ಸೇತುವೆ ಕಾಮಗಾರಿ ಅರ್ಧಂಬರ್ಧ-ಆತಂಕ

ಗುತ್ತಿಗೆದಾರರು ಪಿಚ್ಚಿಂಗ್‌ ಕಾರ್ಯ ಮುಗಿಸದ ಕಾರಣ ಅಕ್ಕಪಕ್ಕದ ತೋಟಗಳಿಗೆ ಮಳೆ ನೀರು ನುಗ್ಗುವ ಭೀತಿ

Team Udayavani, Jul 4, 2019, 3:30 PM IST

04-July-32

ಭಟ್ಕಳ: ಕಿತ್ರೆ ದೇವಿಮನೆ ರಸ್ತೆಯಲ್ಲಿ ನಿರ್ಮಿಸಲಾದ ಸೇತುವೆ.

ಭಟ್ಕಳ: ಪುರಾಣ ಪ್ರಸಿದ್ಧ ಮಾರುಕೇರಿ ಕಿತ್ರೆ ದೇವಿಮನೆ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯಲ್ಲಿ ನಿರ್ಮಿಸಲಾದ ಸೇತುವೆ ಕಾಮಗಾರಿ ಅರ್ಧಂಬರ್ಧ ಆಗಿರುವುದರಿಂದ ಭಕ್ತರಿಗೆ ತೀವ್ರ ತೊಂದರೆಯಾಗಿದ್ದು ಅಪಾಯವಾಗುವ ಭೀತಿ ನಾಗರಿಕರದ್ದಾಗಿದೆ.

ಕಿತ್ರೆ ದೇವಿಮನೆ ರಸ್ತೆ ಸುಧಾರಣೆ ಮತ್ತು ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಎರಡು ಕೋಟಿ ರೂ. ಮಂಜೂರಾಗಿದೆ. ರಸ್ತೆ ಸುಧಾರಣೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಮಳೆಗಾಲ ಆರಂಭ ಆಗಿರುವುದರಿಂದ ಜನತೆಗೆ ತೀವ್ರ ತೊಂದರೆಯಾಗಿದೆ. ಸೇತುವೆ ಕಾಮಗಾರಿ ಮುಗಿದಿದ್ದರೂ ಅಕ್ಕ ಪಕ್ಕದಲ್ಲಿ ಪಿಚ್ಚಿಂಗ್‌ ಮಾಡದ್ದರಿಂದ ಆಸುಪಸಿನ ತೋಟಿಗರಿಗೆ ಮಳೆ ನೀರಿಗೆ ತಮ್ಮ ತೋಟವೇ ಕೊಚ್ಚಿ ಹೋಗುವ ಭೀತಿ ಎದುರಾಗಿದೆ.

ದೇವಿಮನೆ ದುರ್ಗಾಪರಮೇಶ್ವರಿ ದೇವಸ್ಥಾನವು ಅತ್ಯಂತ ಪ್ರಸಿದ್ಧಿ ಪಡೆದ ಕ್ಷೇತ್ರವಾಗಿದ್ದು ದಿನಾಲೂ ನೂರಾರು ಜನರು ದೇವಸ್ಥಾನಕ್ಕೆ ಬರುತ್ತಾರೆ. ಅಲ್ಲದೇ ಊರ ನಾಗರಿಕರು, ವಿದ್ಯಾರ್ಥಿಗಳೂ ಕೂಡಾ ದಿನನಿತ್ಯ ಇದೇ ರಸ್ತೆಯಲ್ಲಿ ಓಡಾಡುತ್ತಿದ್ದು ಸೇತುವೆಯ ಎರಡೂ ಕಡೆಗಳಲ್ಲಿ ಗರ್ಡಲ್ಸ್ ನಿರ್ಮಾಣ ಮಾಡದೇ ಇರುವುದರಿಂದ ಸದಾ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ವಾಹನ ಸಂಚಾರಕ್ಕೂ ಕೂಡಾ ತೊಂದರೆಯಾಗಿದೆಯಲ್ಲದೇ ಮಳೆ ತೀವ್ರವಾದರೆ ಸೇತುವೆ ಮೇಲೆ ಹೋಗುವುದೇ ಭಯ ಎನ್ನುತ್ತಾರೆ ಹಿರಿಯರಾದ ನಾರಾಯಣ ಗೊಂಡ ಅವರು.

ಈ ಕುರಿತು ಈಗಾಗಲೇ ಇಲಾಖೆ ಹಾಗೂ ಜಿಲ್ಲಾಡಳಿತದ ಗಮನ ಸೆಳೆದಿರುವ ನಾಗರಿಕರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ತಕ್ಷಣ ಕಾಮಗಾರಿ ಮುಗಿಸಿ ಕೊಡುವಂತೆ ಗುತ್ತಿಗೆದಾರರಿಗೆ ಸೂಚಿಸಿ ಎಂದು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ರಸ್ತೆಯ ಪಕ್ಕದಲ್ಲಿ ಗುಡ್ಡದ ಮಣ್ಣನ್ನು ತೆಗೆದಿರುವುದರಿಂದ ಬಂಡೆಯೊಂದು ರಸ್ತೆ ಮೇಲೆಯೇ ಬಿದ್ದಿದ್ದು ರಾತ್ರಿಯಾದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ, ಹಗಲು ಹೊತ್ತಿನಲ್ಲಾಗಿದ್ದರೆ ಅಪಾಯವಾಗುವ ಸಾಧ್ಯತೆ ಇತ್ತು ಎನ್ನುತ್ತಾರೆ ದೇವಸ್ಥಾನದ ಆಡಳಿತ ಕಮಿಟಿ ಸದಸ್ಯರು.

ಈಗಾಗಲೇ ಸಾಕಷ್ಟು ಬಾರಿ ಸಂಬಂಧಪಟ್ಟ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತಕ್ಕೂ ತಿಳಿಸಿದರೂ ಯಾವುದೇ ಪ್ರಗತಿ ಕಾಣದೇ ಇರುವುದರಿಂದ ಜು.24 ರಂದು ಊರ ನಾಗರಿಕರು ಹಾಗೂ ದೇವಸ್ಥಾನದ ಭಕ್ತರು ಸೇರಿ ಸೇತುವೆ ಮೇಲೆ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಹೇಳಿದ್ದು ಪ್ರತಿಭಟನೆಗೂ ಮುನ್ನ ಗುತ್ತಿಗೆದಾರರು ಕಾಮಗಾರಿ ಪೂರೈಸುವ ಭರವಸೆ ನೀಡಬೇಕಾಗಿದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.