ಸಸಿ ನೆಡುವುದೇ ದೊಡ್ಡ ಕೊಡುಗೆ

ಸಮಯಕ್ಕೆ ಸರಿಯಾಗಿ ಮಳೆಯಾಗದೆ ನೀರಿಗಾಗಿ ಪರದಾಟ: ಸ್ವಾಮೀಜಿ

Team Udayavani, Jun 29, 2019, 5:09 PM IST

29-June-35

ಭಾಲ್ಕಿ: ಖಟಕಚಿಂಚೋಳಿ ಗ್ರಾಮದ ಹುಗ್ಗೆಳ್ಳಿ ಹಿರೇಮಠದಲ್ಲಿ ನಡೆದ ಪರಿಸರ ಜಾಗೃತಿ ಆಂದೋಲನಕ್ಕೆ ತಾಪಂ ಸದಸ್ಯ ವಿಜಯಕುಮಾರ ಕಡಗಂಚೆ ಚಾಲನೆ ನೀಡಿದರು.

ಭಾಲ್ಕಿ: ಕಾಲ, ಕಾಲಕ್ಕೆ ಮಳೆಯಾಗದೇ ಸುನಾಮಿ, ಭೂಕಂಪ ಮುಂತಾದ ಪ್ರಕೃತಿ ವಿಕೋಪ ತಡೆಯಲು ನಮ್ಮಲ್ಲಿ ಪರಿಸರ ಜಾಗೃತಿ ಅತ್ಯವಶ್ಯಕವಾಗಿದೆ ಎಂದು ಹುಗ್ಗೆಳ್ಳಿ ಹಿರೇಮಠದ ಶ್ರೀ ಬಸವಲಿಂಗ ದೇವರು ಪ್ರತಿಪಾದಿಸಿದರು.

ತಾಲೂಕಿನ ಖಟಕ ಚಿಂಚೋಳಿ ಗ್ರಾಮದ ಹುಗ್ಗೆಳ್ಳಿ ಹಿರೇಮಠದಲ್ಲಿ ನಡೆದ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು.

ಇಂದಿನ ದಿನಮಾನ ಪಕೃತಿ ವಿಕೋಪದತ್ತ ಸಾಗುತ್ತಿದೆ. ಸಮಯಕ್ಕೆ ಸರಿಯಾಗಿ ಮಳೆಯಾಗದೆ ನಾವೆಲ್ಲರೂ ಹನಿ ನೀರಿಗಾಗಿ ಪರದಾಡುತ್ತಿದ್ದೇವೆ. ಹೀಗಾಗಿ ನಾವೆಲ್ಲರೂ ಪರಿಸರದ ಬಗ್ಗೆ ಜಾಗೃತರಾಗಿ ಪರಿಸರ ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ಹೇಳಿದರು.

ತಾಪಂ ಸದಸ್ಯ ವಿಜಯಕುಮಾರ ಕಡಗಂಚಿ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಪಂ ಸದಸ್ಯ ರವಿ ರೆಡ್ಡಿ, ಭಾರತ ದೇಶದಲ್ಲಿ ಒಟ್ಟು 138 ಕೋಟಿ ಜನಸಂಖ್ಯೆ ಇದೆ. ಪ್ರತಿಯೊಬ್ಬರೂ ಒಂದೊಂದು ಗಿಡ ನೆಟ್ಟರೆ ಸಾಕು ಅದು ಸಮಾಜಕ್ಕೆ ನಾವು ಕೊಡುವ ದೊಡ್ಡ ಕೊಡುಗೆಯಾಗುತ್ತದೆ. ದಿನೇದಿನೇ ಹೆಚ್ಚುತ್ತಿರುವ ಕಾರ್ಖಾನೆಗಳು ರಸ್ತೆ ಅಗಲೀಕರಣ, ಅತಿಯಾದ ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರ ಅವನತಿಯತ್ತ ಸಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬರು ಜಾಗೃತರಾಗಬೇಕು ಎಂದು ಹೇಳಿದರು. ವಿಶೇಷ ಉಪನ್ಯಾಸ ನೀಡಿದ ಶಿಕ್ಷಕ ಶಂಕ್ರಯ್ಯ ಹಿರೇಮಠ, ಪರಿಸರ ಸ್ವಚ್ಛತೆ ಮತ್ತು ಮಳೆ ನೀರಿನ ಕೊಯ್ಲು ಈಗ ಅತ್ಯಗತ್ಯವಾಗಿದೆ. ಕಾರಣ ನಮ್ಮ ಅಂತರ್ಜಲ ಮಟ್ಟ ತೀರಾ ಕುಸಿದಿದೆ. ಹೀಗಾಗಿ ನಾವೆಲ್ಲರೂ ನೀರಿನ ಮಿತವ್ಯಯದೊಂದಿಗೆ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯ ಮಾಡಬೇಕಾಗಿದೆ ಎಂದು ಹೇಳಿದರು.

ಶ್ರೀ ರುದ್ರಮುನಿ ದೇವರು, ಎಬಿವಿಪಿ ರಾಜ್ಯಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ ಮಾತನಾಡಿದರು.

ರಾಜಕುಮಾರ ಚಿಲಶೆಟ್ಟಿ, ಗುರನಾಥ ಭೂರ್ಕೆ, ಬಂಡೆಪ್ಪ ಮೋಳಕೆರೆ, ಓಂಕಾರ ಹಡಪದ, ಶಿವು ದಿಂಡೆ, ದಶವಂತ ಡಾವರಗೆ, ಪ್ರದೀಪ ಉಂಬರಗೆ, ಅನಂದ ರಟಕಲೆ, ರಾಜು ಹಂಡಗೆ, ಗುಂಡು ಸ್ವಾಮಿ, ಸಂಗಮೇಶ ಜ್ಯಾಶೆಟ್ಟೆ, ವಿಜಯ ಕಂಚಕೆ, ರಮೇಶ ಹೊನ್ನಾಳೆ, ಮೋಹನರಡ್ಡಿ ಇದ್ದರು.

ಆನಂದ ರಟಕಲೆ ಸ್ವಾಗತಿಸಿದರು. ಚನ್ನಯ್ಯ ಹುಗ್ಗೆಳ್ಳಿಮಠ ನಿರೂಪಿಸಿದರು. ಚನ್ನಾರೆಡ್ಡಿ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.