ಸನಾತನ ಸಂಸ್ಕೃತಿಯ ಮಹತ್ವ ಅಪಾರ

ಉಪನ್ಯಾಸ ಮಾಲಿಕೆ

Team Udayavani, Jun 3, 2019, 5:18 PM IST

3-June-32

ಭದ್ರಾವತಿ: ತಂದೆ-ತಾಯಿ, ಗುರು- ಅತಿಥಿಗಳನ್ನು ದೇವರೆಂದು ಕಾಣಬೇಕು ಎಂದು ವಿಶ್ವದಲ್ಲಿ ಹೇಳುವ ಏಕೈಕ ಸಂಸ್ಕೃತಿ ಸನಾತನ ವೇದ ಸಂಸ್ಕೃತಿ ಎಂದು ಶ್ರೀ ಯಡತೊರೆ ಯೋಗಾನಂದೇಶ್ವರ ಸರಸ್ವತಿ ಮಠದ ಶ್ರೀ ಶಂಕರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಭಾನುವಾರ ಸಂಜೆ ಸಿದ್ಧಾರೂಢನಗರದ ಶೃಂಗೇರಿ ಶ್ರೀ ಶಂಕರ ಶಾರದಾಂಬಾ ಮಠದಲ್ಲಿ ವೇದಾಂತ ಭಾರತಿ ಭಾಷಾಮೃತವಾಹಿನಿಯಿಂದ ಏರ್ಪಡಿಸಿದ್ದ ತೈತ್ತರೀಯೋಪನಿಷತ್‌ ಶಾಂಕರಭಾಷ್ಯ ಉಪನ್ಯಾಸ ಮಾಲಿಕೆಯನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿ ಅವರು ಮಾತನಾಡಿದರು.

ಹತ್ತು ಉಪನಿಷತ್‌ಗಳ ಪೈಕಿ ತೈತ್ತರೀಯ ಉಪನಿಷತ್‌ ತನ್ನದೇ ಆದ ವಿಶಿಷ್ಟತೆ ಹೊಂದಿರುವುದರೊಂದಿಗೆ ಜೀವನದಲ್ಲಿ ಹೇಗೆ ಬದುಕಬೇಕು. ಯಾವುದನ್ನು ಮಾಡಬೇಕು. ಯಾವುದನ್ನು ಮಾಡಬಾರದು ಎಂದು ತಿಳಿಸುತ್ತದೆ. ಶಂಕರಾಚಾರ್ಯರು ತೈತ್ತರೀಯ ಉಪನಿಷತ್‌ ಮೇಲೆ ರಚಿಸಿರುವ ಭಾಷ್ಯ ಅದರಲ್ಲಿನ ಶ್ಲೋಕಗಳ ಯತಾರ್ಥವನ್ನು ತಿಳಿಸುತ್ತದೆ ಎಂದರು.

ಮಾತೃ ದೇವೋಭವ, ಪಿತೃ ದೇವೋಭವ ಎನ್ನುವ ತೈತ್ತರೀಯ ಉಪನಿಷತ್‌ ಮಂತ್ರ ಕೇವಲ ಅವರು ನಮ್ಮ ಜನ್ಮಕ್ಕೆ ಕಾರಣರಾದುದರಿಂದ ಆ ಕೃತಜ್ಞತೆಗಾಗಿ ಅವರನ್ನು ದೇವರೆಂದು ಕಾಣಬೇಕೆಂದು ಹೇಳಿಲ್ಲ. ನಮ್ಮ ಆತ್ಮೋನ್ನತಿಯಾಗಬೇಕಾದರೆ ನಿಜವಾದ ಬ್ರಹ್ಮಜ್ಞಾನ ಅಂದರೆ ಆನಂದ ಪ್ರಾಪ್ತಿಯಾಗಬೇಕಾದರೆ ಬದುಕಿನಲ್ಲಿ ಅವರನ್ನು ಸದಾ ದೇವರಂತೆ ಆದರದಿಂದ ಕಾಣಬೇಕು ಎಂದು ಹೇಳಿದೆ. ಆದರೆ ಇಂದು ಈ ಉಪನಿಷತ್‌ ಮಂತ್ರಗಳ ಅರ್ಥವನ್ನು ಅರಿಯುವ ಗೋಜಿಗೆ ಹೋಗದೆ ಮಂತ್ರಗಳನ್ನು ಕೇವಲ ಕೇಳುವ, ಹೇಳುವ ಪರಿಪಾಠ ಬೆಳೆಸಿಕೊಂಡಿರುವುದರಿಂದ ಮನೆ- ಮನಗಳಲ್ಲಿ ತಂದೆ-ತಾಯಿರನ್ನು ಮಕ್ಕಳು ಅನಾದರದಿಂದ ಕಾಣುವ ಪ್ರವೃತ್ತಿ ಹೆಚ್ಚಾಗಿದೆ ಎಂದರು.

ಮಠದ ಧರ್ಮಾಧಿಕಾರಿ ಸುಬ್ಬರಾವ್‌ ಮಾತನಾಡಿದರು. ವೇದಾಂತ ಭಾರತಿ ಸಂಚಾಲಕ ಕೃಷ್ಣಮೂರ್ತಿ ಸೋಮಯಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮ.ಸ. ನಂಜುಂಡಸ್ವಾಮಿ ನಿರೂಪಿಸಿದರು.

ಮಠದ ವತಿಯಿಂದ ನಾಗರಾಜ್‌ ದಂಪತಿಗಳು ಶ್ರೀಗಳಿಗೆ ಫಲ ಸಮರ್ಪಣೆ ಮಾಡಿದರು. ಪೂಜಾ ಪ್ರಾರ್ಥಿಸಿದರು.ಮಠದ ಅರ್ಚಕ ಗಣೇಶ್‌ ಭಟ್, ಅಬಸೆ ದಿನೇಶ್‌ಜೋ‚ಶಿ, ಜನಾರ್ಧನ ಐಯ್ಯಂಗಾರ್‌, ವೇ| ಬ್ರ| ರಂಗ‌ನಾಥ ಶರ್ಮ, ಕೆ. ನಾಗರಾಜ್‌ ಹಾಗೂ ಮತ್ತೂರಿನ ಪಂಡಿತರು ಮತ್ತಿತರರು ಇದ್ದರು.

ಕಾರ್ಯಕ್ರಮದ ಆರಂಭದಲ್ಲಿ ಶ್ರೀಗಳನ್ನು ವೇದಪಠಣದೊಂದಿಗೆ ಪೂರ್ಣಕುಂಭ ಸ್ವಾಗತದ ಮೂಲಕ ದೇವಾಲಯಕ್ಕೆ ಕರೆ ತರಲಾಯಿತು. ಗಣಪತಿ, ಶಾರದೆ, ಶಂಕರಾಚಾರ್ಯರ ಮೂರ್ತಿಗೆ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಫಲಮಂತ್ರಾಕ್ಷತೆ ತೀರ್ಥಪ್ರಸಾದ ವಿತರಿಸಲಾಯಿತು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.