ಭದ್ರಾವತಿಯಲ್ಲಿ ನಿಲ್ಲದ ಮಳೆ ರಗಳೆ!

ಅಪಾಯದಂಚಲ್ಲಿ ಹೊಸೂರು ಕೆರೆ- ಸಂಚಾರ ಅಸ್ತವ್ಯಸ್ತ •ಜನರಲ್ಲಿ ತೀವ್ರ ಆತಂಕ

Team Udayavani, Aug 10, 2019, 3:13 PM IST

10-Naveen-23

ಭದ್ರಾವತಿ: ಭದ್ರಾನದಿ ಮಧ್ಯದಲ್ಲಿರುವ ಶ್ರೀ ಸಂಗಮೇಶ್ವರ ಮಂಟಪ ನೀರಿನಲ್ಲಿ ಮುಳುಗಿರುವುದು.

ಭದ್ರಾವತಿ: ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ಕೆರೆ, ಕಾಲುವೆ,ಹಳ್ಳ, ಚರಂಡಿಗಳು ತುಂಬಿ ಹರಿಯುತ್ತಾ ಭದ್ರಾನದಿಯನ್ನು ಸೇರುವುದರ ಜೊತೆಗೆ ಅಕ್ಕಪಕ್ಕದ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಗಂಜಿಕೇಂದ್ರ ಆರಂಭ

ಭದ್ರಾನದಿ ತುಂಬಿ ಹರಿಯುತ್ತಿರುವ ಕಾರಣ ನದಿಯ ಸಮೀಪದ ಕವಲುಗುಂದಿ ಬಿಸಿಎಂ ಇಲಾಖೆಯ ಹಾಸ್ಟೆಲ್ ಹಿಂಭಾಗದ 5 ಮನೆಗಳು ನೀರಿನಿಂದ ಜಲಾವೃತಗೊಂಡಿದ್ದು ಅಲ್ಲಿದ್ದ 5 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಮಹಿಳೆಯರಿಗೆ ಆ ಪ್ರದೇಶದ ಹಾಸ್ಟೆಲ್ನಲ್ಲಿ ಆಶ್ರಯ ನೀಡಿ ಊಟದ ವ್ಯವಸ್ಥೆ ಕಲ್ಪಿಸಿದ್ದರೆ, ಪುರುಷರಿಗೆ ಹುತ್ತಾ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಂಜಿಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಉಳಿದಂತೆ ಕೂಡ್ಲಿಗೆರೆ, ಗುಡ್ಡದ ನೇರಳೆಕೆರೆ ಮುಂತಾದ ಬಹುತೇಕ ಗ್ರಾಮಗಳಲ್ಲಿ ಕೋಡಿ ಹರಿದು ಬೆಳೆಗಳಿಗೆ ಹಾನಿಯಾಗಿದೆ.

ನಗರಸಭೆ ವ್ಯಾಪ್ತಿಗೆ ಸೇರಿದ ಹೊಸ ಸಿದ್ದಾಪುರ ಹಾಗು ಹಳೇಸಿದ್ದಾಪುರ ಮಾರ್ಗ ಮಧ್ಯೆ ಇರುವ ಕೆರೆ ಕೋಡಿ ಮಳೆಯ ತೀವ್ರತೆಗೆ ಕಸಿದು ಬಿದ್ದ ಪರಿಣಾಮ ಡಾಂಬರು ರಸ್ತೆ ಕುಸಿದು ರಸ್ತೆ ಸಂಕ್ಲಿಪುರ, ರಾಮಕೊಪ್ಪ ಗ್ರಾಮಸ್ಥರಿಗೆ ಸಂಚಾರಕ್ಕೆ ಸಂಪೂರ್ಣ ಸ್ಥಗಿತಗೊಂಡು ಜನರ ಸಂಚಾರಕ್ಕೆ ತೊಂದರೆಯಾಗಿದೆ. ಆ ಪ್ರದೇಶದ ಜನರ ಸಂಚಾರಕ್ಕೆ ಮತ್ತು ಹೆಚ್ಚಿನ ಅನಾಹುತ ತಡೆಯಲು ಪೊಲೀಸರು ಹಾಗು ತಾಲೂಕು ಆಡಳಿತ ಸಮರೋಪಾದಿಯಲ್ಲಿ ಕರ್ತವ್ಯದಲ್ಲಿ ತೊಡಗಿದ್ದಾರೆ.

ಹೊಸ ಸಿದ್ದಾಪುರ ಬೈಪಾಸ್‌ ರಸ್ತೆಯ ಕೆರೆಯ ಕೋಡಿ ಹರಿದು ಮುಖ್ಯ ರಸ್ತೆಯ ಮೇಲೆ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ. ಹೊಸೂರು ಕೆರೆ ಅಪಾಯದ ಹಂಚಿನಲ್ಲಿದ್ದರೆ, ಚಾನಲ್ ತುಂಬಿ ಹರಿಯುತ್ತಿದ್ದು ಸೇತುವೆ ಮೇಲೆ ನೀರು ಹರಿದು ಪಾದಚಾರಿ ಹಾಗೂ ವಾಹನ ಸವಾರರ ಸಂಚಾರಕ್ಕೆ ಅಡ್ಡಿಯಾಗಿದೆ. ನಗರಸಭೆ ಪೌರಾಯುಕ್ತ ಮನೋಹರ್‌ ಹಾಗು ಪೊಲೀಸ್‌ ಇಲಾಖೆ ಸೇರಿದಂತೆ ಅನೇಕ ಅಧಿಕಾರಿಗಳು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಉಳಿದಂತೆ ನಗರ ಪ್ರದೇಶಗಳ ಮನೆಗಳ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು. ನಗರಸಭೆ ಹಾಗೂ ತಾಲೂಕು ಆಡಳಿತ ಸಮರೋಪಾಯಲ್ಲಿ ಕಾರ್ಯಪ್ರವೃತ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶಾಲಾ ಕಟ್ಟಡ ಕುಸಿತ: ತಾಲೂಕಿನ ತಡಸ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಹಾಗೂ ಗೋಡೆ ಸಂಪೂರ್ಣ ಕುಸಿದು ಮೇಜು, ಕುರ್ಚಿ ಹಾಗು ಕೆಲವು ಸಾಮಗ್ರಿಗಳು ಹಾಳಾಗಿದ್ದು ಕೆಲವು ಪರಿಕರಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಶಾಲೆಗಳಿಗೆ ರಜೆ ಇರುವುದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ.

ಕೆಲಕ್ಷಣ ಬಿಸಿಲು- ಪುನಃ ಮಳೆ: ಶುಕ್ರವಾರ ಬೆಳಗ್ಗೆ ಮಳೆ ಸ್ವಲ್ಪ ನಿಂತು ಕೆಲ ನಿಮಿಷಗಳಕಾಲ ಬಿಸಿಲು ಕಾಣಿಸಿಕೊಂಡಿತು ಜನರು ಇನ್ನು ಮಳೆ ಬರುವುದಿಲ್ಲ ಬಿಸಿಲು ಬಂದಿದೆ ಎಂದು ನಿಟ್ಟುಸಿರು ಬಿಟ್ಟರು. ಆದರೆ ಜನರ ನಿರೀಕ್ಷೆ ಹುಸಿಯಾಗಿ ಕೆಲವೇ ನಿಮಿಷಗಳಲ್ಲಿ ಪುನಃ ಮಳೆ ಆರಂಭಗೊಂಡು ಜನರಲ್ಲಿ ಮಳೆಯ ತೀವ್ರ ಆತಂಕ ಹೆಚ್ಚಿಸಿದೆ.

ಧರೆಗುರುಳಿದ ವಿದ್ಯುತ್‌ ಕಂಬ: ಬಾರಂದೂರು ಸಮೀಪದ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಮಳೆಯ ತೀವ್ರತೆಗೆ 3 ವಿದ್ಯುತ್‌ ಕಂಬಗಳು ಬಿದ್ದಿವೆ. ವಿಷಯ ತಿಳಿದ ಕೂಡಲೇ ತಹಶೀಲ್ದಾರ್‌ ಸೋಮಶೇಖರ್‌ ಸ್ಥಳಕ್ಕೆ ತಂಡದೊಂದಿಗೆ ತೆರಳಿ ಮೆಸ್ಕಾಂ ಇಲಾಖೆಗೆ ತಿಳಿಸಿದ್ದಾರೆ. ಮೆಸ್ಕಾಂ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಸೂಕ್ತ ಕ್ರಮ ಕೈಗೊಂಡರು.

ಮಳೆಯ ಪ್ರಮಾಣದಲ್ಲಿ ಏರಿಳಿತ: ತಾಲೂಕಿನಲ್ಲಿ ಮಳೆಯ ತೀವ್ರತೆ ಬಗ್ಗೆ ಪತ್ರಿಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ತಹಶೀಲ್ದಾರ್‌ ಸೋಮಶೇಖರ್‌, ಮಳೆಯ ಪ್ರಮಾಣದಲ್ಲಿ ಏರಿಳಿಕೆ ಕಾಣುತ್ತಿದ್ದರೂ ಸಹ ಯಾವುದನ್ನೂ ನಿಖರವಾಗಿ ಹೇಳಲಾಗುತ್ತಿಲ್ಲ. ತಾಲೂಕು ಆಡಳಿತ, ನಗರಸಭೆ ಆಡಳಿತ ಎಲ್ಲರೂ ಒಂದಾಗಿ ಮಳೆಯ ಹಾನಿಗೊಳಗಾದವರಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿದ್ದೇವೆ. ಗುರುವಾರ ಒಂದೇ ದಿನಕ್ಕೆ ತಾಲೂಕಿನಲ್ಲಿ 179 ಮಿಮೀ ಮಳೆಯಾಗಿದ್ದು ಭದ್ರಾನದಿಯಲ್ಲಿ ಏರುತ್ತಿರುವ ನೀರಿನ ಮಟ್ಟವೇ ಮಳೆಯ ತೀವ್ರತೆ ಎಷ್ಟಿದೆ ಎಂದು ತೋರಿಸುತ್ತದೆ ಎಂದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.