ಬಳ್ಳಾರಿಗೆ ಆಗಮಿಸಿದ ಜಮೀರ್ ಅಹಮದ್; ವಶಕ್ಕೆ ಪಡೆದ ಪೊಲೀಸರು
Team Udayavani, Jan 13, 2020, 11:01 AM IST
ಬಳ್ಳಾರಿ: ಶಾಸಕ ಸೋಮಶೇಖರ ರೆಡ್ಡಿ ಮನೆ ಎದುರು ಧರಣಿ ಮಾಡಲು ಬಂದಿದ್ದ ಬೆಂಗಳೂರಿನ ಶಾಸಕ ಜಮೀರ್ ಅಹ್ಮದ್ ರನ್ನು ಬಳ್ಳಾರಿ ಹೊರವಲಯದ ಬೈಪಾಸ್ ರಸ್ತೆ ಬಳಿ ಪೊಲೀಸರು ಬಂಧಿಸಿದರು.
ಶಾಸಕ ಸೋಮಶೇಖರ ರೆಡ್ಡಿ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಅವರು ಶಾಸಕ ಸೊಮಶೇಖರ ರೆಡ್ಡಿಯವರು ಕ್ಷಮೆ ಯಾಚಿಸಬೇಕು. ಅವರನ್ನು ಪೊಲೀಸರು ಬಂಧಿಸಬೇಕು ಎಂದು ಕಳೆದ ವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿ ಒಂದು ವಾರಗಳ ಕಾಲ ಗಡುವು ನೀಡಿದ್ದರು.
ಕ್ಷಮೆ ಯಾಚಿಸದಿದ್ದಲ್ಲಿ ಮುಂದಿನ ಸೋಮವಾರ (ಇಂದು) ರೆಡ್ಡಿ ಮನೆ ಎದುರು ಧರಣಿ ನಡೆಸುವುದಾಗಿ ಹೇಳಿ, ಸಿದ್ದತೆ ನಡೆಸಿದ್ದ ಜಮೀರ್ ಅಹ್ಮದ್ ಅವರನ್ನು ಬಳ್ಳಾರಿ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಪೊಲೀಸರು ಬಂಧಿಸಿ ವಾಪಸ್ ಕರೆದುಕೊಂಡು ಹೋದರು. ಎಸ್ ಪಿ ಸಿ.ಕೆ ಬಾಬಾ ಅವರುಸ್ಥಳಕ್ಕೆ ಆಗಮಿಸಿ ಜಮೀರ್ ಅಹ್ಮದ್ ಅವರನ್ನು ಬಂಧಿಸಿ, ಅವರೊಂದಿಗೆ ವಾಹನದಲ್ಲಿ ತೆರಳಿದರು.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಶಾಸಕ ಸೋಮಶೇಖರ ರೆಡ್ಡಿ ಅವರು ಮುಸಲ್ಮಾರನ್ನು ಗುರಿಯಾಗಿಸಿಕೊಂಡು ಪ್ರಚೋದನೆ ಮಾಡಿದ್ದರು. ಉಫ್ ಎಂದು ಊದಿದರೆ ಗಾಳಿಗೆ ಹೋಗುತ್ತೀರಿ ಎಂದಿದ್ದರು. ಆದರೆ ಇಂದು ನಾನು ಬಳ್ಳಾರಿಗೆ ಬಂದಿದ್ದೇನೆ. ಎಲ್ಲಿದ್ದಾನೆ ಸೋಮಶೇಖರ ರೆಡ್ಡಿಯನ್ನು ಕರೀರಿ. ಊದಿದರೆ ನಾನು ಹೋಗುತ್ತೇನೆ ನೋಡೋಣ ಎಂದು ಸವಾಲು ಹಾಕಿದರು. ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಪೊಲೀಸರು ಬಿಗಿ ಬಂದೋಬಸ್ತ್ ಏಪರ್ಡಿಸಿದ್ದರು. ಕಾಂಗ್ರೆಸ್ ಮುಖಂಡರಾದ ಹನುಮ ಕಿಶೋರ್, ಕುಡಿತಿನಿ ಶ್ರೀನಿವಾಸ್, ಮುನ್ನಾಭಾಯ್ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?