ಪುನರ್ವಸತಿ ಕೇಂದ್ರ ಶೀಘ್ರ ಪ್ರಾರಂಭ


Team Udayavani, Dec 28, 2019, 6:17 PM IST

28-December-28

ಬಳ್ಳಾರಿ: ಮಾನಸಿಕ, ದೈಹಿಕ ವಿಶೇಷ ಚೇತನ ಮಕ್ಕಳ ಪುನರ್ವಸತಿ ಕೇಂದ್ರ, ಸೆಮಿನಾರ್‌ ಸಭಾಂಗಣ ನಿರ್ಮಿಸಲು ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿನ 2 ಎಕರೆ ಪ್ರದೇಶ ಗುರುತಿಸಲಾಗಿದ್ದು, ಶೀಘ್ರ ಕಟ್ಟಡ ಕಾಮಗಾರಿ ಆರಂಭವಾಗಲಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಕಾರ್ಯದರ್ಶಿ ಡಾ| ಬಿ. ಯೋಗಾನಂದ ರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ಐಎಂಎ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಾಪ್‌ ರೆಡ್ಡಿಯವರ ಸಹಯೋಗದೊಂದಿಗೆ ನಮ್ಮ ಸಂಘ ಕೇವಲ ವೈದ್ಯಕೀಯ ಸೇವೆ ಮಾತ್ರ ಸಲ್ಲಿಸದೆ, ಸಾಮಾಜಿಕ ಕಾರ್ಯಗಳ ಕಡೆ ಗಮನ ಹರಿಸಬೇಕೆಂಬ ಉದ್ದೇಶ ಇಟ್ಟುಕೊಂಡು ಈ ಕಾರ್ಯಕ್ಕೆ ಮುಂದಾಗಿದೆ. ಇದರ ಭಾಗವಾಗಿ ಅಂಗವಿಕಲ ಮಕ್ಕಳಿಗೆ ವಸತಿ ಸಹಿತ ಪುನರ್ವಸತಿ ಕೇಂದ್ರದ ಜೊತೆ ಜೊತೆಗೆ ನಮ್ಮ ಸಂಘದ ಸೆಮಿನಾರ್‌ಗಳನ್ನು ನಡೆಸಲು ಬೇಕಾಗುವ ಸಭಾಂಗಣ ನಿರ್ಮಿಸಲಾಗುವುದು ಎಂದರು.

ಈ ಮಕ್ಕಳಿಂದ ಪೋಷಕರಿಗಾಗುವ ಹೊರೆಯನ್ನು ಸ್ವಲ್ಪ ಮಟ್ಟಿಗೆ ಇಳಿಸುವ ಪ್ರಯತ್ನ ಇದಾಗಿದೆ. ಬಡ ಜನತೆಗೆ ಇದು ಅನುಕೂಲವಾಗಲಿದೆ. ಕೇಂದ್ರವನ್ನು ಮೊದಲಿಗೆ 40 ಮಕ್ಕಳಿಗೆ ಆಗುವಷ್ಟು ನಿರ್ಮಿಸಲಾಗುವುದು. ನಂತರ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು. ಒಂದೂವರೆ ವರ್ಷದಲ್ಲಿ ಕೆಲಸ ಮುಗಿಸಿ ಕೇಂದ್ರ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಜೆಡಿಎಸ್‌ ಮುಖಂಡ ಪ್ರತಾಪ್‌ ರೆಡ್ಡಿ ಮಾತನಾಡಿ, ಸಂಘದವರು ಕೇಂದ್ರ ಆರಂಭಕ್ಕೆ ಬೇರೆಡೆ ಸ್ಥಳ ಹುಡುಕುತ್ತಿರುವ ಮಾಹಿತಿ ತಿಳಿದಿತ್ತು. ನಮಗೂ ಇಂಥ ಆಸ್ಪತ್ರೆ ನಿರ್ಮಿಸುವ ಕನಸಿತ್ತು. ಹಾಗಾಗಿ ಸಂಘಕ್ಕೆ ಭೂಮಿ ನೀಡುವ ನಿರ್ಧಾರ ಕೈಗೊಂಡೆ ಎಂದರು.

ಉತ್ತರ ಕರ್ನಾಟಕ, ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಇಂತಹ ಕೇಂದ್ರವಿಲ್ಲ. ಪೌಷ್ಟಿಕತೆ ಕೊರತೆ, ಗರ್ಭಿಣಿಯರ ಆರೋಗ್ಯ ಸಮಸ್ಯೆ ಮತ್ತು ಹೆರಿಗೆ ಸಮಯದ ತೊಂದರೆಗಳಿಂದ ಇಂತಹ ಮಕ್ಕಳು ಜನಿಸುತ್ತಾರೆ. ನಾವು ಎನ್‌ ಪಿಆರ್‌ ಫೌಂಡೇಷನ್‌ ವತಿಯಿಂದ ಸಂಘದ ಜೊತೆ ಸೇರಿ ಈ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಅವರು ತಿಳಿಸಿದರು.

ಬೇರೆ ಪ್ರದೇಶಗಳಿಗೆ ಚಿಕಿತ್ಸೆಗೆ ಹೋದಾಗ ಮಕ್ಕಳನ್ನು ಅಲ್ಲಿ ದಾಖಲಿಸಿ, ಪೋಷಕರು ಸಮೀಪದಲ್ಲಿ ಮನೆ ಬಾಡಿಗೆ ಪಡೆದು ಚಿಕಿತ್ಸೆ ಕೊಡಿಸಬೇಕಾಗುತ್ತದೆ. ಆದರೆ ನಮ್ಮ ಕೇಂದ್ರದಲ್ಲಿ ಆ ಸಮಸ್ಯೆ ಇಲ್ಲ. ಮಕ್ಕಳಿಗೆ ನಮ್ಮಲ್ಲಿಯೇ ವಸತಿ ನೀಡುತ್ತೇವೆ. ಪೋಷಕರು ಬಂದು ನೋಡಿಕೊಂಡು ಹೋಗಬಹುದು ಅಥವಾ ಅಲ್ಲಿಯೇ ತಂಗಬಹುದು ಎಂದರು. ಸಂಘದ ಜಿಲ್ಲಾ ಅಧ್ಯಕ್ಷ ಡಾ| ಅರುಣ್‌.ಎಸ್‌.ಕೆ ಮಾತನಾಡಿದರು. ಸಂಘದ ಡಾ| ರವಿಶಂಕರ ಸಜ್ಜನ್‌, ಬಿ.ಕೆ. ಸುಂದರ್‌, ಡಾ|ಮಹಿಪಾಲ್‌, ಡಾ. ಶ್ರೀಕಾಂತ್‌, ಡಾ| ಭರತ್‌ ಇದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.