ವಿಐಎಸ್‌ಎಲ್ ಖಾಸಗೀಕರಣಕ್ಕೆ ವಿರೋಧ

ಉಕ್ಕು ಕಾರ್ಖಾನೆ ನಿವೃತ್ತ ಕಾರ್ಮಿಕರಿಂದ ಕಾರ್ಖಾನೆ ಮುಖ್ಯದ್ವಾರದ ಎದುರು ಪ್ರತಿಭಟನೆ

Team Udayavani, Jul 24, 2019, 10:41 AM IST

24-July-7

ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ಖಾಸಗೀಕರಣ ನೀತಿ ಖಂಡಿಸಿ ನಿವೃತ್ತ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆಯ ಖಾಸಗೀಕರಣ ಹಾಗೂ 1 ಸಾವಿರ ಎಕರೆ ನಗರ ಪ್ರದೇಶವನ್ನು ಕೇಂದ್ರ ಸರಕಾರ ಖಾಸಗಿ ವ್ಯಕ್ತಿಗಳಿಗೆ ನೀಡಲು ಮುಂದಾಗಿರುವುದನ್ನು ವಿಐಎಸ್‌ಎಲ್ ನಿವೃತ್ತ ಕಾರ್ಮಿಕರು ಖಂಡಿಸಿ ಕಾರ್ಖಾನೆಯ ಮುಖ್ಯದ್ವಾರದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರದ ಅಧ್ಯಕ್ಷ ಜೆ.ಎಸ್‌. ನಾಗಭೂಷಣ್‌ ಅಧ್ಯಕ್ಷತೆಯಲ್ಲಿ ಸಭೆ ಸೇರಿ ನಂತರ ಕಾರ್ಖಾನೆಯ ಮುಂಭಾಗ ಪ್ರತಿಭಟಿಸಿದ ನಿವೃತ್ತ ಕಾರ್ಮಿಕರು ಭಾರತ ರತ್ನ ಸರ್‌.ಎಂ. ವಿಶ್ವೇಶ್ವರಯ್ಯ ಸಂಸ್ಥಾಪಿಸಿದ ಕಾರ್ಖಾನೆಗೆ ನೂರು ವರ್ಷಗಳು ತುಂಬಿದ್ದು, ಶತಮಾನ ಆಚರಿಸುವ ಸಂದರ್ಭದಲ್ಲಿ ಶೋಕಾಚರಣೆ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಖಾನೆಯ ಜೊತೆಗೆ ಕೋಟ್ಯಂತರ ರೂ. ಬೆಲೆ ಬಾಳುವ ನಗರ ಪ್ರದೇಶ, ಪ್ರತಿಷ್ಟಿತ ಅತಿಥಿಗೃಹ, ಸ್ಟೇಡಿಯಂ, ಶಾಲಾ- ಕಾಲೇಜುಗಳು, ದೇವಸ್ಥಾನ, ಚರ್ಚ್‌ ಮಸೀದಿ ಹಾಗೂ ವಸತಿಗೃಹಗಳ ಜೊತೆಗೆ ಖಾಲಿ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ವಹಿಸಲು ಸಿದ್ಧತೆ ನಡೆದಿದೆ.

ಕಾರ್ಖಾನೆಗೆ ಅಗತ್ಯ ಬಂಡವಾಳ ತೊಡಗಿಸುವುದನ್ನು ಬಿಟ್ಟು ಖಾಸಗೀಕರಣಗೊಳಿಸಲು ಜಾಗತಿಕ ಟೆಂಡರ್‌ ಕರೆದಿರುವುದು ಖಂಡನೀಯ. ಕಾರ್ಖಾನೆ ದುಸ್ಥಿತಿಗೆ ಸೈಲ್ ಅಧಿಕಾರಿಗಳೇ ಕಾರಣಕರ್ತರಾಗಿದ್ದು, ತಾತ್ಸಾರ, ಬೇಜವಾಬ್ದಾರಿ, ಮಲತಾಯಿ ಧೋರಣೆಗೆ ಇಂದಿನ ಸ್ಥಿತಿಗೆ ಕಾರಣವಾಗಿದೆ. ಸೈಲ್ ಆಡಳಿತಕ್ಕೆ ಒಳಪಟ್ಟ ಹೊರ ರಾಜ್ಯ ಕಾರ್ಖಾನೆಗಳು ಸುಮಾರು 10 ವರ್ಷಗಳಲ್ಲಿ 75 ಸಾವಿರ ರೂ. ಬಂಡವಾಳ ತೊಡಗಿಸಿ ವಿಐಎಸ್‌ಎಲ್ ಕಾರ್ಖಾನೆಗೆ ಕೇವಲ 150 ಕೋಟಿ ರೂ. ಮಾತ್ರ ಒದಗಿಸಿರುವುದು ಸರಿಯಾದ ಕ್ರಮವಲ್ಲ ಎಂದರು.

ಖಾಸಗಿ ವ್ಯಕ್ತಿಗಳಿಗೆ ವಹಿಸಲುದ್ದೇಶಿಸಿರುವ ನಗರ ಪ್ರದೇಶವನ್ನು ದೀರ್ಘಾವಧಿ ಆಧಾರದಡಿ ಹಾಗೂ ಪರವಾನಗಿ ಆಧಾರದಡಿ ವಾಸವಿರುವ ಸುಮಾರು 2500 ನಿವೃತ್ತ ಕಾರ್ಮಿಕರಮನೆಗಳನ್ನು ರಕ್ಷಿಸಕೊಳ್ಳಬೇಕಿದೆ. ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳ ಪಾಲಾಗದಂತೆ ನಿವೃತ್ತ ಕಾರ್ಮಿಕರು ಎಚ್ಚರ ವಹಿಸುವಮೂಲಕ ತೀವ್ರ ಹೋರಾಟ ಮಾಡಬೇಕಿದೆ. ಕೂಡಲೇ ಖಾಸಗೀಕರಣ ಕೈ ಬಿಟ್ಟು ಸೂಕ್ತ ಬಂಡವಾಳ ತೊಡಗಿಸಿ ನೂತನ ತಂತ್ರಜ್ಞಾನದಿಂದ ಕಾರ್ಖಾನೆಯನ್ನು ಅಭಿವೃದ್ಧಿಪಡಿಸಲು ಮುಂದಾಗಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನಿವೃತ್ತ ಕಾರ್ಮಿಕ ಸಂಘದ ಪದಾಧಿಕಾರಿಗಳಾದ ಬಿ. ಮಂಜುನಾಥ್‌, ಎಸ್‌.ಎಚ್. ಹನುಮಂತರಾವ್‌, ಜಿ.ಕೆ. ರವೀಂದ್ರರೆಡ್ಡಿ, ಕೆಂಪಯ್ಯ, ಎಲ್. ಬಸವರಾಜ್‌, ಮುಖಂಡರಾದ ಕಬ್ಬಡಿ ಕೃಷ್ಣೇಗೌಡ, ಬಿ.ಜಿ. ರಾಮಲಿಂಗಯ್ಯ, ಕೆ.ಎನ್‌. ಭೈರಪ್ಪ ಗೌಡ, ಹಾ. ರಾಮಪ್ಪ, ಎಸ್‌.ಬಿ. ಶಿವಲಿಂಗಯ್ಯ, ನರಸಿಂಹಾಚಾರ್‌, ರಮೇಶ್‌, ಜಿ. ಶಂಕರ್‌, ಶಿವಬಸಪ್ಪ ಪಾಟೀಲ್, ಎಸ್‌.ಎಸ್‌. ಭೈರಪ್ಪ, ಮರಿಯಪ್ಪ, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.