ವಿಜಯನಗರ : ಕಾನಿಪ ತಾಲ್ಲೂಕು ಪದಾಧಿಕಾರಿಗಳ ಅವಿರೋಧ ಆಯ್ಕೆ
Team Udayavani, Jul 10, 2022, 9:37 PM IST
ಹೊಸಪೇಟೆ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲೆಯ ಐದು ತಾಲ್ಲೂಕು ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ವಿಜಯನಗರ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಘದ ರಾಜ್ಯಾಧ್ಯಕ್ಷ ಶಿವನಂದ ತಗಡೂರು ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರ ಮಾರ್ಗದರ್ಶನಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ವಿಜಯನಗರ ಜಿಲ್ಲಾ ಘಟಕದ ಪದಾಧಿಕಾರಿಗಳು, ಸರ್ವ ಸದಸ್ಯರ ಸಹಕಾರದಿಂದ ಈ ಕಾರ್ಯ ಸಾಧ್ಯವಾಗಿದೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಕೆ.ಲಕ್ಷ್ಮಣ, ಖಜಾಂಚಿ ಅನಂತ್ ಜೋಶಿ, ಜಿಲ್ಲಾ ಉಪಾಧ್ಯಕ್ಷರಾದ ಉಜ್ಜನಿ ರುದ್ರಪ್ಪ, ಹುಡೇಂ ಕೃಷ್ಣಮೂರ್ತಿ ಸಹ ಕಾರ್ಯದರ್ಶಿ ಪ್ರಕಾಶ್ ಹಾಗೂ ಮಾಜಿ ಅಧ್ಯಕ್ಷ ವೆಂಕೋಬ ನಾಯಕ ಪೂಜಾರಿ ಅವರು ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ತಾಲ್ಲೂಕುವಾರು ಪದಾಧಿಕಾರಿಗಳ ವಿವರ ಹೀಗಿದೆ.
ಕೊಟ್ಟೂರು:
ಕಾನಿಪ ಕೊಟ್ಟೂರು ತಾಲ್ಲೂಕು ಅಧ್ಯಕ್ಷರಾಗಿ ಕೊರವರ ಕೊಟ್ರೇಶ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಮಂಜುನಾಥ್, ಉಪಾಧ್ಯಕ್ಷರಾಗಿ ಡಿ.ಸಿದ್ದಪ್ಪ, ಖಜಾಂಚಿಯಾಗಿ ಎಸ್.ಪ್ರಕಾಶ್, ಸಹ ಕಾರ್ಯದರ್ಶಿಯಾಗಿ ಎಚ್.ನಾಗರಾಜ.
ಹಗರಿಬೊಮ್ಮನಹಳ್ಳಿ:
ಕಾನಿಪ ಹಗರಿಬೊಮ್ಮನಹಳ್ಳಿ ತಾಲ್ಲೂಕು ಅಧ್ಯಕ್ಷರಾಗಿ ಉಮಾಪತಿ ಶೆಟ್ಟರ್, ಪ್ರಧಾನ ಕಾರ್ಯದರ್ಶಿಯಾಗಿ ಡಿ.ಭೀಮರಾಜ್, ಉಪಾಧ್ಯಕ್ಷರಾಗಿ ಸುರೇಶ್ ಯಳಕಪ್ಪನವರ್, ಖಜಾಂಚಿಯಾಗಿ ಉಮೇಶ್ ನೆಲಕುದರೆ, ಸಹ ಕಾರ್ಯದರ್ಶಿಯಾಗಿ ರಾಜಾವಲಿ.
ಕೂಡ್ಲಿಗಿ :
ಕಾನಿಪ ಕೂಡ್ಲಿಗಿ ತಾಲೂಕು ಅಧ್ಯಕ್ಷರನ್ನಾಗಿ ಶ್ರೀ ಮಯೂರ ಮಂಜುನಾಥ್ ಮತ್ತು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಆರಾಧ್ಯ ಸೋಮಶೇಖರ್, ಉಪಾಧ್ಯಕ್ಷರನ್ನಾಗಿ ಶ್ರೀ ಕೆ.ಸುನೀಲ್ ಗೌಡ, ಖಜಾಂಚಿಯಾಗಿ ಹೆಚ್ ವೀರಣ್ಣ, ಸಹ ಕಾರ್ಯದರ್ಶಿಯಾಗಿ ಕೆ.ಎಂ ವೀರೇಶ.
ಹೂವಿನಹಡಗಲಿ :
ಕಾನಿಪ ಹೂವಿನಹಡಗಲಿ ತಾಲ್ಲೂಕು ಅಧ್ಯಕ್ಷರಾಗಿ ಸೋಮಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಅಶೋಕ್, ಉಪಾಧ್ಯಕ್ಷರಾಗಿ ಎಸ್.ಅಶ್ವಥ್ ನಾರಾಯಣ, ಖಜಾಂಚಿಯಾಗಿ ಎಸ್.ಎಂ.ಬಸವರಾಜ, ಸಹ ಕಾರ್ಯದರ್ಶಿಯಾಗಿ ಎಚ್.ಚಂದ್ರಪ್ಪ.
ಹರಪನಹಳ್ಳಿ :
ಕಾನಿಪ ಹರಪನಹಳ್ಳಿ ತಾಲ್ಲೂಕು ಅಧ್ಯಕ್ಷರಾಗಿ ತಳವಾರ್ ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ದೇವೇಂದ್ರಪ್ಪ, ಉಪಾಧ್ಯಕ್ಷರಾಗಿ ಎ.ನಾಗೇಂದ್ರಪ್ಪ, ಖಜಾಂಚಿಯಾಗಿ ಸುರೇಶ್ ಮಂಡಕ್ಕಿ, ಸಹ ಕಾರ್ಯದರ್ಶಿಯಾಗಿ ಎಸ್.ರವಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ