ಪೂರ್ಣ ಬೆಳೆ ಹಾನಿಗೆ ಪರಿಹಾರ ಕೊಡಿ
Team Udayavani, Sep 12, 2019, 5:32 PM IST
ಬಾಗಲಕೋಟೆ: ಜಿಲ್ಲಾಡಳಿತ ಭವನದ ಎದುರು ವಿವಿಧ ಸಂಘಟನೆಗಳ ಪ್ರಮುಖರು ರೈತರು ಪ್ರತಿಭಟನೆ ನಡೆಸಿದರು.
ಬಾಗಲಕೋಟೆ: ಪ್ರವಾಹದಿಂದ ಜಿಲ್ಲೆಯ ರೈತರ ಬೆಳೆ ಹಾನಿಗೆ ಪೂರ್ಣ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ರೈತರು ಬುಧವಾರ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ಜಯ ಕರ್ನಾಟಕ ಸಂಘಟನೆ, ನೇಕಾರರ ಸಂಘ ಮತ್ತು ಕಾರ್ಮಿಕರ ಸಂಘದ ನೂರಾರು ಕಾರ್ಯಕರ್ತರು, ರೈತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರೈತ ಮುಖಂಡರು ಮಾತನಾಡಿ, ಮೂರು ನದಿಗಳ ಪ್ರವಾಹದಿಂದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಪ್ರತಿ ಎಕರೆ ಬೆಳೆ ಹಾನಿಗೆ 1.50 ಲಕ್ಷ ಹಾಗೂ ಜೀವ ಹಾನಿಯಾದ ಕುಟುಂಬದವರಿಗೆ 15 ಲಕ್ಷ ಪರಿಹಾರ ನೀಡಬೇಕು. ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿ ಪ್ರವಾಹದಿಂದ ಲಕ್ಷಾಂತರ ಎಕರೆ ಬೆಳೆ, ಮನೆ ಹಾನಿಯಾಗಿವೆ. ಕೆಲವರು ರೈತರ ಹತ್ತಾರು ಎಕರೆ ಬೆಳೆ ಹಾನಿಯಾದರೂ ಕೇವಲ 2 ಹೆಕ್ಟೇರ್ ಬೆಳೆ ಹಾನಿಗೆ ಮಾತ್ರ ಪರಿಹಾರ ನೀಡುತ್ತಿದ್ದಾರೆ. ಇದರಿಂದ ರೈತರಿಗೆ ತೀವ್ರ ಅನ್ಯಾಯವಾಗಲಿದೆ. ಕೂಡಲೇ ರೈತರ ಎಷ್ಟು ಎಕರೆ ಬೆಳೆ ಹಾನಿಯಾಗಿದೆಯೋ, ಅಷ್ಟೂ ಯೋಗ್ಯ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಕಬ್ಬು ಬೆಳೆಗೆ ಪ್ರತಿ ಎಕರೆಗೆ 1,50,000, ಇತರೆ ಬೆಳೆಗೆ ಎಕರೆಗೆ 1 ಲಕ್ಷ, ಹಸು, ಎಮ್ಮೆ, ಎತ್ತು ಪ್ರಾಣ ಹಾನಿಗೆ 80 ಸಾವಿರ ರೂ., ಆಡು, ಕುರಿಗಳಿಗೆ 25 ಸಾವಿರ ರೂ., ಸಂಪೂರ್ಣ ಹಾನಿಯಾದ ಮನೆಗೆ 15 ಲಕ್ಷ ರೂ., ಶೇ.50 ರಷ್ಟು ಹಾನಿಯಾದ ಮನೆಗಳಿಗೆ 10 ಲಕ್ಷ ರೂ., ತೋಟಗಾರಿಕೆೆ ಬೆಳೆಗಳಿಗೆ 2 ಲಕ್ಷ ರೂ., ಜೀವ ಹಾನಿಯಾದ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಪ್ರವಾಹದಿಂದ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು, ಬೆಳೆ ಸಾಲ, ಅಭಿವೃದ್ಧಿ ಸಾಲ, ಹೈನುಗಾರಿಕೆ ಸಾಲ, ಟ್ರ್ಯಾಕ್ಟರ್ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಪ್ರವಾಹಕ್ಕೆ ತುತ್ತಾದ ಗ್ರಾಮಗಳನ್ನು ಸಂಪೂರ್ಣ ಸ್ಥಳಾಂತರ ಮಾಡಬೇಕು. ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡ ಕಬ್ಬಿನ ಬಿಲ್ ನೀಡಬೇಕು, ಕಲ್ಲೋಳ್ಳಿ ಏತ ನೀರಾವರಿ ಯೋಜನೆಗೆ ಜಾಕ್ವೆಲ್ ಹಾಗೂ ಕಾಲುವೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ರೈತರಿಗೆ ಇದುವರೆಗೆ ಪರಿಹಾರ ನೀಡಿಲ್ಲ. ಕೂಡಲೇ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು. ಜಿಪಂ ಉಪಾಧ್ಯಕ್ಷ, ರೈತ ಸಂಘದ ಮುಖಂಡ ಮುತ್ತಪ್ಪ ಕೋಮಾರ, ರೈತ ಸಂಘ ಮುಖಂಡರಾದ ಗಂಗಾಧರ ಮೇಟಿ, ಸುಭಾಸ ಶಿರೂರ, ಶಶಿಕಾಂತ ಬಾಳಿಕಾಯಿ, ಅರ್ಜುನ ಬಂಡಿವಡ್ಡರ, ಮಲ್ಲೇಶ ಜಾಲಿಕಟ್ಟಿ, ಮಲ್ಲನಗೌಡ ತುಂಬದ, ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಆರ್.ಡಿ.ಬಾಬು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್