್ತಿಯಿಂದಲೇ ಭಾಗವಹಿಸುತ್ತಿದ್ದು ಅದಕ್ಕೆ ಹೊಂದಿಕೊಂಡಂತೆ ವಠಾರಗಳಲ್ಲಿತರಗತಿ ತೆಗೆದುಕೊಳ್ಳಲು ಮುಂದಾದಾಗ ಮೊದಲು ಭಯಪಡುತ್ತಿದ್ದರು. ಆದರೆ ಈಗ ಮಾಸ್ಕ್ ಮತ್ತು ಸಾಮಾಜಿಕ ಅಂತರದೊಂದಿಗೆ ಮಕ್ಕಳನ್ನು ಆಕರ್ಷಿಸಲಾಗುತ್ತಿದೆ. ಅವರಿಗೆ ಈಗಾಗಲೇ ಪಠ್ಯಪುಸ್ತಕಗಳನ್ನು ಸಹ ವಿತರಿಸಿದ್ದೇವೆ. ಶಾಲೆಗಳಲ್ಲಿ ಅವರಿಗೆ ಪಾಠಗಳನ್ನು ಹೇಳುವ ಅದಕ್ಕೆ ಬೇಕಾದ ನೋಟ್ಸ್‌ ನ್ನು ಶಿಕ್ಷಕರೇ ಸಿದ್ಧಪಡಿಸಿ ನೀಡುತ್ತಿದ್ದೇವೆ, ಇದರಿಂದ ವಿದ್ಯಾರ್ಥಿಗಳು ಅಸಕ್ತಿವಹಿಸಿದ್ದಾರೆ.

ಮಳೆಗಾಲ ಮತ್ತು ಮುಂಗಾರು ಪರಿಣಾಮ ವಿದ್ಯಾರ್ಥಿಗಳು ತೋಟಗಳಿಗೂ, ತಮ್ಮ ಕೃಷಿ ಜಮೀನುಗಳಿಗೂ ಹೋಗುತ್ತಾರೆ, ಅದರೆ ಬೆಳಗಿನಜಾವ ಬೇಗ ಹೋದರೆ ಎಲ್ಲ ವಿದ್ಯಾರ್ಥಿಗಳು ಸಿಗುತಾರೆ. ಆದ್ದರಿಂದ ಶಿಕ್ಷಕರು ಆ ರೀತಿಯ ಎಲ್ಲ ಪ್ರಯತ್ನದೊಂದಿಗೆ ಕಾರ್ಯನಿರ್ವಹಿಸುತ್ತೇವೆ ಎನ್ನುತ್ತಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಐ.ಅರ್‌. ಅಕ್ಕಿ ಪ್ರತಿಕ್ರಿಯಿಸಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಮಹತ್ತರ ಉದ್ದೇಶವನ್ನು ಪ್ರತಿಯೊಬ್ಬ ಶಿಕ್ಷಕರು ಹೊಂದಿದ್ದು ಅದರಂತೆ ವಠಾರ ಶಾಲೆ ಪ್ರಾರಂಭ ಮಾಡಿದ್ದೇವೆ ಉತ್ತಮ ಪ್ರೋತ್ಸಾಹ, ಪ್ರತಿಕ್ರಿಯೆ ಸಿಗುತ್ತಿದೆ, ಕೊರೊನಾ ಭಯ ಸ್ವಲ್ಪ ಕಡಿಮೆಯಾಗುತ್ತಿದೆ ಎನ್ನುತ್ತಾರೆ. ಮಕ್ಕಳ ಹಾಜರಾತಿ ಕಡಿಮೆ ಇದ್ದರೂ ಸಹ ಸರ್ಕಾರಿ ಶಾಲೆಗಳ ವಠಾರ ಶಾಲೆ ಉತ್ತಮವಾಗಿ ಪ್ರಾರಂಭವಾಗಿದೆ.

ಮತ್ತೂಂದು ಕಡೆ ಖಾಸಗಿ ಶಾಲೆಗಳು ಆನ್‌ಲೈನ್‌ ಕ್ಲಾಸ್‌, ವಿಡಿಯೋ ಕ್ಲಾಸ್‌ ಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅದಕ್ಕೆ ಸ್ಪರ್ಧೆಯ ರೀತಿಯಲ್ಲಿ ಸರ್ಕಾರಿ ಶಾಲೆಗಳು ಮುಂದಾಗಿರುವುದು ಉತ್ತಮ ಬೆಳವಣಿಗೆಯೇ ಸರಿ ಎನ್ನಬಹುದು, ಇನ್ನೂ ತಾಲೂಕಿನ ಪ್ರತಿಯೊಂದು ಶಾಲೆಗಳು ಸಹ ಈ ರೀತಿ ನಡೆದರೆ ಶಿಕ್ಷಣ ವಂಚಿತರ ಸಂಖ್ಯೆ ಇಳಿಮುಖವಾಗುತ್ತದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.