ಮದುವೆ ಕೇವಲ ಆಡಂಬರವಲ್ಲ: ಚೌಕಿಮಠ ಶ್ರೀ
ಜೀವನದಲ್ಲಿ ಪರಸ್ಪರ ಅರಿತು ಬಾಳುವುದು ಮುಖ್ಯ
Team Udayavani, May 20, 2019, 4:03 PM IST
ಭದ್ರಾವತಿ: ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವೈವಾಹಿಕ ದಾಂಪತ್ಯಕ್ಕೆ ಕಾಲಿಟ್ಟ ನೂತನ ವಧು- ವರರು.
ಭದ್ರಾವತಿ: ಭಗವಂತ ಕೊಟ್ಟಿರುವ ಬದುಕನ್ನು ಹಾಳು ಮಾಡಿಕೊಳ್ಳದೆ ಸಮಾಜಕ್ಕೆ ಉಪಯೋಗವಾಗುವ ರೀತಿ ಮಾದರಿಯಾಗಿ ಬದುಕಬೇಕು ಎಂದು ಹಾರ್ನಹಳ್ಳಿ ಚೌಕಿಮಠದ ಶ್ರೀ ನೀಲಕಂಠ ಮಹಾಸ್ವಾಮಿ ಹೇಳಿದರು.
ಭಾನುವಾರ ಬಿ.ಎಚ್.ರಸ್ತೆಯ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿ, ಕಾಲಭೈರವ ಟ್ರಸ್ಟ್, ಬಸವೇಶ್ವರ ಧರ್ಮ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 37ನೇ ವರ್ಷದ 10 ಜೊತೆ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು.
ಮದುವೆ ಎಂಬುದು ಗದ್ದಲ, ಊಟ, ತಿಂಡಿ ಇವುಗಳಿಗೆ ಸೀಮಿತವಾಗಬಾರದು. ನೂತನ ವಧು-ವರರು ಸಂಸಾರ ಎಂಬುದರ ಅರ್ಥ ಅರಿತು ಪರಸ್ಪರ ಅನ್ಯೋನ್ಯತೆಯಿಂದ ಬಾಳುವುದರ ಜೊತೆಗೆ ಜೀವನದಲ್ಲಿ ಪರಿಶ್ರಮದಿಂದ ದುಡಿದು, ದುಡಿದದ್ದರಲ್ಲಿ ಒಂದುಭಾಗವನ್ನು ಸಮಾಜದ ಕಾರ್ಯಗಳಿಗೆ ವಿನಿಯೋಗಿಸುವ ಮೂಲಕ ಸಮಾಜದ ಋಣ ತೀರಿಸಬೇಕು. ಮಕ್ಕಳು ದುಶ್ಚಟಕ್ಕೆ ಬಲಿಯಾಗದಂತೆ ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಸರಿಹಾದಿಯಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿವಂತರನ್ನಾಗಿ ರೂಪಿಸಿ ಅವರು ಸಮಾಜಕ್ಕೆ, ಊರಿಗೆ ,ನಾಡಿಗೆ ,ದೇಶಕ್ಕೆ ಉತ್ತಮ ಆಸ್ತಿಗಳಾಗಿ ಬೆಳೆಯುವಂತೆ ಮಾಡುವ ಜವಾಬ್ದಾರಿ ಪೋಷಕರ ಮೇಲಿರುವುದನ್ನು ಮರೆಯಬಾರದು ಎಂದರು.
ಶರಣರ ವಚನಗಳನ್ನು ನಿತ್ಯಮನನ ಮಾಡುತ್ತಿದ್ದರೆ ಅದರಲ್ಲಿನ ಸಂದೇಶಗಳು ಮನದಟ್ಟಾಗುತ್ತವೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಾಳಿದಾಗ ಬದುಕು ಸಾರ್ಥಕತೆ ಪಡೆಯುತ್ತದೆ ಎಂದರು.
ಶಾಸಕ ಬಿ.ಕೆ. ಸಂಗಮೇಶ್ ಮಾತನಾಡಿ, ವಿಶ್ವ ಹಿಂದೂ ಪರಿಷತ್ 37 ವರ್ಷಗಳಿಂದ ಮಾಡಿಕೊಂಡು ಬಂದಿರುವ ಈ ಉಚಿತ ವಿವಾಹ ಕಾರ್ಯ ನಿಜಕ್ಕೂ ಶ್ಲಾಘನೀಯ. ಈ ಕಾರ್ಯಕ್ರಮದಿಂದ ಅನೇಕ ಬಡಜನರ ಮನೆಯ ವಿವಾಹ ಕಾರ್ಯ ಸುಲಲಿತವಾಗುವಂತಾಗಿದೆ. ನೂತನ ವಧು-ವರರು ಸಂತೋಷದಾಯಕವಾದ ಬದುಕನ್ನು ನಡೆಸುವಂತಾಗಲಿ ಎಂದು ಹಾರೈಸಿದರು.
ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್. ಈಶ್ವರಪ್ಪ ನೂತನ ವಧು- ವರರಿಗೆ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಶಿವಸುಬ್ರಹ್ಮಣ್ಯ ಸ್ವಾಮಿ ಆಶ್ರಮದ ಮುರುಗೇಶ ಸ್ವಾಮಿ ಉದ್ಘಾಟಿಸಿದರು. ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಪಿ. ವೆಂಕಟರಮಣ ಶೇಟ್, ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ಜಿಲ್ಲಾಧ್ಯಕ್ಷ ರಮೇಶ್ ಬಾಬು, ಕಾಲಭೈರವ ಟಸ್ಟ್ ಅಧ್ಯಕ್ಷ ಮಾದೇಗೌಡ, ಪತಂಜಲೀ ಯೋಗ ಸಮಿತಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಅನ್ನಪೂರ್ಣ ಸತೀಶ್, ಸುನೀಲ್ ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ಅನೇಕರನ್ನು ಸನ್ಮಾನಿಸಲಾಯಿತು. ನೂತನ ವಧು- ವರರು ಶ್ರೀಗಳ ಸಮ್ಮುಖದಲ್ಲಿ ಮಾಂಗಲ್ಯಧಾರಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ