ಆಹಾರಕ್ಕಾಗಿ ಅಲೆಮಾರಿ ಜನಾಂಗದ ಅಲೆದಾಟ
Team Udayavani, Mar 28, 2020, 2:16 PM IST
ಹರಪನಹಳ್ಳಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ದೇಶವೇ ಲಾಕ್ಡೌನ್ ಆಗಿರುವುದರಿಂದ ತಾಲೂಕಿನ ಹಲುವಾಗಲು ಗ್ರಾಮದಲ್ಲಿ ವಾಸವಾಗಿರುವ ಅಲೆಮಾರಿ ಶಿಂದೋಳ್ ಸಮುದಾಯದ ಸುಮಾರು 35 ಕುಟುಂಬಗಳು ಆಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ.
ಕಳೆದ 30 ವರ್ಷಗಳಿಂದ ಹಲುವಾಗಲು ಗ್ರಾಮದ ಹೊರವಲಯದಲ್ಲಿ ಜೋಪಡಿ ಹಾಕಿಕೊಂಡು ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿರುವ ಶಿಂದೋಳ್ ಸಮುದಾಯದವರು ಪ್ರತಿನಿತ್ಯದುರುಗಮ್ಮ, ಸುಂಕಲಮ್ಮ ಎಂಬ ದೇವರು ಹೊತ್ತು ಬರುವ ಪುಡಿಗಾಸಿನಲ್ಲಿ ಜೀವನ ನಡೆಸುತ್ತಿದ್ದರು. ಆದರೆ ಕೋವಿಡ್ 19 ಅಟ್ಟಹಾಸ ಮೆರೆಯುತ್ತಿರುವುದರಿಂದ ಕಳೆದ ಒಂದು ವಾರದಿಂದ ಗ್ರಾಮದೊಳಗೆ ಇವರನ್ನು ಜನರು ಬಿಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಆಹಾರವಿಲ್ಲದೇ ಜೀವನ ನಡೆಸುವುದು ಕಷ್ಟವಾಗಿದೆ. ಜೋಪಡಿಗಳಿಂದ ಹೊರಬರುವಂತಿಲ್ಲ, ಗ್ರಾಮದಲ್ಲಿ ಕಾಲಿಡುವಂತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆಹಾರ ಧಾನ್ಯ ಮತ್ತು ದಿನಬಳಕೆ ವಸ್ತುಗಳಿಲ್ಲದೇ ಹಸಿವಿನಿಂದ ನರಳುವಂತಾಗಿದೆ. ಚಿಕ್ಕ ಚಿಕ್ಕ ಮಕ್ಕಳು ಹಸಿವಿನಿಂದ ನರಳುವಂತಹ ಪರಿಸ್ಥಿತಿ ಎದುರಾಗಿದೆ.
ಹೀಗಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಅಂಗಲಾಚಿ ಬೇಡುತ್ತಿದ್ದಾರೆ. ಅಲೆಮಾರಿಗಳ ಕಷ್ಟ ಅರಿತು ಕೂಡಲೇ ತಾಲೂಕು ಆಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿಗಳು ದಿನಬಳಕೆ ವಸ್ತುಗಳು ಮತ್ತು ಆಹಾರ ಧಾನ್ಯ ವಿತರಿಸಬೇಕು ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ದಾವಣಗೆರೆ ಜಿಲ್ಲಾಧ್ಯಕ್ಷ ವಿ. ಸಣ್ಣಅಜ್ಜಯ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಅಲೆಮಾರಿಗಳು, ನಿರ್ಗತಿಕರು, ಭಿಕ್ಷುಕರು ಹಸಿವಿನಿಂದ ನರಳದಂತೆ ಅವರಿಗೆ ಆಹಾರ ಒದಗಿಸಲು ತಂಡ ರಚನೆ ಮಾಡಲಾಗಿದೆ. ತಂಡದಲ್ಲಿರುವಸಿಡಿಪಿಒ ಅವರಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇವೆ. ವರದಿ ಬಂದ ನಂತರ ಆಹಾರ ಸಾಮಗ್ರಿ ಪೂರೈಕೆ ಮಾಡಲಾಗುವುದು.-ಡಾ| ನಾಗವೇಣಿ, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ