ಎಂಪಿಎಂ ಪುನರಾರಂಭಕ್ಕೆ ಒತ್ತಾಯ
ಕಾರ್ಮಿಕರಿಗೆ ಸೌಲಭ್ಯ ದೊರಕಿಸಲು ಸಚಿವರಿಗೆ ನಿಯೋಗದ ಆಗ್ರಹ
Team Udayavani, Jun 9, 2019, 3:52 PM IST
ಭದ್ರಾವತಿ: ಎಂಪಿಎಂ ಸ್ವಯಂ ನಿವೃತ್ತ ನೌಕರರ ಸಂಘದಿಂದ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆಯನ್ನು ಪುನರಾರಂಭಿಸುವಂತೆ ಆಗ್ರಹಿಸಿ ಎಂಪಿಎಂ ಸ್ವಯಂ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ನೇತೃತ್ವದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಎಂಪಿಎಂ ಕಾರ್ಖಾನೆಯನ್ನು ರಾಜ್ಯ ಸರ್ಕಾರ 2015 ರ ನವೆಂಬರ್ನಲ್ಲಿ ಯಾವುದೇ ಮುನ್ಸೂಚನೆ ನೀಡದೆ ಉತ್ಪಾದನೆ ಸ್ಥಗಿತಗೊಳಿಸಿ ಏಕಾಏಕಿ ಕಾರ್ಮಿಕರನ್ನು ಕೆಲಸದಿಂದ ವಂಚಿತರನ್ನಾಗಿ ಮಾಡಿತು. ಸರ್ಕಾರದ ಈ ಕ್ರಮ ಹಾಗೂ ಆಡಳಿತ ಮಂಡಳಿಯ ಬಲವಂತದಿಂದ ಅಸಂಖ್ಯಾತ ಕಾರ್ಮಿಕರು ಸ್ವಯಂ ನಿವೃತ್ತಿ ಪಡೆದರು. ಆ ರೀತಿ ಸ್ವಯಂನಿವೃತ್ತಿ ಪಡೆದ ಅನೇಕರಿಗೆ ಸೌಲಭ್ಯ ನೀಡದೆ ಅತಂತ್ರ ಸ್ಥಿತಿ ನಿರ್ಮಾಣವಾಯಿತು. ಆದ್ದರಿಂದ ಕೂಡಲೇ ಸರ್ಕಾರ ಸ್ವಯಂ ನಿವೃತ್ತಿ ಪಡೆದವರಿಗರ ಸೌಲಭ್ಯಗಳನ್ನು ದೊರಕಿಸಿಕೊಡಬೇಕು ಹಾಗೂ ಕಾರ್ಖಾನೆಯನ್ನು ಪುನರ್ ಆರಂಭಿಸಬೇಕು ಎಂದರು.
ಸ್ವಯಂ ನಿವೃತ್ತಿ ಪಡೆದ ಉದ್ಯೋಗಿಗಳಿಗೆ ನಿಯಾಮಾನುಸಾರ ತಕ್ಷಣ ಹಣ ಪಾವತಿಸಬೇಕಿದೆ. ಆದರೆ ಸರಕಾರ ಹಣ ಬಿಡುಗಡೆ ಮಾಡಿ ವರ್ಷ ಕಳೆದರೂ, ಆಡಳಿತ ವರ್ಗ ಪೂರ್ಣ ಪ್ರಮಾಣದ ಹಣ ವಿತರಿಸದಿರುವುದು ವಿಷಾದನೀಯ. ಅಲ್ಲದೆ ಸರಕಾರದ ಲೆಕ್ಕ ಪರಿಶೋಧಕರಿಂದ ಲೆಕ್ಕಾಚಾರ ಮಾಡಿಸದೆ ಪೆನ್ಶನ್ ಹಾಗೂ ಸೂಪರ್ ಅನ್ಯೂಷನ್ ಹಣವನ್ನು ಸಂಬಂಧಪಟ್ಟ ಇಲಾಖೆಗೆ ವರ್ಗಾಯಿಸದಿರುವುದರಿಂದ ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸ ಹಾಗೂ ಕುಟುಂಬ ನಿರ್ವಹಣೆಗೆ ಕಷ್ಟ ಸಾಧ್ಯವಾಗಿದೆ ಎಂದು ವಿವರಿಸಿದರು.
ಕಂಪನಿ ವಸತಿಗೃಹಗಳನ್ನು ಹೊಂದಿರುವ ಅಧಿಕಾರಿಗಳಿಗೆ ಮತ್ತು ಕೆಲ ಉದ್ಯೋಗಿಗಳಿಗೆ 2ನೇ ಕಂತಿನ ಹಣ ನೀಡಿರುವಂತೆಯೇ, ಸ್ವಯಂ ನಿವೃತ್ತಿ ಪಡೆದ ಉದ್ಯೋಗಿಗಳಿಗೂ ಹಣ ನೀಡಬೇಕು. ಪೆನ್ಶನ್ ಹಾಗೂ ಸೂಪರ್ ಅನ್ಯೂಷನ್ ಹಣವನ್ನು ಸಂಬಂಧಪಟ್ಟ ಇಲಾಖೆಗೆ ವರ್ಗಾಯಿಸಬೇಕು. ಹಣಕಾಸು ಇಲಾಖೆ ಮಾಡಿರುವ ಲೆಕ್ಕಚಾರದಂತೆ ಸ್ವಯಂ ನಿವೃತ್ತಿ ಪಡೆದ ಕಾರ್ಮಿಕರಿಗೆ ಮಾಹಿತಿಯ ದೃಢೀಕರಣ ನೀಡಬೇಕು. ಕಾರ್ಮಿಕರ ಎಲ್ಲ ಸಮಸ್ಯೆಗಳನ್ನು ಇತ್ಯರ್ಥಪಡಿಸುವವರೆಗೂ ಕಾರ್ಖಾನೆ ಮುಚ್ಚುವ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ಕೋರಲಾಗಿದೆ.
ಮಾಜಿ ಶಾಸಕ ಎಂ.ಜೆ. ಅಪ್ಪಾಜಿ, ಕಾರ್ಮಿಕ ಮುಖಂಡರಾದ ಬಿ. ಕಮಲಾಕರ್, ಆರ್. ಅನಂತಕುಮಾರ್, ಚೆನ್ನಿಗಪ್ಪ, ಡಿ.ಎಸ್. ಬಸವರಾಜ್, ಮೂಡಲಗಿರಿ, ರಾಮಣ್ಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ