ವಿಮ್ಸ್ ಅರವಳಿಕೆ ವಿಭಾಗ ಉನ್ನತೀಕರಣ
ಇಸಿಪಿಎಲ್ ಕಂಪನಿ-ವಿಮ್ಸ್ ಮಧ್ಯೆ ಒಡಂಬಡಿಕೆ ; 41ಲಕ್ಷ ರೂ.ವೆಚ್ಚದಲ್ಲಿ ವಿಭಾಗದ ಅಭಿವೃದ್ಧಿ
Team Udayavani, Sep 21, 2021, 5:50 PM IST
ಬಳ್ಳಾರಿ: ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ(ವಿಮ್ಸ್) ಅರವಳಿಕೆ ವಿಭಾಗದ ಉನ್ನತೀಕರಣಕ್ಕೆ ಸಂಬಂಧಿಸಿದಂತೆ ವಿಮ್ಸ್ ಮತ್ತು ಇಸಿಪಿಎಲ್ ಕಂಪನಿ ಮಧ್ಯೆ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು.
ಕಾರ್ಪೋರೇಟ್ ಎನ್ವರ್ವೆುಂಟ್ ರಿಸ್ಪಾನ್ಸಿಬಾಲಿಟಿ (ಸಿಇಆರ್) ಚಟುವಟಿಕೆಗಳಡಿ ಇದನ್ನು ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಸಮ್ಮುಖ ದಲ್ಲಿ ಇಸಿಪಿಎಲ್ ನಿರ್ದೇಶಕ ವಿನೋದ್ ಅಂಡಾ ಹಾಗೂ ವಿಮ್ಸ್ ನಿರ್ದೇಶಕ ಗಂಗಾಧರಗೌಡ ಅವರ ಪರವಾಗಿ ಸಭೆಗೆ ಆಗಮಿಸಿದ್ದ ವಿಮ್ಸ್ನ ಮೈಕ್ರೋಬಯಾಲಜಿ ವಿಭಾಗದ ಡಾ| ಕೃಷ್ಣ ಅವರು ಒಪ್ಪಂದಕ್ಕೆ ಸಹಿ ಹಾಕಿದ ಪತ್ರವನ್ನು ವಿನಿಮಯ ಮಾಡಿಕೊಂಡರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು, ವಿಮ್ಸ್ ಮೆಡಿಕಲ್ಕಾಲೇಜಿನ ಅನಸ್ತೇಶಿಯಾ ವಿಭಾಗಕ್ಕೆ ಬೇಕಾದ ಸೌಲಭ್ಯಗಳನ್ನು ಇಸಿಪಿಎಲ್ ಕಂಪನಿಯಿಂದ ನೀಡಲಾಗುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಸಹಿ ಮಾಡಲಾಗಿದೆ ಎಂದರು. ಇಸಿಪಿಎಲ್ ಕಂಪನಿಯಿಂದ 41 ಲಕ್ಷ ರೂ. ವೆಚ್ಚದಲ್ಲಿ ವಿಮ್ಸ್ ಮೆಡಿಕಲ್ ಕಾಲೇಜಿನ ಅನಸ್ತೇಶಿಯಾ ವಿಭಾಗಕ್ಕೆ ಅಗತ್ಯವಿರುವ ಸೌಲಭ್ಯ ಒದಗಿಸಲಾಗುತ್ತದೆ. ಈ ಹಿಂದೆ ಜಿಲ್ಲಾಸ್ಪತ್ರೆಗೆ ಇಸಿಪಿಎಲ್ ಕಂಪನಿಯವರು ಆಪ್ತಮಾಲಜಿಗೆ ಬೇಕಾದ ಸೌಲಭ್ಯ ನೀಡಿದ್ದಾರೆ. ಇದು ಕಣ್ಣಿನ ತಪಾಸಣೆಗೆ ನೆರವಾಗುತ್ತಿದೆ. ತಮ್ಮ ಕಂಪನಿ ವ್ಯಾಪ್ತಿಯಲ್ಲಿ ಚೆಕ್ ಡ್ಯಾಂ ನಿರ್ಮಿಸುವ ಮೂಲಕ ನೀರಿನ ಸಂಗ್ರಹಣೆ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ:ಸರ್ದಾರ್ಜಿಖಲಿಸ್ತಾನಿ,ನಾವು ಪಾಕಿಸ್ತಾನಿ,ಕೇವಲ ಬಿಜೆಪಿ ಮಾತ್ರ ಹಿಂದೂಸ್ತಾನಿ|ಮೆಹಬೂಬಾ ಮುಫ್ತಿ
ರೂ. 2.5 ಕೋಟಿ ವೆಚ್ಚದಲ್ಲಿ ವೇಣಿ ವೀರಾಪುರ, ಕುಡತಿನಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ತಗಲುವ ವೆಚ್ಚದಲ್ಲಿ 80 ಲಕ್ಷ ರೂ. ಹಣವನ್ನು ಕಂಪನಿ ನೀಡಲಿದೆ. ಉಳಿದ ಹಣವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಕಸವಿಲೇವಾರಿ ಘಟಕದ ಮೂಲಕ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ತಯಾರಾಗುವ ಕಸವನ್ನು ವಿಲೇವಾರಿ ಮಾಡಲಾಗುತ್ತದೆ. ಈ ಮೂಲಕ ಗ್ರಾಪಂಗೆ ವಾಣಿಜ್ಯವಾಗಿ ಲಾಭದಾಯಕವೂ ಆಗಲಿದೆ. ಈಗಾಗಲೇ ಜಿಪಂ ವತಿಯಿಂದ ತಾಳೂರಿನಲ್ಲಿ ಇಂಥ ಒಂದು ಘಟಕ ಶುರು ಮಾಡಲಾಗಿದೆ. ಅದು ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಡಿಎಚ್ಒ ಡಾ|ಜನಾರ್ಧನ್,ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸರೆಡ್ಡಿ, ಇಸಿಪಿಎಲ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಮಹೇಶ
ತೋಡ್ಕರ್, ವಿಮ್ಸ್ನ ಡಾ| ಬಾಲಭಾಸ್ಕರ್, ಇಸಿಪಿಎಲ್ ವ್ಯವಸ್ಥಾಪಕ ನಿರ್ದೇಶಕ ನರೇಶ ರಂಕಾ, ಗಣೇಶ, ಗುರುಪ್ರಸಾದ ಕುಲಕರ್ಣಿ,
ವಿಜಯಭಾಸ್ಕರ್, ರಾಮಕೃಷ್ಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ