ಆರೋಗ್ಯಕರ ವಾತಾವರಣಕ್ಕೆ ಪ್ಲಾಸ್ಟಿಕ್ ಬಳಕೆ ಕೈಬಿಡಿ


Team Udayavani, Nov 4, 2019, 3:23 PM IST

4-November-36

ಬಳ್ಳಾರಿ: ಸ್ವಚ್ಛ ಹಾಗೂ ಸುಂದರ ಆರೋಗ್ಯಕರ ವಾತಾವರಣ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಇಂದಿನಿಂದಲೇ ಪ್ಲಾಸ್ಟಿಕ್‌ ಬಳಕೆಯನ್ನು ಕೈಬಿಡಬೇಕು ಎಂದು ಆರ್‌ವೈಎಂಇಸಿ ಕಾಲೇಜು ಲೀಡ್‌ ಸಂಘಟನೆ ಮುಖ್ಯಸ್ಥ ಜಿ.ಎಂ.ಜಗದೀಶ್‌ ಹೇಳಿದರು.

ನಗರದ ರಾವ್‌ ಬಹದ್ದೂರ್‌ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಕಾಲೇಜಿನ ಲೀಡ್‌ ಸಂಘಟನೆ ವಿದ್ಯಾರ್ಥಿಗಳು ಮಹಾತ್ಮಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಯಂತಿ ನಿಮಿತ್ತ ಈಚೆಗೆ ಹಮ್ಮಿಕೊಳ್ಳಲಾಗಿದ್ದ ಪ್ಲಾಸ್ಟಿಕ್‌ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ಲಾಸ್ಟಿಕ್‌ ಬಳಕೆಯಿಂದ ಆರೋಗ್ಯಕ್ಕೆ ಹಾನಿಯೇ ಹೆಚ್ಚು. ಇದರಿಂದ ಪರಿಸರಕ್ಕ ಯಾವುದೇ ಉಪಯೋಗವಿಲ್ಲ ಎಂಬುದು ಪ್ರತಿಯೊಬ್ಬರ ಅರಿವಿಗಿದ್ದರೂ, ಪ್ಲಾಸ್ಟಿಕ್‌ ಬಳಕೆ ಮಾತ್ರ ಎಗ್ಗಿಲ್ಲದೆ ನಡೆಯುತ್ತಿದೆ. ಹಾಗಾಗಿ ಪ್ರತಿಯೊಬ್ಬರೂ ಇಂದಿನಿಂದಲೇ ಪ್ಲಾಸ್ಟಿಕ್‌ ಬಳಕೆಯನ್ನು ಕೈಬಿಟ್ಟು, ಆರೋಗ್ಯಕರ, ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಪ್ಲಾಸ್ಟಿಕ್‌ ಬಳಕೆಯಿಂದಾಗುವ ದುಷ್ಪರಿಣಾಮಗಳು, ಆರೋಗ್ಯದ ಮೇಲೆ ಬೀರುವ ಅಡ್ಡ ಪರಿಣಾಮಗಳ ಕುರಿತು ರಾಜ್ಯ ಸರ್ಕಾರ ವಿವಿಧ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದೆ.

ಜತೆಗೆ ನಮ್ಮ ಕಾಲೇಜು ಆಶ್ರಯದಲ್ಲಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಬಹುತೇಕ ಕಡೆ ಪ್ಲಾಸ್ಟಿಕ್‌ ಬಳಕೆ ನಿರಂತರ ನಡೆದಿದೆ. ಕೂಡಲೇ ಪ್ರತಿಯೊಬ್ಬರೂ ಇಂದೇ ತ್ಯಜಿಸಬೇಕು ಎಂದು ಮನವಿ ಮಾಡಿದರು.

ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಪ್ಲಾಸ್ಟಿಕ್‌ ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವದರ ಜೊತೆಗೆ, ಪ್ಲಾಸ್ಟಿಕ್‌ ಮುಕ್ತ ಭಾರತ ಅಭಿಯಾನದ ಯಶಸ್ವಿಗೆ ಸಾಕಷ್ಟು ಶ್ರಮಿಸುತ್ತಿದ್ದಾರೆ.

ಮಹನೀಯರ ಜಯಂತ್ಯುತ್ಸವ ನಿಮಿತ್ತ ನಮ್ಮ ಕಾಲೇಜಿನ ಲೀಡ್‌ ವಿದ್ಯಾರ್ಥಿಗಳು ಕಾಲೇಜಿನ ಸ್ಥಳವನ್ನು ಸಂಪೂರ್ಣ ಸ್ವಚ್ಚ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಾಲೇಜಿನ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಎಲ್ಲಂದರಲ್ಲಿ ಎಸೆದಿದ್ದ ಪ್ಲಾಸ್ಟಿಕ್‌ ಬಾಟಲ್‌ ಗಳನ್ನು, ಪ್ಲಾಸ್ಟಿಕ್‌ ಪೇಪರ್‌ ಗಳನ್ನು ಸಂಗ್ರಹಿಸಿ, ಸ್ವತ್ಛಗೊಳಿಸಿದ್ದಾರೆ. ಸ್ವಚ್ಚ ಭಾರತ ಸುಂದರ ಭಾರತದ ಹೆಸರಿನಲ್ಲಿ ತಾಂತ್ರಿಕ ವಿದ್ಯಾರ್ಥಿಗಳು ಕಸದ ಪೊರಕೆಯನ್ನು ಹಿಡಿದ ಅತ್ಯಂತ ಉತ್ಸಾಹದಿಂದ ಸ್ವತ್ಛತಾ ಕಾರ್ಯದಲ್ಲಿ
ಭಾಗವಹಿಸಿ ಇತರರಿಗೆ ಮಾದರಿಯಾದರು.

ಈ ಸಂದರ್ಭದಲ್ಲಿ ಲೀಡ್‌ ನ ವಿದ್ಯಾರ್ಥಿನಿ ಧರಣಿ ಮಾತನಾಡಿ, ದಿನದಿಂದ ದಿನಕ್ಕೆ ಪ್ಲಾಸ್ಟಿಕ್‌ ಬಳಕೆ ಹೆಚ್ಚಾಗುತ್ತಿದ್ದು, ಇದರಿಂದ ಪರಿಸರಕ್ಕೆ ವಿಪರೀತವಾದ ತೊಂದರೆ ಆಗುತ್ತಿದೆ. ಬಳಸಿದ ಪ್ಲಾಸ್ಟಿಕ್‌ ಮಣ್ಣಲ್ಲಿ ಕೊಳೆಯದೆ, ನದಿಗಳ ಮೂಲಕ ಸಮುದ್ರವನ್ನು ಸೇರಿ ಜಲಚರ ಜೀವಿಗಳಿಗೂ ಕಂಟಕವಾಗಿವೆ. ಸರಕಾರದ ಜೊತೆ ಜೊತೆಗೆ ಜನಗಳೂ ಸಹ ಸಹಕರಿಸಿ ಪ್ಲಾಸ್ಟಿಕ್‌ ಬಳಸದಂತೆ
ಮುಂಜಾಗ್ರತೆ ವಹಿಸುವ ಅಗತ್ಯತೆಯಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಮಹಾಂತೇಶ, ರಾಕೇಶ, ಸಂಜಯ, ರಶ್ಮಿ, ರಂಗನಾಥ, ಅಮೃತಾ, ಧರಣಿ, ಗೌಸಿಯಾ ಬೇಗಂ, ಮೈಮುದಾ ಬೇಗಂ, ವಿಷ್ಣು, ವಿಕಾಸ, ರುದ್ರೇಶ, ರಾಜಶೇಖರ, ವರುಣ್‌, ಇಮ್ರಾನ್‌ ಅಲಿ, ಕುಸುಮ, ಸಹನಾ ಕೆಂಬಾವಿ, ಕಿರಣ್‌, ಆಕಾಶ, ಅಬಿಶೇಕ, ಶ್ರಾವಣಿ ಸ್ರುಜನಾ,ರಶ್ಮಿ ಪಿ ಜಾದವ್‌, ಸುನಿಲ್‌ ಕುಮಾರ,ವಿಜಯಲಕ್ಷ್ಮೀ ಇತರರು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.