ವಿಐಎಸ್‌ಎಲ್ ಉಳಿಸಲು ಸಂಸದರು ಒಂದಾಗಿ

•ಕೇಂದ್ರ ಸರ್ಕಾರ ಕಾರ್ಖಾನೆ ಅಭಿವೃದ್ಧಿಗೆ ಮುಂದಾಗದ್ದು ಸರಿಯಲ್ಲ: ಚಕ್ರವರ್ತಿ ಸೂಲಿಬೆಲೆ

Team Udayavani, Jul 19, 2019, 1:09 PM IST

19-July-16

ಭದ್ರಾವತಿ: ನ್ಯೂಟೌನ್‌ ಶಾರದಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಐಎಸ್‌ಎಲ್ ಉಳಿಸಿ ಸಂವಾದ ಕಾರ್ಯಕ್ರಮವನ್ನು ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಉದ್ಘಾಟಿಸಿದರು

ಭದ್ರಾವತಿ: ಮೈಸೂರು ಅರಸರ ಹಾಗೂ ಸಂಸ್ಥಾಸನದ ದಿವಾನರಾಗಿದ್ದ ಭಾರತರತ್ನ ಸರ್‌.ಎಂ. ವಿಶ್ವೇಶ್ವರಯ್ಯ ಅವರ ಪರಿಶ್ರಮದಿಂದ ಸ್ಥಾಪತವಾದ ವಿಐಎಸ್‌ಎಲ್ ಕಾರ್ಖಾನೆ ಇಂದು ಅವಸಾನದ ಹಾದಿಯಲ್ಲಿ ಸಾಗುತ್ತಿರುವುದನ್ನು ತಪ್ಪಿಸಿ ಕಾರ್ಖಾನೆಯನ್ನು ಉಳಿಸಲು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಗುರುವಾರ ನ್ಯೂಟೌನ್‌ ಶಾರದಾ ಮಂದಿರದಲ್ಲಿ ವಿಐಎಸ್‌ಎಲ್ ಕಾರ್ಮಿಕ ಸಂಘ, ಗುತ್ತಿಗೆ ಕಾರ್ಮಿಕ ಸಂಘ ಹಾಗೂ ಯುವ ಬ್ರಿಗೇಡ್‌ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಐಎಸ್‌ಎಲ್ ಸಂವಾದ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಮತ್ತು ಕಾರ್ಮಿಕರೊಂದಿಗೆ ಪರಸ್ಪರ ಸಂವಾದ ನಡೆಸಿ ಅವರು ಮಾತನಾಡಿದರು.

ಒಂದು ಉತ್ತಮ ಕಾರ್ಖಾನೆ ನಡೆಸಲು ಅಗತ್ಯವಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಹೊಂದಿರುವ ಭದ್ರಾನದಿಯ ದಡದಲ್ಲಿರುವ ಭದ್ರಾವತಿಯಲ್ಲಿ ಸರ್‌.ಎಂ.ವಿ. ಅವರ ದೂರದೃಷ್ಟಿಯ ಫಲವಾಗಿ ಆರಂಭಗೊಂಡ ಈ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಸ್ಥಾಪನೆಯಿಂದ ಅಸಂಖ್ಯಾತ ಕುಟುಂಬಗಳಿಗೆ ಕೆಲಸ ದೊರಕುವಂತಾಗಿ ದೇಶದಲ್ಲಿಯೇ ಉತ್ತಮ ಹೆಸರು ಗಳಿಸಿತ್ತು. ಈ ಕಾರ್ಖಾನೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿತ್ತು. ಆದರೆ ಈಗ ಈ ಕಾರ್ಖಾನೆ ಅವಸಾನದ ಅಂಚಿಗೆ ಬಂದಿರುವುದನ್ನು ನೋಡಿಕೊಂಡು ಸುಮ್ಮನಿರಲಾಗದು. ಇಂತಹ ಬೃಹತ್‌ ಕಾರ್ಖಾನೆಯನ್ನು ರಾಜ್ಯದ ಎಲ್ಲಾ ಸಂಸದರು ಒಗ್ಗೂಡಿ ಉಳಿಸಬೇಕಾಗಿದೆ ಎಂದರು.

ಸರ್‌ಎಂವಿ ಹೆಸರು ಉಳಿಸಿ: ಮೈಸೂರು ಅರಸರ ಮತ್ತು ಜಗತøಸಿದ್ದ ಇಂಜಿನಿಯರ್‌ ಸರ್‌ಎಂವಿ ಅವರ ಹೆಸರು ಉಳಿಸಲು ಕಾರ್ಖಾನೆಯ ಲಾಭ-ನಷ್ಟಗಳ ವಿಷಯವನ್ನು ಬದಿಗಿಟ್ಟು ರಾಜ್ಯದ ಸಂಸದರು ಒಗ್ಗೂಡಿ ಪ್ರಧಾನ ಮಂತ್ರಿ, ಕೇಂದ್ರದ ಉಕ್ಕು ಮತ್ತು ಹಣಕಾಸು ಸಚಿವರು ಹಾಗೂ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕಿದೆ. ಏಷ್ಯಾ ಖಂಡದಲ್ಲಿ ಉತ್ಕೃಷ್ಟ ಉಕ್ಕು ತಯಾರಿಕೆಯ ಈ ಕಾರ್ಖಾನೆ ಉಳಿದರೆ ದೇಶಕ್ಕೆ ಮಾದರಿ ಕಾರ್ಖಾನೆ ಎನಿಸಿ ಮತ್ತೆ ಗತವೈಭವ ಪಡೆದು ಪುನಃ ಅಸಂಖ್ಯಾತ ಕಾರ್ಮಿಕರಿಗೆ ಕೆಲಸ ದೊರಕುವಂತಾಗುತ್ತದೆ ಎಂದರು.

ದೇಶವ್ಯಾಪಿ ಹೋರಾಟ ಅಗತ್ಯ: ಪಕ್ಷಾತೀತವಾಗಿ ಚುನಾಯಿತ ಪ್ರತಿನಿಧಿಗಳು ಹೋರಾಡಿ ಸೈಲ್ ಆಡಳಿತದ ಮೇಲೆ ಒತ್ತಡ ತರಬೇಕು. ವಿಐಎಸ್‌ಎಲ್ ಉಳಿಸಿ ಹೋರಾಟ ಕೇವಲ ಶಿವಮೊಗ್ಗ ಜಿಲ್ಲೆಗೆ ಸೀಮಿತವಾಗದೆ ದೇಶವ್ಯಾಪಿ ಹೋರಾಟ ನಡೆಯಬೇಕು ಎಂದರು.

ಲಕ್ಷಾಂತರ ಕೋಟಿ ಬೆಲೆಬಾಳುವ ಕಾರ್ಖಾನೆಗೆ ಸೇರಿದ ಆಸ್ತಿಯನ್ನು ರಾಜ್ಯ ಸರಕಾರ ಕೇವಲ ಒಂದು ರೂ. ಮುಖಬೆಲೆಗೆ ಅಭಿವೃದ್ಧಿಪಡಿಸಲೆಂದು ಕೇಂದ್ರ ಸರಕಾರಕ್ಕೆ ನೀಡಿತ್ತಾದರೂ ಅಭಿವೃದ್ಧಿಪಡಿಸದೆ ಮಾರಾಟಕ್ಕೆ ಮುಂದಾಗಿರುವುದು ಸರಿಯಲ್ಲ ಎಂದರು.

ಖಾಸಗೀಕರಣಕ್ಕೆ ತಪ್ಪು ಮಾಹಿತಿ ಕಾರಣ: 700 ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಕಾರ್ಖಾನೆ ಮತ್ತು ಕಾರ್ಮಿಕರ ವಸತಿಗೃಹಗಳಿಂದ ವಾರ್ಷಿಕ ಸುಮಾರು 2 ಸಾವಿರ ಕೋಟಿ ಆದಾಯ ಲಭಿಸುತ್ತಿದೆ. ಕಾರ್ಖಾನೆಗೆ ಬಂಡವಾಳ ತೊಡಗಿಸಿ ಆಧುನಿಕ ಯಂತ್ರೋಪಕರಣ ಅಳವಡಿಸಿದರೆ ಕಾರ್ಖಾನೆ ಲಾಭದಾಯಕವಾಗಿ ನಡೆಯುವುದರಲ್ಲಿ ಅನುಮಾನವಿಲ್ಲ. ಆದರೆ ಇತ್ತೀಚೆಗೆ ಕಾರ್ಖಾನೆಗೆ ಭೇಟಿ ನೀಡಿದ್ದ ಕೇಂದ್ರ ಅಧಿಕಾರಿಗಳು ಸೈಲ್ ಆಡಳಿತಕ್ಕೆ ಈ ಬಗ್ಗೆ ಸರಿಯಾದ ಮಾಹಿತಿ ನೀಡದೆ ತಪ್ಪು ಮಾಹಿತಿ ನೀಡಿದ್ದ ಹಿನ್ನಲೆಯಲ್ಲಿ ಬಹುಶಃ ಕೇಂದ್ರ ಸರ್ಕಾರ ಈ ಸತ್ಯಾಂಶದ ಅರಿವಿಲ್ಲದೆ ಕಾರ್ಖಾನೆಯನ್ನು ಮಾರಾಟ ಮಾಡಲು ಮುಂದಾಗಿರುವ ಸಾಧ್ಯತೆ ಹೆಚ್ಚಾಗಿರುವಂತೆ ಕಾಣುತ್ತದೆ ಎಂದರು.

ಕಾರ್ಮಿಕರ ಹೋರಾಟ ಬೆಂಬಲಿಸಿ: ಕಾರ್ಮಿಕರ ಹೋರಾಟಕ್ಕೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಚಾರ ಸಿಗುತ್ತಿಲ್ಲ. ಮಾಧ್ಯಮಗಳು ಇಂತಹ ಹೋರಾಟವನ್ನು ಹತ್ತಿಕ್ಕಲು ಯತ್ನಿಸಬಾರದು. ಇದನ್ನರಿತ ನಾವು ಕಾರ್ಮಿಕ ಮುಖಂಡರೊಂದಿಗೆ ಚರ್ಚಿಸಿ ಸಾಮಾಜಿಕ ಜಾಲತಾಣದಲ್ಲಿ ‘ವಿಐಎಸ್‌ಎಲ್ ಆನ್‌ ಡೆತ್‌ ಬೆಡ್‌’ ಎಂಬ ಹೆಸರಿನಲ್ಲಿ ಟ್ವೀಟ್ ಮಾಡಿದ್ದು ಸುಮಾರು 60 ಸಾವಿರಕ್ಕೂ ಅಧಿಕ ಜನರು ಪ್ರತಿಕ್ರಿಯೆ ನೀಡಿ ಕೇಂದ್ರ ಸರಕಾರದ ಗಮನ ಸೆಳೆಯುವಂತಾಗಿದೆ. ಇಂತಹ ಮಾಧ್ಯಮಗಳನ್ನು ಸದುಪಯೋಗ ಪಡಿಸಿಕೊಂಡು ಕೊನೆ ಉಸಿರು ಎಳೆಯುವ ರೋಗಿಗೆ ಆಕ್ಸಿಜನ್‌ ನೀಡುವಂತಾಗಬೇಕೆಂದರು.

ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್‌ ಮಾತನಾಡಿ, ಕಾರ್ಮಿಕ ಸಂಘ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರದೆ ಹೋರಾಟ ಮನೋಭಾವ ಹೊಂದಿದೆ. ಪಕ್ಷಗಳಿಗೆ ಸಂಘವನ್ನು ಸೇರ್ಪಡೆಗೊಳಿಸಲು ಮುಂದಾಗಿಲ್ಲ. ಮೈಸೂರು ಅರಸರು ದಾನವಾಗಿ ನೀಡಿದ ಸಮಸ್ತ ಆಸ್ತಿ ಹೊಂದಿರುವ ಕಾರ್ಖಾನೆಯನ್ನು ಯಾವುದೇ ರೀತಿಯ ಹೋರಾಟ ಮಾಡಿ ಉಳಿಸಿಕೊಳ್ಳಬೇಕೆಂದರು.

ನಿವೃತ್ತ ಕಾರ್ಮಿಕ ಸಂಘದ ಮುಖಂಡ ಹನುಮಂತರಾವ್‌ ಮತ್ತು ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್‌ ಮಾತನಾಡಿದರು. ವಿವಿಧ ಸಂಘ-ಸಂಸ್ಥೆಗಳ ನೂರಾರು ಮಂದಿ ಇದ್ದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.