ಕೋವಿಡ್ ನಿಯಮ ಉಲ್ಲಂಘನೆ: ತಿಂಗಳಲ್ಲಿ 11 ಲಕ್ಷ ರೂ. ದಂಡ ಸಂಗ್ರಹ

ದಂಡದಿಂದ ಬಂತು ಲಕ್ಷಾಂತರ ರೂ.ಆದಾಯ

Team Udayavani, Oct 12, 2020, 6:00 PM IST

ತಿಂಗಳಲ್ಲಿ 11 ಲಕ್ಷ ರೂ. ದಂಡ ಸಂಗ್ರಹ

ಬಳ್ಳಾರಿ: ನಗರದ ಡಾ| ರಾಜಕುಮಾರ ರಸ್ತೆಯಲ್ಲಿನ ತಹಶೀಲ್ದಾರ್‌ ಕಚೇರಿ ಎದುರು ಮಾಸ್ಕ್ ಇಲ್ಲದೆ ಸಂಚರಿಸುವವರಿಗೆ ದಂಡ ವಿ ಧಿಸುತ್ತಿರುವ ಪೊಲೀಸರು.

ಬಳ್ಳಾರಿ: ರಾಜ್ಯದಲ್ಲಿ ಕೋವಿಡ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಡ್ಡಾಯಗೊಳಿಸಿರುವ ಮಾಸ್ಕ್, ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದವರಿಂದ ಕಳೆದ ಒಂದು ತಿಂಗಳಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ಸಂಗ್ರಹಿಸಿದ ದಂಡದ ಮೊತ್ತ ಬರೋಬ್ಬರಿ 11,54,700 ರೂಪಾಯಿಗಳು.

ಹೌದು…! ರಾಜ್ಯದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದೆ. ಪರಿಣಾಮ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಉಲ್ಲಂಘಿಸಿದಲ್ಲಿ ದುಬಾರಿ ದಂಡ ವಿಧಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡದಿದ್ದರೆ ಮತ್ತು ಮಾಸ್ಕ್ ಧರಿಸದಿದ್ದರೆ 250 ರೂ. ದಂಡ ವಿ ಧಿಸಲಾಗುತ್ತಿದ್ದು, ಕಳೆದ ಒಂದು ತಿಂಗಳಲ್ಲಿ (ಸೆ. 10ರಿಂದ ಅ.7ರವರೆಗೆ) ಜಿಲ್ಲೆಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಕೋವಿಡ್‌ ನಿಯಮ ಉಲ್ಲಂಘಿಸಿದವರಿಂದ 7714 ಪ್ರಕರಣ ದಾಖಲಿಸಿ, 11,54,700 ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ.

ಮೂಲಗಳ ಪ್ರಕಾರ ರಾಜ್ಯಕ್ಕೆ ಈ ತಿಂಗಳ ಆರಂಭದ ಎಂಟೇ ದಿನದಲ್ಲಿ ಸುಮಾರು ಒಂದು ಕೋಟಿ ರೂಪಾಯಿನ ಆದಾಯ ಬಂದಿತ್ತು. ಈ ಪೈಕಿ ಗಣಿನಾಡು ಬಳ್ಳಾರಿ ಜಿಲ್ಲೆ ಮುಂಚೂಣಿಯಲ್ಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ 12 ಲಕ್ಷ ರೂ.ನಷ್ಟು ಆದಾಯ ದಂಡದ ರೂಪದಲ್ಲಿ ಸರ್ಕಾರದಬೊಕ್ಕಸಕ್ಕೆ ಬಂದು ಸೇರಿದೆ. ಇದು ಕೇವಲ ಮಾಸ್ಕ್ ಧರಿಸದೇ ಇರುವುದಕ್ಕೆ ಮತ್ತು ಸಾಮಾಜಿಕ ಅಂತರ ಕಾಪಾಡದೇ ಇರುವುದಕ್ಕೆ ವಿಧಿಸಿದ ದಂಡವಾಗಿದೆ. ಕೋವಿಡ್ ಪಸರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಎಲ್ಲರೂ ಮಾಸ್ಕ್ ಧರಿಸದೇ ಇರುವವರಿಗೆ ದಂಡ ವಿಧಿಸುವ ಮೂಲಕ ಎಲ್ಲರೂ ಮಾಸ್ಕ್ ಧರಿಸುವಂತೆ ಪ್ರರೇಪಿಸುವುದು ಈ ನಿಯಮದ ಉದ್ದೇಶವಾಗಿದೆ.

ಜಿಲ್ಲೆಯಲ್ಲಿ ಸೆಪ್ಟೆಂಬರ್‌ 10ರಿಂದ ಅಕ್ಟೋಬರ್‌ 7 ವರೆಗೆ ಒಟ್ಟಾರೆ 7594 ಮಾಸ್ಕ್ ಧರಿಸದೇ ಇರುವ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಿಂದ ಒಟ್ಟು 11,37,600 ರೂ. ದಂಡ ಸಂಗ್ರಹಿಸಲಾಗಿದೆ. ಇದೇರೀತಿ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಇರುವ ಕಾರಣಕ್ಕೆ ಒಟ್ಟು 120 ಪ್ರಕರಣಗಳನ್ನು ದಾಖಲಿಸಿದ್ದು ಇದರಿಂದ 17,100 ರೂ. ಸಂಗ್ರಹಿಸಲಾಗಿದೆ. ಸೆಪ್ಟೆಂಬರ್‌ 26ರಂದು ಒಂದೇ ದಿನ ದಾಖಲೆ ಪ್ರಮಾಣದಲ್ಲಿ 1030 ಪ್ರಕರಣ ದಾಖಲಿಸಿಕೊಂಡು 1,30,800 ರೂ. ಸಂಗ್ರಹಿಸಿರುವುದು ವಿಶೇಷ.

ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದೇ ಇದ್ದುದು ಮತ್ತೆ ಲಾಕ್‌ಡೌನ್‌ ಮಾಡುವುದು ಅಸಾಧ್ಯ ಎಂಬ ಕಾರಣಕ್ಕೆ ಸರ್ಕಾರ ಜನಜೀವನ ಮಾಮೂಲಿಯಂತೆ ನಡೆಸಲು ಅವಕಾಶಮಾಡಿಕೊಟ್ಟಿತು. ಆದರೆ, ಜನರು ಜಾಗೃತಿ ಮಧ್ಯೆಯೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಮತ್ತು ಮಾಸ್ಕ್ ಧರಿಸುವ ಗೋಜಿಗೆ ಹೋಗಲೇಇಲ್ಲ. ಇದರಿಂದ ಸಹಜವಾಗಿ ಸೋಂಕು ಏರಿಕೆ ಕಾಣುತ್ತಾ ಹೋಯಿತು. ಇದೀಗ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಕೆ ಕಾಣುತ್ತಿದೆ. ವೈರಸ್‌ ಹಬ್ಬುವ ಸಾಮರ್ಥ್ಯ ಕಳೆದುಕೊಂಡಿದೆ. ಹೀಗಾಗಿ ಕಡಿಮೆ ಆಗಿದೆ ಎಂಬ ವಾದವಿದ್ದರೂ ಸಹ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ

ಕಾಪಾಡಿಕೊಳ್ಳುವುದೂ ಸಹ ಸೋಂಕು ಹರಡದೇ ಇರುವುದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಒಟ್ಟಿನಲ್ಲಿ ಸದ್ಯ ಸೋಂಕು ಹರಡುವ ಪ್ರಮಾಣ, ರೋಗದಿಂದ ಗುಣಮುಖರಾಗುವವರ ಪ್ರಮಾಣ ಗಮನಿಸಿದರೆ ಶೀಘ್ರವೇ ನಮ್ಮ ಜಿಲ್ಲೆ ಸೋಂಕು ಮುಕ್ತ ಆಗಬಹುದೆಂಬ ನಿರೀಕ್ಷೆ ಇದೆ. ಸದ್ಯ 2658 ಸಕ್ರಿಯ ಪ್ರಕರಣ ನಮ್ಮ ಜಿಲ್ಲೆಯಲ್ಲಿವೆ. ರೋಗದಿಂದ ಗುಣಮುಖರಾಗುವವರ ಪ್ರಮಾಣ ಹೊಸ ಸೋಂಕಿತರ ಪತ್ತೆಗಿಂತ ಹೆಚ್ಚಿದೆ. ಇದೇ ಕಾರಣಕ್ಕೆ ಜಿಲ್ಲಾಡಳಿತ ಜಿಲ್ಲಾಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆ ಪಟ್ಟಿಯಿಂದ ಹೊರತಂದು ಸಾಮಾನ್ಯ ಆಸ್ಪತ್ರೆ ಮಾಡಿದೆ.

ಕೋವಿಡ್‌ ನಿಯಮಾವಳಿ ಉಲ್ಲಂಘಿಸಿ ಸಾಮಾಜಿಕ ಅಂತರ ಪಾಲಿಸದ, ಮುಖಗವಸು ಧರಿಸದ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸದಿರುವುದರಿಂದ ಸಾರ್ವಜನಿಕರು ಸಾರ್ವಜನಿಕ  ಸ್ಥಳಗಳಲ್ಲಿ ಮುಕ್ತವಾಗಿ ಸಂಚರಿಸುತ್ತಿದ್ದಾರೆ. ಇದರಿಂದ ಕೋವಿಡ್ ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗಿರುವುದು ಆರೋಗ್ಯ ಇಲಾಖೆ ಅಂಕಿ-ಅಂಶಗಳಿಂದ ತಿಳಿದುಬಂದಿದೆ. ಹೀಗಾಗಿ ರಾಜ್ಯ ಸರ್ಕಾರ ಸಾಮಾಜಿಕ ಅಂತರ ಕಾಪಾಡದವರಿಗೆ, ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತಿದೆ.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.