ಬಸ್‌ ಹತ್ತಲು ಬಂತು ವ್ಹೀಲ್‌ಚೇರ್‌


Team Udayavani, Jan 26, 2019, 8:06 AM IST

26-january-12.jpg

ಹೊಸಪೇಟೆ: ಅಂಗವಿಕಲ ಪ್ರಯಾಣಿಕರ ಸುರಕ್ಷಿತ ದೃಷ್ಟಿಯಿಂದ ಹೊಸಪೇಟೆ ಕೇಂದ್ರೀಯ ಬಸ್‌ ನಿಲ್ದಾಣದಲ್ಲಿ ವ್ಹೀಲ್‌ಚೇರ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಅಂಗವಿಕಲ ಪ್ರಯಾಣಿಕರು ಮೆಟ್ಟಿಲು ತುಳಿಯದಂತೆ, ವ್ಹೀಲ್‌ಚೇರ್‌ ಮೂಲಕ ಸುಲಭವಾಗಿ ಬಸ್‌ನೊಳಗೆ ಪ್ರವೇಶ ಮಾಡುವಂತ ಸೌಲಭ್ಯವನ್ನು ಮೊದಲ ಬಾರಿಗೆ ಈಶಾನ್ಯ ಸಾರಿಗೆ ಸಂಸ್ಥೆ ಕೈಗೊಂಡಿದೆ.

70ನೇ ಗಣರಾಜ್ಯೋತ್ಸವ ಸಂಭ್ರಮದ ಅಂಗವಾಗಿ ಈ ಪರಿಸ್ನೇಹಿ ಸೌಲಭ್ಯವನ್ನು ಸಾರಿಗೆ ಸಂಸ್ಥೆ ಲೋಕಾರ್ಪಣೆಗೊಳಿಸಲು ಸಾರಿಗೆ ಸಂಸ್ಥೆ ಮುಂದಾಗಿದ್ದು, ಈಶಾನ್ಯ ವಲಯದಲ್ಲಿಯೇ ಈ ಯೋಜನೆ ಯಶ್ವಸಿಯಾಗಿ ಕಾರ್ಯ ರೂಪಕ್ಕೆ ಬಂದಿದೆ.

ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣ ಬೆಳೆಸುವ ಅಂಗವಿಕಲರು, ಪ್ರಯಾಸವಿಲ್ಲದಂತೆ ಸುರಕ್ಷಿತವಾಗಿ ಬಸ್‌ನೊಳಗೆ ತೆರಳಿ ಸುಖಕರ ಪ್ರಯಾಣ ಬೆಳೆಸಬೇಕು ಎಂಬ ಹಿನ್ನ್ನೆಲೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಹೊಸಪೇಟೆ ಉಪವಿಭಾಗ) ಈ ಸೌಲಭ್ಯವನ್ನು ಜಾರಿಗೆ ತಂದಿದೆ.

ನೇರವಾಗಿ ವ್ಹೀಲ್‌ಚೇರ್‌ ಬಸ್‌ನಲ್ಲಿ ತೆರಳಲು ಸುಸಜ್ಜಿತವಾದ ಕಬ್ಬಿಣದ ರ್‍ಯಾಂಪ್‌ ನಿರ್ಮಿಸಿ ರ್‍ಯಾಂಪ್‌ಗೆ ವ್ಹೀಲ್‌ಗಳನ್ನು ಅಳವಡಿಸಲಾಗಿದೆ. ಬಸ್‌ನೊಳಗೆ ತೆರಳಿದ ಬಳಿಕ ವ್ಹೀಲ್‌ಚೇರ್‌ ಹಾಗೂ ರ್‍ಯಾಂಪ್‌ ಬಸ್ಸಿನಿಂದ ಹೊರ ತೆಗೆಯಲಾಗುತ್ತದೆ. ಈ ಕಾರ್ಯವನ್ನು ಸಾರಿಗೆ ಸಂಸ್ಥೆ ಸಿಬ್ಬಂದಿಗಳು ನಿರ್ವಹಿಸುತ್ತಾರೆ. ಗುರುವಾರದಿಂದಲೇ ಬಸ್‌ ನಿಲ್ದಾಣದಲ್ಲಿ (ಜ.24) ಈ ವ್ಹೀಲ್‌ಚೇರ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈಗಾಗಲೇ ಹತ್ತಾರು ಅಂಗವಿಕಲ ಪ್ರಯಾಣಿಕರು ವ್ಹೀಲ್‌ಚೇರ್‌ ಸಹಾಯದಿಂದ ಬಸ್‌ನೊಳಗೆ ತೆರಳಿ ಪ್ರಯಾಣ ಬೆಳಸಿದ್ದಾರೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಶೀನಯ್ಯ ತಿಳಿಸಿದ್ದಾರೆ.

ವಯಸ್ಸಿನ ಜೊತೆಯಲ್ಲಿ ನನಗೆ ಆರೋಗ್ಯ ಕೂಡ ಕ್ಷೀಣವಾಗಿದೆ. ಬಸ್ಸಿನ ಮೆಟ್ಟಿಲು ಹತ್ತಿ ಒಳ ನಡೆಯಲು ನನಗೆ ಶಕ್ತಿ ಆಗುತ್ತಿಲ್ಲ. ಬಸ್‌ನಲ್ಲಿ ಹೇಗೆ ಹತ್ತಬೇಕು ಎಂದು ಚಿಂತನೆಯಲ್ಲಿದ್ದಾಗ ನಿಲ್ದಾಣದಲ್ಲಿದ್ದ ವ್ಹೀಲ್‌ಚೇರ್‌ನ ಮೂಲಕ ನನ್ನನ್ನು ಸಾರಿಗೆ ಸಿಬ್ಬಂದಿಗಳು ಬಸ್‌ನೊಳಗೆ ಕಳುಹಿಸಿದರು. ಈ ವ್ಯವಸ್ಥೆ ವೃದ್ಧರಿಗೆ ಮಾತ್ರವಲ್ಲದೇ, ಅಂಗವಿಕಲರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೆ ತುಂಬ ಅನುಕೂಲ.
ಹುಸೇನ್‌ಸಾಬ್‌, ಪ್ರಯಾಣಿಕರು.

ಸುಪ್ರೀಂ ಕೋರ್ಟ್‌ ಆದೇಶದ ಹಿನ್ನ್ನೆಲೆಯಲ್ಲಿ ಅಂಗವಿಕಲ ಪ್ರಯಾಣಿಕರಿಗಾಗಿ ಪರಿಸರ ಸ್ನೇಹಿ ಸೌಲಭ್ಯ ಕಲ್ಪಿಸಬೇಕು ಎಂಬ ಉದ್ದೇಶದಿಂದ ಹೊಸಪೇಟೆ ವಿಭಾಗೀಯ ವ್ಯಾಪ್ತಿಯಲ್ಲಿ ವ್ಹೀಲ್‌ಚೇರ್‌ ವ್ಯವಸ್ಥೆಯನ್ನು ಸಾರಿಗೆ ಸಂಸ್ಥೆ ಕೈಗೊಂಡಿದೆ. ಈಶಾನ್ಯ ವಲಯದಲ್ಲಿ ಪ್ರಥಮ ಬಾರಿಗೆ ಹೊಸಪೇಟೆಯಲ್ಲಿ ಈ ಸೌಲಭ್ಯ ಕಾರ್ಯ ರೂಪಕ್ಕೆ ತರಲಾಗಿದೆ. ಹಂತ, ಹಂತವಾಗಿ ಸಂಡೂರು, ಕೂಡ್ಲಿಗಿ, ಹರಿಬೊಮ್ಮನಹಳ್ಳಿ ಸೇರಿದಂತೆ ವಿಭಾಗೀಯ ವ್ಯಾಪ್ತಿಯಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು.
•ಡಿ.ಶೀನಯ್ಯ,
ವಿಭಾಗೀಯ ನಿಯಂತ್ರಣಾಧಿಕಾರಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹೊಸಪೇಟೆ ಉಪವಿಭಾಗ

ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.