ಮತ ಜಾಗೃತಿ; ರಂಗೋಲಿ ಸ್ಪರ್ಧೆ
ರಂಗೋಲಿ ಬಿಡಿಸಿ, ಭಾವಗೀತೆ ಹಾಡಿದ ಮಹಿಳೆಯರು
Team Udayavani, Apr 10, 2019, 12:04 PM IST
ಭದ್ರಾವತಿ: ಮತದಾನ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ನಡೆಯಿತು.
ಭದ್ರಾವತಿ: ಲೋಕಸಭಾ ಚುನಾವಣೆ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತಾಲೂಕು ಸ್ತ್ರೀ ಶಕ್ತಿ ಸಂಘಗಳ
ಒಕ್ಕೂಟದಿಂದ ಸಂಯುಕ್ತವಾಗಿ ಇಲ್ಲಿಯ ಹಳೇ ನಗರದ ವೀರಶೈವ ಸಭಾ ಭವನದಲ್ಲಿ ರಂಗೋಲಿ, ಮ್ಯೂಸಿಕಲ್, ಭಾವಗೀತೆ, ಜಾನಪದ
ಹಗ್ಗಜಗ್ಗಾಟ ಸೇರಿದಂತೆ ಇತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ತಾಪಂ ಇಒ ತಮ್ಮಣ್ಣಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಸಿಡಿಪಿಒ ಸುರೇಶ್ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಂದ
ಬಂದಿದ್ದ ನೂರಾರು ಮಹಿಳೆಯರು ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ಮತದಾನ ಮಾಡಿ ಕರ್ತವ್ಯ ನಿರ್ವಹಿಸಿ, ಮತದಾನ ನಮ್ಮೆಲ್ಲರ ಹಕ್ಕು ಎಂಬಿತ್ಯಾದಿ ಘೋಷಣಾ ವಾಕ್ಯಗಳನ್ನು ಮಹಿಳೆಯರು ತಾವು ಬಿಡಿಸಿದ ವರ್ಣಮಯ
ರಂಗೋಲಿಯ ಅಡಿಯಲ್ಲಿ ಬರೆದರು.
ಕೆಲವು ಮಹಿಳೆಯರು ಮತದಾನದ ದಿನ ಬಳಸುವ ಮತಯಂತ್ರಗಳ ಚಿತ್ರವನ್ನು, ವಿವಿಪ್ಯಾಟ್ ಚಿತ್ರವನ್ನು ಬರೆಯುವ ಮೂಲಕ ಗಮನ ಸೆಳೆದರು. ಮತ್ತೆ ಕೆಲವರು ಮತದಾನದ ಶ್ರೇಷ್ಠತೆ ಸಾರುವ ಸ್ವರಚಿತ ಗೀತೆಗಳನ್ನು ಹಾಡಿದರೆ ಕೆಲವರು ಭಾವಗೀತೆ ,ಜಾನಪದ ಗೀತೆ ಹಾಡುವ ಮೂಲಕ ಮನ ರಂಜಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ