ಕೆಆರ್ಡಿಐಎಲ್ ಕಾಮಗಾರಿ ಅಪೂರ್ಣಕ್ಕೆ ಆಕ್ಷೇಪ
ತಾಪಂ ಸಾಮಾನ್ಯ ಸಭೆ ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆಗೆ ತಾಪಂ ಸದಸ್ಯರ ಅಸಮಾಧಾನ
Team Udayavani, Dec 6, 2019, 3:27 PM IST
ಭಾಲ್ಕಿ: ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಮೀರಾಬಾಯಿ ಜನಾರ್ದನ ಕಣಜೆ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ನಡೆಯಿತು.
ಸಭೆ ಆರಂಭವಾಗುತ್ತಲೇ ಸದಸ್ಯರು ಕೆಆರ್ಡಿಐಎಲ್ ಇಲಾಖೆಯ ಕಾರ್ಯವೈಖರಿ ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆ ವಿರುದ್ಧ ಅಸಮಾಧಾನ ಹೊರ ಹಾಕಿದರು. ಕೆಆರ್ಡಿಐಎಲ್ನಿಂದ ಮೇಹಕರ್, ಖಟಕ್ ಚಿಂಚೋಳಿಯಲ್ಲಿ ನಿರ್ಮಾಣಗೊಂಡ ವಸತಿ ನಿಲಯದ ಕಟ್ಟಡಗಳನ್ನು ಹಸ್ತಾಂತರ ಮಾಡದಿರುವುದು, ತಾಲೂಕಿನ ನಾನಾ ಕಡೆಗಳಲ್ಲಿ ಅಂಗನವಾಡಿ ಕಟ್ಟಡಗಳು ಅಪೂರ್ಣವಾಗಿರುವುದು, ಇನ್ನೂ ಕೆಲವು ಕಡೆಗಳಲ್ಲಿ ಕಟ್ಟಡ ಕಳಪೆಯಾಗಿ ನಿರ್ಮಾಣವಾಗುತ್ತಿರುವ ಬಗ್ಗೆ ಸದಸ್ಯರು ಪ್ರಶ್ನಿಸಿದರು.
ಈ ವೇಳೆ ಕೆಆರ್ಡಿಐಎಲ್ನ ಅಧಿಕಾರಿ ಸಮಜಾಯಿಸಿ, ಉತ್ತರ ನೀಡುವ ಪ್ರಯತ್ನ ಮಾಡಿದರು. ಇದರಿಂದ ಗರಂ ಆದ ಹಲಬರ್ಗಾ,
ಜ್ಯಾಂತಿ, ಖಟಕ್ ಚಿಂಚೋಳಿ, ಮದಕಟ್ಟಿ ಕ್ಷೇತ್ರ ಸೇರಿದಂತೆ ಮುಂತಾದ ಸದಸ್ಯರು ಧ್ವನಿಗೂಡಿಸಿ, ಕೆಆರ್ಡಿಐಎಲ್ನ ಅಧಿಕಾರಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಪ್ರತಿಸಲ ನಡೆಯುವ ಸಭೆಗೆ ಸರಿಯಾದ ಮಾಹಿತಿ ನೀಡುವುದಿಲ್ಲ.
ಸಭೆಯಲ್ಲಿ ಹೆಚ್ಚಾಗಿ ಗೈರಾಗಿರುವುದು ಕಂಡು ಬರುತ್ತಿದೆ. ತಾಲೂಕಿನ ನಾನಾ ಕಡೆಗಳಲ್ಲಿ ಕೆಆರ್ ಡಿಐಎಲ್ನಿಂದ ನಡೆಯುತ್ತಿರುವ ಕಾಮಗಾರಿ ತೃಪ್ತಿ ತಂದಿಲ್ಲ. ಕೆಆರ್ಡಿಐಎಲ್ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಖಟಕ್ ಚಿಂಚೋಳಿ ಕ್ಷೇತ್ರದ ಸದಸ್ಯ ವಿಜಯಕುಮಾರ ಗಡಗಂಚಿ ಮಾತನಾಡಿ, ಖಟಕ್ ಚಿಂಚೋಳಿ ಗ್ರಾಮದಲ್ಲಿ ವಸತಿ ನಿಲಯದ ಹೆಚ್ಚುವರಿ ಕೋಣೆಯನ್ನು ಕೆಆರ್ಡಿಐಎಲ್ನಿಂದ ನಿರ್ಮಿಸಿ ಮೂರು ವರ್ಷ ಕಳೆಯುತ್ತ ಬಂದರೂ ಇದುವರೆಗೂ ಹಸ್ತಾಂತರವಾಗದಿರುವ ಬಗ್ಗೆ ಪ್ರಶ್ನಿಸಿದರು. ಹಲಬರ್ಗಾ ಕ್ಷೇತ್ರದ ಸದಸ್ಯ ಸುಧಾಕರ ಮಾತನಾಡಿ, ಕೋಸಂ ಗ್ರಾಮದಲ್ಲಿ ಕೆಆರ್ ಡಿಐಎಲ್ನಿಂದ ನಿರ್ಮಿಸಿರುವ ಸಮುದಾಯ ಭವನ ಅರ್ಧಕ್ಕೆ ನಿಂತಿದೆ. ಹಾಲಹಿಪ್ಪರ್ಗಾದಲ್ಲಿ ಅಂಗನವಾಡಿ ಕಟ್ಟಡಗಳು ಅಪೂರ್ಣವಾಗಿವೆ ಎಂದು ದೂರಿದರು.
ಈ ಸಂದರ್ಭದಲ್ಲಿ ತಾಪಂ ಉಪಾಧ್ಯಕ್ಷ ಮಾರುತಿರಾವ್ ಮಗರ್, ಕಾರ್ಯನಿರ್ವಾಹಕ ಅಧಿಕಾರ ಬಸವರಾಜ ನಾಯ್ಕರ್ ಸೇರಿದಂತೆ ತಾಲೂಕು ಅನುಷ್ಠಾನ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ