ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಅವಶ್ಯ
ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Team Udayavani, Aug 23, 2019, 10:44 AM IST
ಭಾಲ್ಕಿ: ಖಟಕಚಿಂಚೋಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಬಿವಿಪಿ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ, ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಭಾಲ್ಕಿ: ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಅತ್ಯವಶ್ಯಕವಾಗಿದೆ ಎಂದು ಹುಗ್ಗೆಳ್ಳಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗದೇವರು ಹೇಳಿದರು.
ಖಟಕ ಚಿಂಚೋಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಡೆದ 2018-19ನೇ ಸಾಲಿನ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಆದರ್ಶ ಶಿಕ್ಷಕರ ಸನ್ಮಾನ ಕಾರ್ಯಕರ್ಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ನಮ್ಮ ವಿದ್ಯಾರ್ಥಿಗಳು ಎಷ್ಟೇ ಪ್ರತಿಭಾವಂತರಾಗಿದ್ದರೂ, ಅವರಲ್ಲಿ ಮಾನವೀಯ ಮೌಲ್ಯಗಳು ಇರುವುದು ಅತ್ಯವಶ್ಯವಾಗಿದೆ. ವಿದ್ಯಾರ್ಥಿ ಉತ್ತಮ ವಿದ್ಯಾಭ್ಯಾಸ ಪಡೆದು ಉನ್ನತ ಹುದ್ದೆಯಲ್ಲಿರುವಾಗ ತಮ್ಮನ್ನು ಸಾಕಿ ಸಲುಹಿದ ತಂದೆ, ತಾಯಿ ಮತ್ತು ಗುರು, ಹಿರಿಯರನ್ನು ಮರೆಯಬಾರದು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ನಾ ರುದನೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸದಾ ಸಕಾರತ್ಮಕ ವಿಚಾರಗಳನ್ನು ಮಾಡಿ, ಗುರು ಹಿರಿಯರನ್ನು ಶ್ರದ್ಧೆ, ಭಕ್ತಿಯಿಂದ ಕಾಣಬೇಕು. ಅಂಕಗಳಿಕೆ ವ್ಯಕ್ತಿತ್ವ ವಿಕಾಸನದ ಒಂದು ಭಾಗ. ಪ್ರತಿಭೆಗೆ ಹಲವು ಮುಖಗಳಿವೆ. ಸಾಧನೆಗೆ ಬಡತನ ಅಡ್ಡಿಯಾಗದು. ಎಲ್ಲಿ ಶ್ರದ್ದೆ ಭಕ್ತಿ ಮತ್ತು ಶಿಸ್ತು ಇರುತ್ತದೆಯೊ ಅಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಗಬೇಕು ಎಂದು ಹೇಳಿದರು.
ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನಿಂಗರಾಜ ಅರಸು ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳನ್ನು ಗುರುತಿಸುವಂತಾಗಬೇಕು. ಶಿಕ್ಷಕ ಎಂದರೆ ಅವರು ಮಕ್ಕಳ ಪಾಲಿನ ಶಿಲ್ಪಿ ಇದ್ದಂತೆ ಎಂದು ಹೇಳಿದರು.
ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವಿರಬೇಕು. ನಾನು ಸಾಧಿಸುವೆನು ಎನ್ನುವ ಛಲವಿರಬೇಕು. ಆಗ ಮಾತ್ರ ಅಂತಹ ವಿದ್ಯಾರ್ಥಿ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ಹೇಳಿದರು. ರೇವಣಸಿದ್ದ ಜಾಡರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾತೋಶ್ರೀ ಗೋದಾವರಿ ತಾಯಿ ನೇತೃತ್ವ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ ಉಪದ್ಯಾಕ್ಷ ಝೇರೆಪ್ಪಾ ಮುಡ್ಡರ, ಬಿಆರ್ಸಿ ನಾಗಭೂಷಣ ಮಾಮಡಿ, ರಾಮಚಂದ್ರ ಬೊಳಾ, ಸತಿಷ ಸಂಗನ್, ಯಶವಂತ ನಾಯಕ, ಶಣಮುಖಯ್ನಾ ಬಾಳೆಮಠ ವಿಜಯ ಕುಮಾರ, ಮುಖ್ಯಶಿಕ್ಷಕಿ ಗಂಗಮ್ಮಾ ಬಿರಾದಾರ, ಉಮೇಶ ತೆಲಂಗ, ಶಿವು ಮಡಿವಾಳ ರಾಮಲಿಂಗ ಮುಳಜಿ, ಮಹೇಶ ನಿಂಬುರೆ, ಲೋಕೆಶ ಮೌರೆ, ಮಾಳಗೊಂಡ ಕೊಳ್ಳೆ, ಗುರು ರೆಡ್ಡಿ, ಸುಮಿತ ಜಾಶೆಟ್ಟೆ ಇದ್ದರು.ನಾಗರಾಜ ಶೀಲವಂತ ಸ್ವಾಗತಿಸಿದರು. ಪರಶುರಾಮ ಪೂಜಾರಿ ನಿರೂಪಿಸಿದರು. ನಂದಿನಿ ಜಾಶೆಟ್ಟೆ ವಂದಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ