ಭಾಲ್ಕಿ ಗ್ರಂಥಾಲಯಕ್ಕೆ ಸಿದ್ಧವಾಗಿದೆ ನೂತನ ಕಟ್ಟಡ

ಹೆಚ್ಚು ಗ್ರಂಥಗಳ ಸಂಗ್ರಹ ಅಗತ್ಯ ಕಟ್ಟಡಕ್ಕಿಂತ ಪುಸ್ತಕಗಳಿಗೆ ಹೆಚ್ಚು ಆದ್ಯತೆ ಇರಲಿ

Team Udayavani, Oct 30, 2019, 4:01 PM IST

30-October-18

ಭಾಲ್ಕಿ: ಕೆಲವು ವರ್ಷಗಳ ಹಿಂದೆ ಪಟ್ಟಣದಲ್ಲಿ ಹಳೆಯದಾದ ಚಿಕ್ಕ ಕೋಣೆಯಲ್ಲಿ ಗ್ರಂಥಾಲಯ ಇತ್ತು. ಇದರಿಂದ ಪಟ್ಟಣದ ಸಾಹಿತ್ಯಾಸಕ್ತರು ಮತ್ತು ಓದುಗರು ಗ್ರಂಥಾಲಯಕ್ಕೆ ಬಂದು ಪುಸ್ತಕ ಓದಲು ಪೂರಕ ವಾತಾವರಣವೇ ಇರಲಿಲ್ಲ. ಆದರೆ ಕಳೆದ ಸಾಲಿನಲ್ಲಿ ಕ್ಷೇತ್ರದ ಶಾಸಕರ ಮುತುವರ್ಜಿಯಿಂದ ಹಳೆ ಕಟ್ಟಡವನ್ನು ನೆಲಸಮಮಾಡಿ, 1.15 ಕೋಟಿ ರೂ. ಅನುದಾನದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುತ್ತಿದೆ.

ಕಟ್ಟಡ ಕಾಮಗಾರಿ ಪ್ರಗತಿ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಹಳೆ ಕಟ್ಟಡ ನೆಲಸಮಮಾಡಿ, ಕಾಮಗಾರಿಯ ವೇಗ ಹೆಚ್ಚಿಸಿದ ಕ್ಷೇತ್ರದ ಶಾಸಕರು, ಹೊಸ ಕಟ್ಟಡವನ್ನು ಉದ್ಘಾಟನೆಯ ಹಂತಕ್ಕೆ ತಂದಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಕಟ್ಟಡ ಉದ್ಘಾಟನೆಗೊಳ್ಳಲಿದೆ. ಆದರೆ ಸಾಹಿತ್ಯಾಸಕ್ತರಿಗೆ ಓದಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಹೆಚ್ಚಿನ ಪುಸ್ತಕಗಳನ್ನು ಸಂಗ್ರಹಿಸುವುದು ಬಹುಮುಖ್ಯವಾದ ಕಾರ್ಯವಾಗಿದೆ.

ಹಳೆ ಕಟ್ಟಡ ನೆಲಸಮ ಮಾಡಿದ ನಂತರ ಒಂದು ವರ್ಷದಿಂದ ಹಳೆ ಕಟ್ಟದಲ್ಲಿರುವ ಕೆಲವೇ ಕೆಲವು ಪುಸ್ತಕಗಳನ್ನು ಪಟ್ಟಣದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಸಂಗ್ರಹಿಸಿ, ಓದುಗರಿಗೆ ಅನುವು ಮಾಡಿಕೊಡಲಾಗಿದೆ. ಆದರೆ ಹೆಚ್ಚು ಜನರಿಗೆ ಈ ಸ್ಥಳದಲ್ಲಿ ತಾತ್ಕಾಲಿಕ ಗ್ರಂಥಾಲಯವಿದೆ ಎನ್ನುವ ವಿಷಯವೇ ತಿಳಿದಿಲ್ಲ. ಹೀಗಾಗಿ ಓದುಗರು ಈ ಕಡೆ ಮುಖ ಮಾಡುತ್ತಿಲ್ಲ.

ಈ ಹಿಂದೆ ಕೆಲವು ಸಾಹಿತಿಗಳು ಕ್ಷೇತ್ರದ ಶಾಸಕರಿಗೆ ಮನವಿ ಸಲ್ಲಿಸಿ, ಸುಮಾರು 50 ಸಾವಿರ ಜನಸಂಖ್ಯೆ ಹೊಂದಿರುವ ಪಟ್ಟಣದಲ್ಲಿ ಒಂದು ಸುಸಜ್ಜಿತ ಗ್ರಂಥಾಲಯ ಕಟ್ಟಡವಿರಬೇಕು. ಅಲ್ಲದೇ ಈ ಕಟ್ಟದ ವಿಶಾಲವಾದ ಪ್ರಾಂಗಣದಲ್ಲಿ ಕುಡಿಯುವ ನೀರು, ಶೌಚಾಲಯ, ಮುಂತಾದ ಮೂಲಭೂತ ಸೌಕರ್ಯಗಳಿರಬೇಕು. ಸಾವಿರಾರು ಪುಸ್ತಕಗಳನ್ನು ಅಂದವಾಗಿ ಜೋಡಿಸಿಡುವ ವ್ಯವಸ್ಥೆ ಆಗಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದರು.

ಇದನ್ನು ಪರಿಗಣಿಸಿದ ಶಾಸಕರು ಜಿಲ್ಲೆಯಲ್ಲಿಯೇ ಉತ್ತಮ ಗ್ರಂಥಾಲಯ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಎಲ್ಲರಿಗೂ ಸಂತಸ ತಂದಿದೆ. ಆದರೆ ಈ ಗ್ರಂಥಾಲಯದಲ್ಲಿ ಓದುಗರಿಗೆ ಬೇಕಾಗುವಷ್ಟು ಗ್ರಂಥಗಳನ್ನು ಸಂಗ್ರಹಿಸುವುದೇ ಮುಖ್ಯ ಕೆಲಸವಾಗಿದೆ ಎನ್ನುವುದು ಸಾಹಿತ್ಯಾಸಕ್ತರ ಅಭಿಮತ.

ಪಟ್ಟಣಕ್ಕೆ ತನ್ನದೇ ಆದ ಐತಿಹಾಸಿಕ ಧಾರ್ಮಿಕ, ಶೈಕ್ಷಣಿಕ ಇತಿಹಾಸವಿದೆ. ನೂರಾರು ಹೆಸರಾಂತ ಲೇಖಕರು, ಸಂಶೋಧಕರು, ಕವಿಗಳು ಇಲ್ಲಿದ್ದಾರೆ. ಹೀಗಾಗಿ ಅವರೆಲ್ಲರಿಗೂ ಒಂದೇ ಕಡೆ ಕುಳಿತು ಓದುವಂಥ ವಾತಾವರಣ ನಿರ್ಮಿಸಿಕೊಡುವ ಗ್ರಂಥಾಲಯ ನಿರ್ಮಾಣವಾಗುತ್ತಿರುವುದು ಸಂತಸದ ವಿಷಯ. ಆದರೆ ಈ ಗ್ರಂಥಾಲಯದಲ್ಲಿ ಬೇಡಿಕೆಗೆ ಮತ್ತು ಸ್ಥಳಾವಕಾಶಕ್ಕೆ ತಕ್ಕಂತೆ ಎಲ್ಲಾ ತರಹದ ಪುಸ್ತಕಗಳನ್ನು ಒಟ್ಟುಗೂಡಿಸುವುದೇ ಒಂದು ದೊಡ್ಡ ಕೆಲಸವಾಗಿದೆ ಎನ್ನುತ್ತಾರೆ ಹಿರಿಯ ಸಾಹಿತಿ ವೀರಣ್ಣಾ ಕುಂಬಾರ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.