ಲೋಕಾ ಚುನಾವಣೆ ಆಯ್ತು; ಇನ್ನು ಲೋಕಲ್ ಫೈಟ್!

ಯಾರ ಊಹೆಗೂ ನಿಲುಕದ ಸ್ಥಳೀಯ ರಾಜಕಾರಣ, ಸೋಲಿನ ಹಿನ್ನೆಲೆಯಲ್ಲಿ ಕಂಗಾಲಾದ ಮಿತ್ರಪಕ್ಷ ಮುಖಂಡರು

Team Udayavani, May 26, 2019, 2:54 PM IST

Udayavani Kannada Newspaper

ಭದ್ರಾವತಿ: ಒಂದೆಡೆ ಲೋಕಸಭೆ ಚುನಾವಣೆ ಫಲಿತಾಂಶದಿಂದ ಬಿಜೆಪಿ ಮುಗಿಲೆತ್ತರಕ್ಕೆ ಜಿಗಿದು ಹಾರಾಡುತ್ತಿದ್ದರೆ ಮತ್ತೂಂದೆಡೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ದೇಶಕ್ಕಾಗಿ ಬಲಿದಾನಗೈದ ಪಕ್ಷ ಎಂದು ಬೀಗುತ್ತಿದ್ದ ಕಾಂಗ್ರೆಸ್‌ ಯಾರೂ ನಿರೀಕ್ಷಿಸದಷ್ಟರ ಮಟ್ಟಿಗೆ ಸೋತು ಸುಣ್ಣವಾಗಿದೆ. ಆ ಪಕ್ಷದವರು ಪಾತಾಳಕ್ಕಿಳಿದು ಹೋಗಿದ್ದಾರೆ. ಮತ್ತೂಂದೆಡೆ ಕರ್ನಾಟಕದ ಏಕೈಕ ಸ್ಥಳೀಯ ಪಕ್ಷವೆಂದು ಬೀಗುತ್ತಾ ಘಟಬಂಧನದ ರೂವಾರಿ ತಾನಾಗಿ ಕೇಂದ್ರದ ಸರ್ಕಾರ ರಚನೆಯಲ್ಲಿ ತನಗೆ ಪ್ರಾಧಾನ್ಯತೆ ದೊರಕಬಹುದೆಂಬ ಕನಸು ಕಾಣುತ್ತಿದ್ದ ಜೆಡಿಎಸ್‌ ಕೇವಲ ಒಂದು ಸ್ಥಾನವನ್ನು ಪಡೆದಿರುವುದರಿಂದ ಆ ಪಕ್ಷದವರು ಮುಂದೇನು ಮಾಡುವುದು ಎಂದು ತೋರದೆ ಕಂಗಾಲಾಗಿ ಕುಳಿತು ಯೋಚಿಸುವಂತಾಗಿದೆ.

ಇದೆಲ್ಲಾ ರಾಜ್ಯದಲ್ಲಿ ಆ ಪಕ್ಷಗಳ ಸ್ಥಿತಿ-ಗತಿ. ಆದರೆ ಭದ್ರಾವತಿ ರಾಜಕಾರಣಕ್ಕೆ ಬಂದರೆ ಇಲ್ಲಿನ ಲೆಕ್ಕಾಚಾರವೇ ಬೇರೆಯಾಗುತ್ತದೆ. ಇಲ್ಲಿ ಪಕ್ಷಗಳು ನೆಪ ಮಾತ್ರಕ್ಕೆ. ಜಾತಿ ಮತ್ತು ವ್ಯಕ್ತಿ ಆರಾಧನೆ ಆಧಾರದ ಗೋಸಂಬಿ ರಾಜಕಾರಣಕ್ಕೆ ಹೆಸರಾಗಿರುವ ಇಲ್ಲಿನ ರಾಜಕಾರಣದಲ್ಲಿ ಯಾವುದೂ ಊಹೆಗೆ ನಿಲುಕುವುದಿಲ್ಲ.

ಈಗ ಲೋಕಸಭೆ ಚುನಾವಣೆ ಮುಗಿದಿದೆ ಸ್ಥಳೀಯವಾಗಿ ನಗರಸಭೆ ಚುನಾವಣೆ ಹತ್ತಿರಕ್ಕೆ ಬರುತ್ತಿದೆ. ಈ ನಗರಸಭೆ ಚುನಾವಣೆಯ ಮೇಲೆ ಲೋಕಸಭೆ ಚುನಾವಣೆಯ ಫಲಿತಾಂಶ ಎಷ್ಟರ ಮಟ್ಟಿಗೆ ಪ್ರಭಾವ ಬೀರುತ್ತದೆ ಮತ್ತು ಇದನ್ನು ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಯಾವ ರೀತಿ ಬಳಸಿಕೊಳ್ಳುತ್ತವೆ ಕಾದು ನೋಡಬೇಕಿದೆ.

ಹಾಲಿ-ಮಾಜಿ ಸ್ನೇಹ ಮುಂದುವರಿಯುವುದೇ?
ಈ ಬಾರಿಯ ಲೋಕಸಭಾ ಚುನಾವಣೆ ಇಲ್ಲಿನ ಎರಡು ರಾಜಕೀಯ ಧ್ರುವಗಳಾದ ಶಾಸಕ ಬಿ.ಕೆ. ಸಂಗಮೇಶ್‌ ಮತ್ತು ಮಾಜಿ ಶಾಸಕ ಅಪ್ಪಾಜಿಯನ್ನು ಲೋಕಸಭೆ ಚುನಾವಣೆಗಾಗಿ ಒಗ್ಗೂಡಿಸುವಲ್ಲಿ ಯಶಸ್ವಿಯಾದದ್ದು ಒಂದು ವಿಶೇಷ ಎನ್ನಬಹುದಾದರೂ ಆ ಬೆಸುಗೆ ಕೇವಲ ಬಲವಂತದ ಮಾಘಸ್ನಾನದಂತೆ. ತಾತ್ಕಾಲಿಕ ಬೆಸುಗೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕಳೆದ ಬಾರಿ ಶಾಸಕರಾಗಿದ್ದ ಅಪ್ಪಾಜಿ ಗೌಡರ ಕಾಲದಲ್ಲಿ ನಗರಸಭೆ ಆಡಳಿತದ ಚುಕ್ಕಾಣಿ ಅಪ್ಪಾಜಿ ಗೌಡರ ಬೆಂಬಲಿಗರ ತೆಕ್ಕೆಗೆ ಬೀಳುವ ಮೂಲಕ ಅಪ್ಪಾಜಿ ಗೌಡರು ಹಿಡಿತ ಸಾಧಿಸಿದ್ದರು. ಈ ಬಾರಿ ಬಿ.ಕೆ. ಸಂಗಮೇಶ್ವರ್‌ ಶಾಸಕರಾಗಿದ್ದಾರೆ. ಕ್ಷೇತ್ರದ ಹಿತರಕ್ಷಣೆಗೆ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಉಳಿವಿಗೆ ಹಾಲಿ- ಮಾಜಿ ಶಾಸಕರು ಒಂದಾದರೆ ನಿರೀಕ್ಷತ ಯಶಸ್ಸು ಸಾಧ್ಯ ಎಂಬ ನಾಗರಿಕರ ಅಭಿಪ್ರಾಯಕ್ಕೆ ಎಂದೂ ಮಣಿಯದೆ ಒಂದಾಗದಿದ್ದ ಇಲ್ಲಿನ ಹಾಲಿ- ಮಾಜಿ ಶಾಸಕರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದ ಹೊಟೇಲ್ನಲ್ಲಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಕೈ- ಕೈ ಹಿಡಿದು ಒಂದಾದದ್ದು ಈ ಬಾರಿಯ ವಿಶೇಷ. ಈಗ ಲೋಕಸಭೆ ಚುನಾವಣೆ ಮುಗಿದಿದೆ. ಫಲಿತಾಂಶ ಸಹ ಇಬ್ಬರಿಗೂ ಕೈಕೊಟ್ಟಿದೆ. ಹಾಗಾಗಿ ಇಲ್ಲಿನ ಹಾಲಿ-ಮಾಜಿ ಶಾಸಕರಾದ ಸಂಗಮೇಶ್‌ ಮತ್ತು ಅಪ್ಪಾಜಿ ಚುನಾವಣೆ ವೇಳೆ ಹಿಡಿದುಕೊಂಡ ಕೈ-ಕೈ ಹಾಗೇ ಮುಂದುವರಿಯುತ್ತದೆಯೋ ಅಥವಾ ತಾತ್ಕಾಲಿಕ ಜೋಡಣೆಯಾಗಿ ಕೈ ಬಿಡುತ್ತದೆಯೋ ಎಂಬ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಬರಲಿರುವ ನಗರಸಭೆ ಚುನಾವಣೆ ಉತ್ತರಿಸುತ್ತದೆ.

ಬಿಜೆಪಿ ಚಿತ್ತ ನಗರಸಭೆ ಚುನಾವಣೆಯತ್ತ
ರಾಜ್ಯದೆಲ್ಲೆಡೆ ಬಿಜೆಪಿ ಹೋರಾಟ- ಹಾರಾಟ ಎರಡರಲ್ಲೂ ಮುಂದಿದ್ದರೆ ಭದ್ರಾವತಿಯಲ್ಲಿ ಮಾತ್ರ ಅದು ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತವಾಗಿ ಉಳಿದಿತ್ತು. ವಿಧಾನಸಭೆ ಮತ್ತು ನಗರಸಭೆ ಚುನಾವಣೆಯಲ್ಲಿ ಆಪಕ್ಷ ಮಕಾಡೆ ಮಲಗುವುದು ಅದಕ್ಕೆ ಅಭ್ಯಾಸವಾಗಿ ಹೋಗಿತ್ತು. ಆದರೆ ಈ ಬಾರಿ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ರಾಜ್ಯದ ಜನತೆ ಕಾಂಗ್ರೆಸ್‌ ಪಕ್ಷವನ್ನು ಸಾರಾಸಗಟಾಗಿ ತಿರಸ್ಕರಿಸಿರುವುದರಿಂದ ಸ್ಥಳೀಯವಾಗಿ ನಗರಸಭೆ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಬೆಂಬಲ ನೀಡಿ ಆಶೀರ್ವದಿಸುವರೆಂಬ ನಂಬಿಕೆ ಇಲ್ಲಿನ ಆ ಪಕ್ಷದ ನಾಯಕರಲ್ಲಿ ಇದೆ. ನಗರಸಭೆ ಅಧಿಕಾರದ ಚುಕ್ಕಾಣಿ ಸಿಗಬಹುದೇನೋ ಎಂಬ ಆಶಾಭಾವನೆ ಚಿಗುರೊಡೆಯುವಂತೆ ಮಾಡಿದೆ. ಬಿಜೆಪಿಯಲ್ಲಿದ್ದರೂ ಅಪ್ಪ- ಅಣ್ಣನ ತೆಕ್ಕೆಯೊಳಗೆ ಸೇರಿ ರಾಜಕಾರಣ ಮಾಡುವವರಿಗೆ ಟಿಕೆಟ್ ನೀಡದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಿದರೆ ಮತ್ತು ಒಳಜಗಳ ಮರೆತು ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದರೆ ಈ ಬಾರಿ ನಗರಸಭೆ ಚುಕ್ಕಾಣಿ ಬಿಜೆಪಿಗೆ ದಕ್ಕುವುದರಲ್ಲಿ ಸಂದೇಹವಿಲ್ಲ ಎಂಬುದು ಆ ಪಕ್ಷದ ಅಭಿಮಾನಿಗಳ ಮಾತು. ಸದ್ಯಕ್ಕೆ ವಾರ್ಡ್‌ ಮೀಸಲಾತಿ ಕುರಿತಂತೆ ಒಬ್ಬರು ರಾಜ್ಯ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಇಲ್ಲಿನ ನಗರಸಭೆ ಚುನಾವಣೆ ದಿನಾಂಕ ನಿಗದಿಯಾಗಿಲ್ಲವಾದ ಕಾರಣ ಎಲ್ಲರಿಗೂ ಸ್ವಲ್ಪ ಕಾಲಾವಕಾಶ ಸಿಕ್ಕಿದೆ. ಸಿಕ್ಕ ಅವಕಾಶವನ್ನು ಹೇಗೆ ಬಳಸಿಕೊಂಡು ಮುಂದೆ ನಗರಸಭೆ ಅಧಿಕಾರದ ಚುಕ್ಕಾಣಿ ಯಾರು ಹಿಡಿಯುತ್ತಾರೋ ಕಾದು ನೋಡಬೇಕಿದೆ.

ಕೆ.ಎಸ್‌.ಸುಧೀಂದ್ರ ಭದ್ರಾವತಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.