ಮಹನೀಯರ ಆದರ್ಶ ಅನುಸರಿಸೋಣ: ಖಂಡ್ರೆ
Team Udayavani, Aug 16, 2019, 4:30 PM IST
ಭಾಲ್ಕಿ: ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಆಡಳಿತದಿಂದ ನಡೆದ 73ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಶಾಸಕ ಈಶ್ವರ ಖಂಡ್ರೆ ಮಾತನಾಡಿದರು.
ಭಾಲ್ಕಿ: ದೇಶಕ್ಕೆ ಸ್ವಾತಂತ್ರ್ಯ ಪುಕ್ಕಟೆಯಾಗಿ ಸಿಕ್ಕಿಲ್ಲ. ಮಹಾತ್ಮ ಗಾಂಧಿ ಸೇರಿದಂತೆ ಹಲವು ಮಹಾತ್ಮರ ನಿರಂತರ ಹೋರಾಟ, ಪ್ರಾಣ ತ್ಯಾಗ, ಬಲಿದಾನದಿಂದ ಇಂದು ನಾವು ಸ್ವತಂತ್ರವಾಗಿದ್ದೇವೆ. ಅಂತಹ ಮಹಾತ್ಮರ ಆದರ್ಶವನ್ನು ನಾವೆಲ್ಲರೂ ಅನುಸರಿಸಬೇಕಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ತಾಲೂಕು ಆಡಳಿತದಿಂದ ಗುರುವಾರ ಆಯೋಜಿಸಿದ್ದ 73ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶ ಅಭಿವೃದ್ಧಿಪತ್ತ ಸಾಗುತ್ತಿದೆ. ಮಾಹಿತಿ ತಂತ್ರಜ್ಞಾನ, ಕೈಗಾರಿಕೆ ಕ್ಷೇತ್ರ ಸೇರಿದಂತೆ ನಾನಾ ಕ್ಷೇತ್ರದಲ್ಲಿ ಅಭಿವದ್ಧಿ ಆಗುತ್ತಿದೆ. ಆದರೆ, ಇನ್ನೂ ಶೇ.20ರಷ್ಟು ಬಡ ಜನರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅನಕ್ಷರತೆ, ಮೌಡ್ಯ, ಅತ್ಯಾಚಾರ, ಭಯೋತ್ಪಾದನೆ ತಾಂಡವವಾಡುತ್ತಿವೆ. ಇವುಗಳಿಗೆ ಮುಕ್ತಿ ಕಾಣಿಸಿ ಎಲ್ಲರೂ ಶಾಂತಿ, ಸಹೋದರತೆ, ಭಾವೈಕ್ಯತೆಯಿಂದ ಜೀವನ ಸಾಗಿಸುವಂತೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಕ್ಷೇತ್ರದಲ್ಲಿ ಅಭಿವೃದ್ಧಿ ಪರ ಕೆಲಸಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಸರಕಾರದಿಂದ ಮತ್ತಷ್ಟು ಅನುದಾನ ತಂದು ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು. ಅಲ್ಲದೇ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಯಿಂದ ಅಲ್ಲಿಯ ಜನರು ಮನೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಅಂತಹವರಿಗೆ ಸಹಾಯ ಹಸ್ತ ಚಾಚುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನಾನು ನನ್ನ ಶಾಸಕ ಸಂಬಳದ ಮೂರು ತಿಂಗಳ ಸಂಬಳವನ್ನು ಸಂತ್ರಸ್ತರ ಪರಿಹಾರ ನಿಧಿಗೆ ನೀಡುತ್ತೇನೆ ಎಂದು ಘೋಷಿಸಿದರು. ಉಪನ್ಯಾಸಕ ಜಗನ್ನಾಥ ಹೆಬ್ಟಾಳೆ ಉಪನ್ಯಾಸ ನೀಡಿದರು. ಶ್ರೀ ಬಸವಲಿಂಗ ದೇವರು ಸಾನ್ನಿಧ್ಯ ವಹಿಸಿದ್ದರು. ತಾಪಂ ಅಧ್ಯಕ್ಷೆ ಮೀರಾಬಾಯಿ ಜನಾರ್ಧನ, ಉಪಾಧ್ಯಕ್ಷ ಮಾರುತಿರಾವ್ ಮಗರ, ಎಪಿಎಂಸಿ ಅಧ್ಯಕ್ಷ ಬಾಬುರಾವ ಪಾಟೀಲ, ಡಿವೈಎಸ್ಪಿ ವೆಂಕನಗೌಡ ಪಾಟೀಲ, ಪುರಸಭೆ ಸದಸ್ಯರು ಇದ್ದರು. ತಹಸೀಲ್ದಾರ್ ಅಣ್ಣಾರಾವ ಪಾಟೀಲ ಸ್ವಾಗತಿಸಿದರು. ಗಣಪತರಾವ್ ಕಲ್ಲೂರೆ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದನೂರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…