ಆನ್‌ಲೈನ್‌ ಪರೀಕ್ಷಾ ಪದ್ಧತಿ ಬೇಡ

ಪರೀಕ್ಷಾ ಶುಲ್ಕಕ್ಕೆ ವಿಧಿಸಿರುವ ಜಿಎಸ್‌ಟಿ ಕೈಬಿಡಲು ಒತ್ತಾಯ

Team Udayavani, Jan 2, 2020, 3:27 PM IST

2-January-19

ಬಳ್ಳಾರಿ: ಐಟಿಐ ವಿದ್ಯಾರ್ಥಿಗಳಿಗೆ ಆನ್‌ ಲೈನ್‌ ಪರೀಕ್ಷಾ ಪದ್ಧತಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ ಅಖೀಲ ಭಾರತ ಪ್ರಜಾಸತ್ತಾತ್ಮಕ ಯುವಜನರ ಒಕ್ಕೂಟದ ನೇತೃತ್ವದಲ್ಲಿ ಐಟಿಐ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಐಟಿಐ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪರೀಕ್ಷಾ ಪದ್ಧತಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದರಿಂದ ಐಟಿಐ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಗೊಂದಲಕ್ಕೀಡು ಮಾಡಿದೆ. ಕಳೆದ 2019ರ ಆಗಸ್ಟ್‌ ತಿಂಗಳಲ್ಲಿ ಹೊರಬೀಳಬೇಕಿದ್ದ ಪರೀಕ್ಷಾ ಫಲಿತಾಂಶವು ಇನ್ನು ಹೊರಬಿದ್ದಿಲ್ಲ. ಸಪ್ಲಿಮೆಂಟರಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವೂ ಮುಗಿದು ಹೋಗಿದೆ. ಆದರೆ, ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಜತೆಗೆ ಮೊದಲ ಬಾರಿಗೆ ಐಟಿಐ ವಿದ್ಯಾರ್ಥಿಗಳಿಗೂ ಪರೀಕ್ಷಾ ಶುಲ್ಕಕ್ಕೆ ಜಿಎಸ್‌ಟಿ ವಿಧಿಸುವ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಇದು ಅತ್ಯಂತ ಖಂಡನೀಯವಾಗಿದ್ದು, ಆರ್ಥಿಕವಾಗಿ ದುರ್ಬಲ ಕುಟುಂಬಗಳಿಂದ ಬರುವ ಐಟಿಐ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸುವುದೇ ಭಾರವಾಗಿರುವಾಗ ಡಿಜಿಇಟಿ ಆನ್‌ಲೈನ್‌ ಪರೀಕ್ಷಾ ಪದ್ಧತಿ ಜಾರಿಗೆ ತರುವುದು, ಜಿಎಸ್‌ಟಿ ವಿಧಿಸುವುದು ಅತ್ಯಂತ ಖಂಡನೀಯ ಕ್ರಮ ಎಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ.

ಐಟಿಐ ತರಬೇತಿಯು ಕುಶಲತೆ, ಕಾರ್ಯ ಕಲಿಕೆಗೆ ಹೆಚ್ಚು ಒತ್ತು ಇರುವ ತರಬೇತಿ. ಅಲ್ಲಿ ಪ್ರ್ಯಾಕ್ಟಿಕಲ್‌ಗೆ ಥಿಯರಿಗಿಂತ ಹೆಚ್ಚು ಒತ್ತು ಇರುವುದು ಸಹಜ. ಅದಕ್ಕಾಗಿಯೇ ಇದನ್ನು ಕೈಗಾರಿಕಾ ತರಬೇತಿ ಎಂದು ಕರೆಯುವುದು. ಒಬ್ಬ ವ್ಯಕ್ತಿಯು ತರಬೇತಿಯನ್ನು ಪೂರೈಸಿದ ಬಳಿಕ, ಆತನ ಕಲಿಕೆಯ ಮಟ್ಟವನ್ನು ತುಲನೆ ಮಾಡಲು ಆತನ ಕಾರ್ಯ ಕೌಶಲ್ಯ ನೋಡಿ ಮೌಲ್ಯಮಾಪನ ಮಾಡಬೇಕೆ ವಿನಃ ಆನ್‌ ಲೈನ್‌ ಪರೀಕ್ಷೆಯ ಮೂಲಕ ಅದನ್ನು ಮಾಡಲು ಸಾಧ್ಯವಿಲ್ಲ. ಜತೆಗೆ, ಥಿಯರಿ ಭಾಗವು ಪಠ್ಯಕ್ರಮಗಳಲ್ಲಿ ಇನ್ನೂ ಹೆಚ್ಚಿರುವ ಇನ್ನಿತರ ಎಂಜಿನಿಯರಿಂಗ್‌ ವಿದ್ಯಾಭ್ಯಾಸ ಕ್ರಮಗಳಿಗೆ ಆನ್‌ಲೈನ್‌ ಪರೀಕ್ಷೆ ಜಾರಿಗೆ ಬಂದಿಲ್ಲದಿರುವುದು. ಈ ಕ್ರಮವು ತರಬೇತಿ ಪಡೆದವರನ್ನು ಸರಿಯಾಗಿ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಸಾಬೀತುಪಡಿಸುತ್ತದೆ.

ಮೇಲಾಗಿ ಆನ್‌ಲೈನ್‌ ಪರೀಕ್ಷೆಗೆ ಪೂರ್ವ ತಯಾರಿಯನ್ನೇ ಮಾಡಿಕೊಂಡಿಲ್ಲ. ಇಂತಹ ಸಂದರ್ಭದಲ್ಲಿ ಆನ್‌ಲೈನ್‌ ಪರೀಕ್ಷೆ ನಡೆಸುವುದು ಸಮಂಜಸವಲ್ಲ. ಹಾಗಾಗಿ ಆನ್‌ಲೈನ್‌ ಪರೀಕ್ಷಾ ಪದ್ಧತಿ ಕೈ ಬಿಡಬೇಕು. ಪರೀಕ್ಷಾ ಶುಲ್ಕಕ್ಕೆ ವಿಧಿ ಸಿರುವ ಜಿಎಸ್‌ಟಿ ಕೈಬಿಡಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ನಗರದ ಮೋತಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಗಡಗಿ ಚನ್ನಪ್ಪ ವೃತ್ತದ ಮೂಲಕ ಡಿಸಿ ಕಚೇರಿಗೆ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಸರ್ಕಾರ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಎಐಡಿವೈಒ ಜಗದೀಶ್‌ ನೇಮಕಲ್ಲು, ಗೋವಿಂದ್‌, ಜಿಲ್ಲಾ ಸದಸ್ಯ ಅಭಿಷೇಕ್‌ ಎಸ್‌. ಕಾಳೆ, ಸಂಘಟನಾಕಾರ ಕೇಶವ್‌, ನಿಖೀಲ್‌, ನವೀನ್‌, ಈಶ್ವರ್‌, ಲೋಕೇಶ್‌, ಭೀಮೇಶ್‌, ಗಣೇಶ್‌, ಬಿ.ಎಂ.ವಿನಾಯಕ, ಹರಿಕೃಷ್ಣಾ, ಮಂಜುನಾಥ್‌, ಆದರ್ಶ ಸೇರಿದಂತೆ ನೂರಾರು ಐಟಿಐ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.