ನಗರಸಭೆಯಿಂದ ಸೂರು ಯೋಜನೆ

ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದಿಂದ ಅನುಮೋದನೆ

Team Udayavani, Aug 9, 2019, 3:23 PM IST

9-Agust-31

ಭದ್ರಾವತಿ: ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ನಗರಸಭೆ ನಿರ್ಮಿಸಲು ಮುಂದಾಗಿರುವ ಜಿ+3 ಮನೆಗಳ ಮಾದರಿಯನ್ನು ಪ್ರದರ್ಶಿಸಿದ ಶಾಸಕ ಸಂಗಮೇಶ್ವರ್‌ ಹಾಗೂ ಪೌರಾಯುಕ್ತ ಮನೋಹರ್‌.

ಭದ್ರಾವತಿ: ರಾಜ್ಯ ಹಾಗೂ ಕೇಂದ್ರ ಸರಕಾರಗಳ ಸರ್ವರಿಗೂ ಸೂರು ಅನುಷ್ಠಾನದ ಮಹತ್ವಾಕಾಂಕ್ಷಿ ವಸತಿ ಯೋಜನೆಯಾದ ಪ್ರಧಾನಮಂತ್ರಿ ಅವಾಜ್‌ ಯೋಜನೆಯಡಿ ನಗರಸಭೆ ಜಿ+3 ನಾಲ್ಕು ಸಾವಿರ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 2022 ರೊಳಗೆ ಸರ್ವರಿಗೂ ಸೂರು ಇರಬೇಕೆಂಬ ಉದ್ದೇಶದಿಂದ ನಗರಸಭೆ ಸುಮಾರು 4 ಸಾವಿರ ಜಿ+3 ಮಾದರಿಯಲ್ಲಿ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದಿಂದ ಅನುಮೋದನೆ ಪಡೆಯಲಾಗಿದೆ ಎಂದರು.

ನಗರದ ತಿಮ್ಲಾಪುರದಲ್ಲಿ 8 ಎಕರೆ, ಮೂಲೆಕಟ್ಟೆ (ಬುಳ್ಳಾಪುರ) 8 ಎಕರೆ, ಜೇಡಿಕಟ್ಟೆ ಹೊಸೂರು 18 ಎಕರೆ ಜಾಗದಲ್ಲಿ ಗುಂಪು ಮನೆಗಳನ್ನು ನಿರ್ಮಿಸಿ ಅರ್ಹ ವಸತಿ ರಹಿತರಿಗೆ ವಿತರಿಸಲು ಕ್ರಮ ವಹಿಸಲಾಗುವುದು. ಈ ಯೋಜನೆಯಡಿ 5,14 ಲಕ್ಷ ರೂಗಳಾಗಿದ್ದು ಸಾಮಾನ್ಯ ವರ್ಗಕ್ಕೆ ರಾಜ್ಯ ಸರಕಾರ 1.20, ಕೇಂದ್ರ ಸರಕಾರ 1.5 ರೂಗಳಂತೆ ಒಟ್ಟು 2.7 ಲಕ್ಷ ರೂಗಳ ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ /ಪಂಗಡ ಫಲಾನುಭವಿಗಳಿಗೆ ರಾಜ್ಯ ಸರಕಾರ 2 ಲಕ್ಷ ಹಾಗೂ ಕೇಂದ್ರ ಸರಕಾರ 1.5 ಲಕ್ಷ ರೂ ಒಟ್ಟು 3.50 ಲಕ್ಷ ರೂ.ಗಳನ್ನು ಹಾಗು ಸಾಮಾನ್ಯ ವರ್ಗದ ಜನರಿಗೆ 2.30 ಲಕ್ಷ ರೂ.ಗಳನ್ನು ಆಯ್ಕೆಯಾದ ಫಲಾನುಭವಿಗಳಿಂದ ಪಡೆಯಲಾಗುವುದು. ಒಂದು ವೇಳೆ ಮೊತ್ತವನ್ನು ಫಲಾನುಭವಿಗಳು ನೀಡಲು ಸಾಧ್ಯವಾಗದಿದ್ದಲ್ಲಿ ಉಳಿಕೆ ಮೊತ್ತವನ್ನು ಫಲಾನುಭವಿಗಳ ಹೆಸರಲ್ಲಿ ಯಾವುದಾದರೂ ಬ್ಯಾಂಕಿನಿಂದ ಸಾಲ ಕೊಡಿಸಲು ಕ್ರಮ ವಹಿಸಲಾಗುವುದು. ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ವಿಕಲಾಂಗದವರಿಗೆ ಮೀಸಲಾತಿ ಕಲ್ಪಿಸಲಾಗಿದೆ.

ತಾಲೂಕಿನಾದ್ಯಂತ ಮಳೆ ಹೆಚ್ಚಾಗಿರುವ ಕಾರಣ ನಗರಸಭಾ ವ್ಯಾಪ್ತಿಯಲ್ಲಿ ಮನೆಗಳು ಹಾನಿಯಾದಲ್ಲಿ ತಾಲೂಕು ಆಡಳಿತ ಹಾಗೂ ನಗರಸಭೆ ಕಾರ್ಯಾಚರಣೆಯಲ್ಲಿ ತೊಡಗಿದ್ದು ಹಾನಿಗೊಳಗಾದ ಮನೆಗಳಿಗೆ ಕನಿಷ್ಟ 10 ಸಾವಿರದಿಂದ ಅತಿ ಹೆಚ್ಚು ಹಾನಿಗೊಳಗಾದ ಮನೆಗಳಿಗೆ 25 ಸಾವಿರ ರೂಗಳನ್ನು ಪರಿಹಾರ ರೂಪದಲ್ಲಿ ನೀಡಲಾಗುವುದು. ನಗರದ ಕವಲುಗುಂದಿ ಪ್ರದೇಶದ ನಿವಾಸಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕಡದಕಟ್ಟೆಯಲ್ಲಿ ನಿವೇಶನ ನೀಡಲಾಗುವುದು. ಈಗಾಗಲೇ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಇನ್ನುಳಿದಂತೆ ಆಂಜನೇಯ ಅಗ್ರಹಾರ, ಕೂಲಿಬ್ಲಾಕ್‌, ಉಜ್ಜನಿಪುರ ಸೇರಿದಂತೆ ಹಲವು ಭಾಗಗಳ ಫಲಾನುಭವಿಗಳಿಗೆ ಮಳೆಗಾಲದ ನಂತರ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಸಂಗಮೇಶ್ವರ್‌ ತಿಳಿಸಿದರು.

ಆನ್‌ಲೈನ್‌ ಮೂಲಕ ಅರ್ಜಿ: ಪೌರಾಯುಕ್ತ ಮನೋಹರ್‌ ಮಾತನಾಡಿ, ಯೋಜನೆಯಿಂದ ನಗರಸಭೆಯು ಯುಜಿಡಿ, ರಸ್ತೆ, ಚರಂಡಿ, ರಸ್ತೆ, ವಿದ್ಯುತ್‌ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಹಿಂದೆ ವಸತಿ ಪಡೆಯಲು ಸಾರ್ವಜನಿಕರು ಸಲ್ಲಿಸಿರುವ ಹಳೇ ಅರ್ಜಿಗಳನ್ನು ರದ್ದು ಪಡಿಸಲಾಗಿದ್ದು ನೂತನವಾಗಿ ಸಾರ್ವಜನಿಕರಿಂದ ಆ. 31 ರಿಂದ ಮುಂದಿನ ಒಂದೂವರೆ ತಿಂಗಳವರೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು. ಅರ್ಜಿಗಳನ್ನು ಸ್ವೀಕರಿಸಲು ನಗರದ 10 ಭಾಗಗಳಲ್ಲಿ ಕೌಂಟರ್‌ಗಳನ್ನು ತೆರಯಲಾಗುವುದು. ಅರ್ಜಿಯೊಂದಿಗೆ ಪಡಿತರ ಚೀಟಿ, ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು ಎಂದರು.

ವಸತಿ ರಹಿತರಿಗೆ ಮಾತ್ರ: ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಯಾವುದೇ ನಿವೇಶನ, ಮನೆ ಇರಬಾರದು ಹಾಗೂ ಕುಟುಂಬದ ಏಕ ಸದಸ್ಯರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ಇತರೆ ಸದಸ್ಯರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆದಾಯ 87,600 ರೂ.ಗಳಿಗೆ ಮೀರಿರಬಾರದು. ಪುರಸಭೆ ಹಾಗೂ ನಗರಸಭೆ ಮಾಲೀಕತ್ವದಲ್ಲಿ ಹಕ್ಕುಪತ್ರಗಳನ್ನು ಪಡೆದಿರುವ ಸಾರ್ವಜನಿಕರು ಇನ್ನು ಹದಿನೈದು ದಿನಗಳಲ್ಲಿ ಮಾಲೀಕತ್ವದ ಹಕ್ಕು ಪಡೆಯಲು ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಹಕ್ಕುಪತ್ರ ಪಡೆಯಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ತಹಶೀಲ್ದಾರ್‌ ಸೋಮಶೇಖರ್‌, ನಗರಸಭಾ ಅಧಿಕಾರಿಗಳಾದ ಸುವಾಸಿನಿ, ರವಿಕುಮಾರ್‌ ಮುಖಂಡರಾದ ಅಣ್ಣೋಜಿ ರಾವ್‌, ಟಿಪ್ಪು, ಆರ್‌. ವೇಣುಗೋಪಾಲ್ ಮತ್ತಿತರರು ಇದ್ದರು.

ಟಾಪ್ ನ್ಯೂಸ್

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.