ಮಳೆಯಿಂದಾದ ನಷ್ಟಕ್ಕೆ ಶೀಘ್ರ ಪರಿಹಾರ ಕೊಡಿ

ಅಪರ ಜಿಲ್ಲಾಧಿಕಾರಿಗೆ ತುಂಗಭದ್ರಾ ರೈತ ಸಂಘದ ಪದಾಧಿಕಾರಿಗಳ ಮನವಿ

Team Udayavani, Sep 28, 2019, 12:32 PM IST

28-Sepctember-9

ಬಳ್ಳಾರಿ: ಜಿಲ್ಲೆಯಾದ್ಯಂತ ಕಳೆದ ಐದಾರು ದಿನಗಳಿಂದ ಸುರಿದ ಬಾರಿ ಮಳೆಗೆ ಕೊಟ್ಯಾಂತರ ರೂ. ಹಾನಿ ಸಂಭವಿಸಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ ತುಂಗಭದ್ರಾ ರೈತ ಸಂಘದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ್‌ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕಳೆದ ಐದಾರು ದಿನಗಳಿಂದ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರು ಬೆಳೆದ ನಾನಾ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ. ಇದರ ಜೊತೆಗೆ ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಮನೆಗಳು ಕುಸಿದಿದ್ದು, ವಾಸಿಸಲು ನೆಲೆ ಇಲ್ಲದಂತಾಗಿದೆ. ಅದರಲ್ಲೂ ಜಿಲ್ಲೆಯ ಸಿರುಗುಪ್ಪ ತಾಲೂಕಿನಲ್ಲಿ ಹೆಚ್ಚು ನಷ್ಟ ಸಂಭವಿಸಿದ್ದು, ಕೂಡಲೇ ಪರಿಹಾರ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ನೆಲೆ ಕಳೆದುಕೊಂಡವರಿಗೆ, ಸೂರು ಕಲ್ಪಿಸಬೇಕು. ಲಕ್ಷಾಂತರ ರೂ. ಖರ್ಚು ಮಾಡಿ ನಾನಾ ಕಡೆ ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾನಿಯಾಗಿದ್ದು, ಕೂಡಲೇ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜಿಲ್ಲೆಯ ನಾನಾ ಕಡೆ ರೈತರ ಜಮೀನುಗಳಿಗೆ ನೀರು ನುಗ್ಗಿದ್ದು, ರೈತರು ಕಂಗಾಲಾಗಿದ್ದಾರೆ. ದರೂರು, ಮುಷ್ಟಗಟ್ಟೆ, ಕುರಗೋಡು ಸೇರಿದಂತೆ ನಾನಾ ಕಡೆ ಶಾಲಾ ಆವರಣದಲ್ಲಿ ನೀರು ನಿಂತಿದ್ದು, ಮಕ್ಕಳಿಗೆ ತೊಂದರೆಯಾಗಿದೆ. ಕೆಲ ಶಾಲೆಗಳಲ್ಲಿ ನೀರು ನುಗ್ಗಿ ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿವೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಣ್ಣಿನ ಮನೆಗಳು ಕುಸಿದು ಬಿದ್ದಿವೆ. ಬಡ ಜನರು ನೆಲೆ ಕಳೆದುಕೊಂಡಿದ್ದಾರೆ. ಜಿಲ್ಲೆಯ ಅಸುಂಡಿ ಹಾಗೂ ಆಗಲೂರು ಗ್ರಾಮದಲ್ಲಿ ಹಳ್ಳಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜನರು ಪರದಾಡುವಂತಾಗಿದೆ. ಎರಡೂ ಗ್ರಾಮಗಳಲ್ಲಿ ಮೃತಪಟ್ಟವರ ಅಂತ್ಯಕ್ರಿಯೆಗೆ ತುಂಬಿದ ಹಳ್ಳಗಳು ಅಡ್ಡಿಯಾದ ಘಟನೆಯೂ ನಡೆದಿದೆ. ಸಿರುಗುಪ್ಪ, ಬಳ್ಳಾರಿ ಸೇರಿದಂತೆ ನಾನಾ ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಕತ್ತಲಲ್ಲೇ ಕಾಲಕಳೆಯುವಂತಾಗಿದೆ.

ಜನ, ಜಾನುವಾರುಗಳ ಸ್ಥಿತಿ ಅಧೋಗತಿಯಾಗಿದ್ದು, ಕೂಡಲೇ ಜಿಲ್ಲಾಡಳಿತ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕು. ಕಂದಾಯ ಇಲಾಖೆ, ತೋಟಗಾರಿಕೆ, ಕೃಷಿ, ಜೆಸ್ಕಾಂ, ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯತ್‌, ಗ್ರಾಮ ಲೆಕ್ಕಾ ಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಜಿಲ್ಲಾ ಧಿಕಾರಿಗಳು ಸೂಚನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ತುಂಗಭದ್ರ ರೈತ ಸಂಘದ ಟಿ.ರಂಜಾನ್‌ ಸಾಬ್‌, ಗಂಗಾವತಿ ವಿರೇಶ್‌, ಸಣ್ಣಮಲ್ಲಪ್ಪ, ಜಾಲಿಹಾಳ್‌ ಶ್ರೀಧರಗೌಡ, ಶಾನವಾಸಪುರ ಶರಣಗೌಡ, ಶ್ರೀಧರಗಡ್ಡೆ ವೀರನಗೌಡ, ದರೂರು ಕ್ಯಾಂಪ್‌ ವೀರಭದ್ರರಾವ್‌, ಮುಷ್ಟಗಟ್ಟೆ ಭೀಮನಗೌಡ, ಕುರುಬರ ಸಿದ್ದಪ್ಪ, ಶೆಕ್ಷಾವಲಿ, ದೊಡ್ಡದಾಸಪ್ಪ, ಚಂದ್ರಶೇಖರ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.