ವಿಜಯನಗರ ಸಾಮ್ರಾಜ್ಯಕ್ಕೆ ಆನಂದ್‌ ಲೆಕ್ಕಾಚಾರ!

•ಪ್ರತ್ಯೇಕ ಜಿಲ್ಲೆ ಕೂಗಿಗೆ ಮತ್ತೆ ಬಲ•ಉಜ್ಜಯಿನಿ ಶ್ರೀಗಳ ಬೆಂಬಲ ಕೋರಿದ ಆನಂದ ಸಿಂಗ್‌•ಸಿಎಂ ಭೇಟಿಗೆ ಸಿದ್ಧತೆ

Team Udayavani, Sep 16, 2019, 11:15 AM IST

Sepctember-2

ಬಳ್ಳಾರಿ: ಅನರ್ಹ ಶಾಸಕ ಬಿ.ಎಸ್‌. ಆನಂದ್‌ಸಿಂಗ್‌ ಅವರು ವಿಜಯನಗರ ಜಿಲ್ಲೆಯನ್ನಾಗಿಸುವ ಸಲುವಾಗಿ ಉಜ್ಜಯಿನಿ ಶ್ರೀಗಳನ್ನು ಭೇಟಿಯಾಗಿ ಬೆಂಬಲ ಕೋರಿದರು.

•ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ವಿಜಯನಗರ ಜಿಲ್ಲೆ ರಚನೆಗಾಗಿ ಬೇಡಿಕೆಯಿಟ್ಟು ಇದಕ್ಕೆ ಮೈತ್ರಿ ಸರ್ಕಾರದಿಂದ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಅನರ್ಹ ಶಾಸಕ ಬಿ.ಎಸ್‌. ಆನಂದ್‌ಸಿಂಗ್‌ ಈಗ ಮತ್ತೆ ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ.

ಬಿಜೆಪಿ ಸರ್ಕಾರ ರಚನೆಗೆ ತೆರೆಮರೆಯಲ್ಲಿದ್ದು ಬೆಂಬಲಿಸಿದ್ದ ಸಿಂಗ್‌ ಈಗ ಹೊಸಪೇಟೆ ತಾಲೂಕು ಜಿಲ್ಲೆಯಾಗಿಸುವ ನಿಟ್ಟಿನಲ್ಲೂ ಸದ್ದಿಲ್ಲದೇ ತಮ್ಮ ಕಾರ್ಯ ಮುಂದುವರಿಸಿದ್ದು, ಇದರ ಹಿಂದೆ ರಾಜಕೀಯ ಹಿತಾಸಕ್ತಿ ಅಡಗಿದೆಯೇ ಎಂಬ ಪ್ರಶ್ನೆಯೂ ಮೂಡಿದೆ. ತಮ್ಮ ಬೇಡಿಕೆ ಮುಂದಿಟ್ಟು ಆನಂದ್‌ ಸಿಂಗ್‌ ಸಿಎಂ ಯಡಿಯೂರಪ್ಪ ಬಳಿಗೆ ನಿಯೋಗ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಜ್ಜಯಿನಿ ಪೀಠದ ಶ್ರೀಗಳ ಬೆಂಬಲ ಕೋರಿದ್ದು, ತಾಲೂಕಿನ ಮುಖಂಡರನ್ನು ಸಹ ಸಂಘಟನೆಯಲ್ಲಿ ತೊಡಗಿಸಿದ್ದಾರೆ.

ಹೊಸಪೇಟೆ ತಾಲೂಕನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡಬೇಕೆಂಬ ಕೂಗು ಕಳೆದ ಒಂದು ದಶಕದಿಂದ ಕೇಳಿಬರುತ್ತಿದೆ. ಇದಕ್ಕಾಗಿ ಹೊಸಪೇಟೆಯಲ್ಲಿ ಹಲವಾರು ಹೋರಾಟಗಳು ನಡೆದಿವೆ. ಆದರೆ ಕೆಲ ವರ್ಷಗಳಿಂದ ಕ್ಷೀಣಿಸಿದ್ದ ಈ ಕೂಗಿಗೆ ಇದೀಗ ಶಾಸಕ ಆನಂದ್‌ಸಿಂಗ್‌ ಮತ್ತೆ ಬಲ ತುಂಬುತ್ತಿದ್ದಾರೆ.

ಪ್ರತ್ಯೇಕ ಜಿಲ್ಲೆ ಬೇಡಿಕೆ ಇಟ್ಟಿದ್ದ ಆನಂದ ಸಿಂಗ್‌ ಇದಕ್ಕೆ ಸ್ಪಂದನೆ ದೊರೆತಿಲ್ಲ ಎಂಬ ಕಾರಣಕ್ಕೆ ಇತ್ತೀಚೆಗಷ್ಟೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪರೋಕ್ಷವಾಗಿ ಸಹಕರಿಸಿರುವ ಸಿಂಗ್‌ ಈಗ ಮತ್ತೆ ತಮ್ಮ ಬೇಡಿಕೆಯನ್ನು ಸರ್ಕಾರದ ಮುಂದಿಡಲು ಮುಂದಾಗಿದ್ದು, ಇದರ ಭಾಗವಾಗಿ ಸೆ.18ರಂದು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ಸಿದ್ಧತೆ ನಡೆಸಿದ್ದಾರೆ. ಅದಕ್ಕಾಗಿ ಉಜ್ಜಯಿನಿ ಪೀಠದ ಶ್ರೀಗಳನ್ನು ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಇದಕ್ಕೆ ಶ್ರೀಗಳಿಂದಲೂ ಸಕಾರಾತ್ಮಕ ಸ್ಪಂದನೆ ಲಭಿಸಿದೆ ಎನ್ನಲಾಗುತ್ತಿದೆ. ವಿಜಯನಗರ ಜಿಲ್ಲೆಯಾದರೆ ಇದರ ವ್ಯಾಪ್ತಿಗೆ ಬರುವ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ನೇಮಿರಾಜ ನಾಯ್ಕ, ಹಡಗಲಿ ಮಾಜಿ ಶಾಸಕ ಚಂದ್ರನಾಯ್ಕ ಸೇರಿದಂತೆ ರಾಜಕೀಯ ಮುಖಂಡರು, ಜನರನ್ನು ಸಹ ಸಂಘಟನೆಯಲ್ಲಿ ತೊಡಗಿಸಿದ್ದಾರೆ.

ಬಳ್ಳಾರಿಯಿಂದ ಮುಕ್ತಿ; ರಾಜಕೀಯ ಹಿತಾಸಕ್ತಿ? ಬಳ್ಳಾರಿ ಎಂದಾಕ್ಷಣ ಸಚಿವ ಬಿ. ಶ್ರೀರಾಮುಲು, ರೆಡ್ಡಿ ಸಹೋದರರದ್ದೇ ಹವಾ. ವಿಜಯನಗರ ಕ್ಷೇತ್ರದ ಅನರ್ಹ ಶಾಸಕ ಬಿ.ಎಸ್‌.ಆನಂದ್‌ಸಿಂಗ್‌ ಸಹ ರೆಡ್ಡಿ ಪಾಳಯದಲ್ಲೇ ಬೆಳೆದ ಪ್ರಭಾವಿ ರಾಜಕಾರಣಿ. ಆದರೆ ಸದ್ಯಕ್ಕೆ ಆನಂದ್‌ಸಿಂಗ್‌ ರಾಜಕೀಯವಾಗಿ ಮತ್ತಷ್ಟು ಬೆಳೆಯಲು ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರ ವರ್ಚಸ್ಸು ಅಡ್ಡಿಯಾಗುತ್ತಿದೆ. ವಿಜಯನಗರ ಕ್ಷೇತ್ರ ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲೇ ಇರುವುದರಿಂದ ಸ್ವತಂತ್ರವಾಗಿ ರಾಜಕೀಯದಲ್ಲಿ ಬೆಳೆಯುವುದು ಅಷ್ಟು ಸುಲಭವಲ್ಲ. ಈ ತಾಂತ್ರಿಕ ಸಮಸ್ಯೆ ಆನಂದ್‌ಸಿಂಗ್‌ ಅವರಿಗೆ ಅಡ್ಡಿಯಾಗುತ್ತಿದೆ. ಹಾಗಾಗಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿಸಿ ಬಳ್ಳಾರಿ ಜಿಲ್ಲೆಯಿಂದ ಬೇರ್ಪಟ್ಟರೆ ರೆಡ್ಡಿ, ರಾಮುಲು ಪಾಳಯದಿಂದ ಹೊರಬಂದು ಜಿಲ್ಲೆಯಲ್ಲಿ ತನ್ನದೇ ವರ್ಚಸ್ಸು ಹೆಚ್ಚಿಸಿಕೊಳ್ಳಬಹುದು ಎಂಬುದು ಆನಂದ್‌ಸಿಂಗ್‌ ರಾಜಕೀಯ ಲೆಕ್ಕಾಚಾರ. ಆದ್ದರಿಂದ ಹಲವು ವರ್ಷಗಳ ಹಿಂದೆ ನನೆಗುದಿಗೆ ಬಿದ್ದಿದ್ದ ವಿಜಯನಗರ ಜಿಲ್ಲೆ ರಚನೆ ಹೋರಾಟದ ಕೂಗಿಗೆ ಧ್ವನಿ ಗೂಡಿಸಿದ್ದಾರೆ ಎನ್ನಲಾಗುತ್ತಿದೆ.

ಹೊಸಪೇಟೆ ತಾಲೂಕನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡುವಲ್ಲಿ ಅನರ್ಹ ಶಾಸಕ ಬಿ.ಎಸ್‌.ಆನಂದ್‌ಸಿಂಗ್‌ ಅವರ ರಾಜಕೀಯ ಲೆಕ್ಕಾಚಾರವೂ ಇದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ವಿಜಯನಗರ ವಿಧಾನಸಭೆ ಕ್ಷೇತ್ರಕ್ಕೆ ಶೀಘ್ರದಲ್ಲೇ ನಡೆಯಲಿರುವ ಉಪಚುನಾವಣೆಗೂ ಮುನ್ನವೇ ವಿಜಯನಗರ ಜಿಲ್ಲೆ ಘೋಷಣೆಯಾದರೆ ಉಪಚುನಾವಣೆಯಲ್ಲಿ ಆನಂದ್‌ ಸಿಂಗ್‌ಗೆ ಗೆಲುವು ಸುಲಭವಾಗಲಿದೆ. ಜತೆಗೆ ಸಚಿವರಾದರೂ ಅಚ್ಚರಿ ಇಲ್ಲ. ಅದಕ್ಕಾಗಿಯೇ ಉಪಚುನಾವಣೆ ಮುನ್ನವೇ ವಿಜಯನಗರ ಜಿಲ್ಲೆ ರಚನೆಗೆ ಹೋರಾಟದ ಕಿಚ್ಚು ಹೆಚ್ಚಿಸುವ ಉದ್ದೇಶ ಆನಂದ್‌ ಸಿಂಗ್‌ ಅವರದ್ದು ಎಂಬ ಮಾತುಗಳೂ ಕೇಳಿಬರುತ್ತಿವೆ. ಆನಂದ್‌ ಪ್ರಯತ್ನ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಸರ್ಕಾರದ ಮೇಲೆ ಒತ್ತಡ
ಸೆ.18ರಂದು ನಿಯೋಗದೊಂದಿಗೆ ಸಿಎಂ ಭೇಟಿಯಾಗಲು ಸಜ್ಜಾಗುತ್ತಿರುವ ಅನರ್ಹ ಶಾಸಕ ಆನಂದ್‌ಸಿಂಗ್‌, ಜಿಲ್ಲೆಯ ಎಲ್ಲ ಕ್ಷೇತ್ರಗಳ ಸಂಘಟನೆಗಳ ಮೂಲಕ ಮನವಿ ಪತ್ರ ಬರೆಸಲು ಪ್ರಯತ್ನಿಸುತ್ತಿದ್ದಾರೆ. ಈ ಜನಾಭಿಪ್ರಾಯದ ಪತ್ರ ಸಿಎಂಗೆ ಸಲ್ಲಿಸಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ರಚಿಸುವಂತೆ ಒತ್ತಡ ಹೇರಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.