ತುಂಗಭದ್ರಾ ಡ್ಯಾಂನಲ್ಲಿ ನೀರು ನಾಯಿಗಳು ಪ್ರತ್ಯಕ್ಷ
Team Udayavani, Oct 8, 2022, 8:02 PM IST
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಇತ್ತೀಚಿಗೆ ನೀರು ನಾಯಿಗಳು ಹೆಚ್ಚಾಗಿ ಪ್ರತ್ಯಕ್ಷವಾಗುತ್ತಿದ್ದು, ಪ್ರವಾಸಿಗರ ಗಮನ ಸೆಳೆಯುತ್ತಿವೆ. ಈ ವರ್ಷದಲ್ಲಿ ನಾಲ್ಕೈದು ಬಾರಿ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ ಕಾರಣ ನೀರುನಾಯಿಗಳು ಮೇಲೆ ಕಾಣಸಿಗುತ್ತಿವೆ.
ನೀರು ನಾಯಿಗಳು ಸ್ವಚ್ಚಂದವಾಗಿ ಆಟವಾಡುವುದನ್ನು ಕಂಡು ಜನರು ಕೂಡ ಖುಷಿಯಾಗಿದ್ದಾರೆ. ಈಗಾಗಲೇ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಈಚೆಗೆ ನೀರು ನಾಯಿಗಳು ಹೆಚ್ಚೆಚ್ಚು ಕಂಡು ಬರತೊಡಗಿವೆ.
ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದಲ್ಲಿ ಅಪರೂಪದ ಪ್ರಾಣಿ ನೀರು ನಾಯಿಗಳು ಕಂಡು ಬರುತ್ತಿರುವುದು ವನ್ಯಜೀವಿ ಪ್ರೇಮಿಗಳಿಗೆ ಖುಷಿ ತಂದಿದೆ. ಈಗಾಗಲೇ ಸರ್ಕಾರ ತುಂಗಭದ್ರಾ ಜಲಾಶಯದಿಂದ ಕಂಪ್ಲಿ ಸೇತುವೆ ವರೆಗಿನ ಪ್ರದೇಶವನ್ನು ನೀರುನಾಯಿ ಸಂರಕ್ಷಣಾ ಪ್ರದೇಶ ಎಂದು ಘೋಷಿಸಿದೆ.
ತುಂಗಭದ್ರಾ ಜಲಾಶಯದ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ನೀರು ನಾಯಿ ಕಂಡು ಹಿರಿಹಿರಿ ಹಿಗ್ಗುತ್ತಿದ್ದಾರೆ. ದಾವಣಗೆರೆಯ ಸೂಳೆಕೆರೆ ಭಾಗದಲ್ಲೂ ನೀರುನಾಯಿಗಳು ಕಂಡು ಬರುತ್ತಿವೆ. ಸೂಕ್ಷ್ಮ ಜೀವಿಗಳು ಕಂಡುಬರುತ್ತಿರುವುದು ವನ್ಯಜೀವಿ ಪ್ರೇಮಿಗಳಲ್ಲಿ ಕೂಡ ಆಶಾಭಾವ ಒಡಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?