![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮ
Team Udayavani, Jan 7, 2020, 3:17 PM IST
![ballry-tdy-1](https://www.udayavani.com/wp-content/uploads/2020/01/ballry-tdy-1-620x395.jpg)
ಹೂವಿನಹಡಗಲಿ: 18 ವರ್ಷ ತುಂಬಿದ ಯುವ ಮತದಾರರು ಮತ್ತು ಈವರೆಗೂ ಮತದಾರರ ಯಾದಿಯಲ್ಲಿ ಹೆಸರು ನೋಂದಣಿ ಮಾಡದಿದ್ದಲ್ಲಿ ಅಂಥವರ ಹೆಸರನ್ನು ಮತದಾರರ ಪಟ್ಟಿಗೆಸೇರ್ಪಡೆಗೊಳಿಸುವ ಉದ್ದೇಶದಿಂದ 6, 7 ಮತ್ತು 8ರಂದು ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ತಿಳಿಸಿದರು.
ಪಟ್ಟಣದ ಜಿಪಿಜಿ ಬಾಲಕರ ಕಾಲೇಜಿನಲ್ಲಿ ಮಿಂಚಿನ ನೊಂದಣಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಅರ್ಹ ಮತದಾರರು ಪೂರಕ ದಾಖಲೆಗಳೊಂದಿಗೆ ನಮೂನೆ 6ರಲ್ಲಿ ಅರ್ಜಿಯನ್ನು ಆನ್ಲೈನ್ ಅಥವಾ ನೇರವಾಗಿ ತಹಸೀಲ್ದಾರ್ ಕಾರ್ಯಾಲಯದ ಮತಗಟ್ಟೆ ಅಧಿಕಾರಿಗಳ ಮೂಲಕ ಸಲ್ಲಿಸಬಹುದು ಎಂದರು. ಈ ಕುರಿತು ವಿದ್ಯಾಥಿಗಳು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಮನೆಗಳಲ್ಲಿರುವ 18 ವರ್ಷ ತುಂಬಿದ ಯುವಕ-ಯುವತಿಯರು ತಮ್ಮ ಹೆಸನ್ನುನೋಂದಾಯಿಸಲು ತಿಳಿಸಿದರು. ಜಿಪಿಜಿ ಬಾಲಕರ ಕಾಲೇಜಿನ ಪ್ರಾಚಾರ್ಯ ಕೋರಿ ಹಾಲೇಶ್, ಉಪ ಪ್ರಾಚಾರ್ಯ ಕೋಟೆಪ್ಪ, ಜಿಬಿಆರ್ ಪಪೂ ಕಾಲೇಜಿನ ಪ್ರಾಚಾರ್ಯ ಎಚ್.ಟಿ. ಶ್ರೀನಿವಾಸ ನಾಯಕ್, ತಾಲೂಕು ಆಫೀಸಿನ ಅಕ್ಕಸಾಲಿ ಅಂಬರೀಷ್, ಉಪನ್ಯಾಸಕ ಸಂಘದ ತಾಲೂಕು ಘಟಕದ ಅಧ್ಯಕ್ಷ ಕೆ. ದ್ಯಾಮಜ್ಜ, ಎರಡೂ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.