ಟ್ರಾಮಾಕೇರ್ ಸೆಂಟರ್ಗೆ ಭೇಟಿ; ಪರಿಶೀಲನೆ
Team Udayavani, Jul 8, 2020, 11:07 AM IST
ಬಳ್ಳಾರಿ: ಪ್ರಧಾನಮಂತ್ರಿ ಸ್ವಸ್ಥ ಸುರಕ್ಷಾ ಯೋಜನೆ ಅಡಿ ಬಳ್ಳಾರಿಯಲ್ಲಿ ನಿರ್ಮಿಸಲಾಗಿರುವ ವಿಶೇಷ ಅಪಘಾತ ಆಸ್ಪತ್ರೆ (ಟ್ರಾಮಾಕೇರ್ ಸೆಂಟರ್)ಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಆನಂದಸಿಂಗ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ವಿಶೇಷ ಅಪಘಾತ ಆಸ್ಪತ್ರೆ (ಟ್ರಾಮಾಕೇರ್ ಸೆಂಟರ್)ಯಲ್ಲಿ ಕೊರೊನಾ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಟ್ರಾಮಾಕೇರ್ ಸೆಂಟರ್ಗೆ ಭೇಟಿ ನೀಡಿ ಪರಿಶೀಲಿಸಿದರು.
ಟ್ರಾಮಾಕೇರ್ ಸೆಂಟರ್ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಇನ್ನೂ ಅಲ್ಪ ಕಾಮಗಾರಿ ಬಾಕಿ ಉಳಿದಿರುವುದನ್ನು ಸಚಿವ ಆನಂದಸಿಂಗ್ ಅವರು ಪರಿಶೀಲಿಸಿ ಕಾಮಗಾರಿ ಹೊಣೆಹೊತ್ತಿರುವ ಏಜೆನ್ಸಿದಾರರಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ಸೆಂಟರ್ನ ನಾಲ್ಕು ಮಹಡಿಗಳಲ್ಲಿ ಹಾಕಲಾಗಿರುವ 200 ಬೆಡ್ ಗಳನ್ನು (150ಐಸಿಯು ಬೆಡ್ ಸೇರಿ) ಪರಿಶೀಲಿಸಿದರು. ಶೌಚಾಲಯ ಹಾಗೂ ಇನ್ನಿತರೆ ವ್ಯವಸ್ಥೆಗಳನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಬಳಿಕ ಮಾತನಾಡಿದ ಅವರು, ಟ್ರಾಮಾಕೇರ್ ಸೆಂಟರ್ನ ಬಹುತೇಕ ಕಾಮಗಾರಿ ಮುಕ್ತಾಯವಾಗಿದ್ದು, ಜು.15ಕ್ಕೆ ಇದನ್ನು ಲೋಕಾರ್ಪಣೆ ಮಾಡಬೇಕು ಅಂತ ಅಂದುಕೊಳ್ಳಲಾಗಿತ್ತು. ಕೋವಿಡ್ ದಿಂದ ಅಲ್ಪ ತಾಂತ್ರಿಕ ಕೆಲಸ ಮಾತ್ರ ಬಾಕಿ ಉಳಿದಿದೆ. ಅದನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಎಕ್ಸಪ್ರಸ್ ಫಿಡರ್ ಕೂಡ ಒದಗಿಸಲಾಗಿದೆ. ಈ ತಿಂಗಳ ಅಂತ್ಯಕ್ಕೆ ಉದ್ಘಾಟಿಸಲಾಗುವುದು ಮತ್ತು ಆರಂಭದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಲಾಗುವುದು. ನಂತರ ಇದನ್ನು ನಿಗದಿತ ಉದ್ದೇಶಕ್ಕಾಗಿ ಬಳಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ವಿಮ್ಸ್ ನಿರ್ದೇಶಕ ಡಾ| ದೇವಾನಂದ, ಅಪರ ಜಿಲ್ಲಾ ಧಿಕಾರಿ ಪಿ.ಎಸ್. ಮಂಜುನಾಥ, ಡಿಎಚ್ಒ ಡಾ| ಜನಾರ್ಧನ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು