ಮಠಗಳು ಬಿಸಿನೆಸ್‌ ಸೆಂಟರ್‌ಗಳಾಗದಿರಲಿ


Team Udayavani, Jul 17, 2019, 4:32 PM IST

17-July-40

ಭದ್ರಾವತಿ: ಗೋಣಿಬೀಡು ಶೀಲಸಂಪಾದನಾ ಮಠದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಮೂರು ಸಾವಿರ ಮಹಾಸಂಸ್ಥಾನ ಮಠದ ಪ|ಪೂ| ಮಹಾರಾಜ ನಿರಂಜನ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಸ್ವಾಮಿಗಳು ಭಾಗವಹಿಸಿದ್ದರು.

ಭದ್ರಾವತಿ: ಮನುಷ್ಯನು ಅಧಿಕಾರ, ಹಣ, ಆಸ್ತಿಯಿಂದ ನೆಮ್ಮದಿ ಕಾಣಲು ಸಾಧ್ಯವಿಲ್ಲ. ಧರ್ಮ ಸೇವೆ ಮಾಡುವುದರಿಂದ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ಹುಬ್ಬಳ್ಳಿ ಮೂರು ಸಾವಿರ ಮಹಾಸಂಸ್ಥಾನ ಮಠದ ಪ|ಪೂ| ಮಹಾರಾಜ ನಿರಂಜನ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಸ್ವಾಮಿಗಳು ಹೇಳಿದರು.

ಗೋಣಿಬೀಡು ಶೀಲಸಂಪಾದನಾ ಮಠ ಸ್ಪಿರಿಚ್ಯುಯಲ್ ಫೌಂಡೇಶನ್‌ ಆಯೋಜಿಸಿದ್ದ 3 ದಿನಗಳ ಅನುಭಾವ ಸಾಹಿತ್ಯ ಸಮ್ಮೇಳನ ಹಾಗೂ ಗುರುವಂದನಾ ಕಾರ್ಯಕ್ರಮದ ಸಮಾರೋಪ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಏಕಾಗ್ರತೆ ಮತ್ತು ಶ್ರದ್ಧೆ ಮನುಷ್ಯನ ಭವಿಷ್ಯತ್ತಿನ ಆವಿಷ್ಕಾರ ಮಾಡುತ್ತದೆ. ಶೀಲಸಂಪಾದನಾ ಮಠಕ್ಕೆ ತಪಸ್ಸು ಮಾಡುವ ಶ್ರೀಗಳು ಸಿಕ್ಕಿರುವುದು ಇಲ್ಲಿನ ಜನರ ಭಾಗ್ಯ ಎಂದರು. ಮಠಗಳು ಯಾವಾಗಲೂ ಬಿಸಿನೆಸ್‌ ಸೆಂಟರ್‌ಗಳಾಗಬಾರದು. ಸ್ಪಿರಿಚುಯಲ್ ಸೆಂಟರ್‌ಗಳಾಗಬೇಕು. ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಸೇರಿದಂತೆ ರಿಯಲ್ ಎಸ್ಟೇಟ್ ದಂಧೆಗಳೂ ಕೂಡ ಕೆಲವು ಮಠಗಳಿಂದ ನಡೆಯುತ್ತಿದೆ. ನಿತ್ಯ ಧ್ಯಾನ ಧಾರ್ಮಿಕ ಕಾರ್ಯಗಳು ನಡೆಯುವಂತಾಗಬೇಕು. ಏಕಾಗ್ರತೆಯ ಸಂಕೇತವಾಗಿರುವ ತಪಸ್ಸು ನಮ್ಮ ಮನಸ್ಸು, ದೇಹದ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಣ ಮಾಡುತ್ತದೆ. ಇಂದು ಯಾವ ಸ್ವಾಮಿಗಳೂ ಕೂಡ ತಪ್ಪಸ್ಸು ಮಾಡಲು ಮುಂದಾಗುತ್ತಿಲ್ಲ ಎಂದು ವಿಷಾದಿಸಿದರು.

ಹರಪನಹಳ್ಳಿ ತೆಗ್ಗಿನಮಠದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ಅನ್ನ, ವಿದ್ಯೆ ವಸತಿಗಳನ್ನು ಕಲ್ಪಿಸಿಕೊಡುವ ಮೂಲಕ ಸರ್ಕಾರ ಮಾಡುವ ಕೆಲಸಗಳನ್ನು ಮಠಗಳು ಮಾಡುತ್ತಿವೆ. ಜಗತ್ತಿನ ಸಮಸ್ಯೆಗಳನ್ನು ಗೆಲ್ಲಲು ಧ್ಯಾನಕ್ಕಿಂತ ದೊಡ್ಡ ಅಸ್ತ್ರ ಮತ್ತೂಂದಿಲ್ಲ ಎಂದರು.

ನಿವೃತ್ತ ಐಎಎಸ್‌ ಅಧಿಕಾರಿ ಡಾ| ಸೋಮಶೇಖರ್‌ ಮಾತನಾಡಿ, ಬಸವಣ್ಣನವರು ಕೊಟ್ಟಂತಹ ವಚನಗಳು ನಮ್ಮ ಬದುಕಿಗೆ ನೀಡಿದ ಸಂವಿಧಾನವಾಗಿದ್ದು ಈ ಸಂವಿಧಾನವನ್ನು ತಿದ್ದುಪಡಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಶಿಕಾರಿಪುರ ಶಿವಯೋಗಾಶ್ರಮದ ರೇವಣಸಿದ್ದಮಹಾಸ್ವಾಮಿ, ಕೆ. ಬಿದರೆ ದೊಡ್ಡಮಠದ ಪ್ರಭುಕುಮಾರಸ್ವಾಮಿ, ಗೋಣಿಬೀಡು ಶೀಲಸಂಪಾದನಾ ಮಠದ ಸಿದ್ದಲಿಂಗಸ್ವಾಮಿ, ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್‌, ನಿವೃತ್ತ ಐಎಎಸ್‌ ಅಧಿಕಾರಿ ದಯಾಶಂಕರ್‌, ಸಿದ್ದಲಿಂಗಯ್ಯ, ಡಾ| ಹಿರೇಮs್, ಧರ್ಮಪ್ರಸಾದ್‌, ವೇ| ವಿಘ್ನೕಶ್ವರಯ್ಯ, ನಾಗೇಶ್‌ ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ಹಲವು ಗಣ್ಯರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.