ಹೃದಯ ವೈಶಾಲ್ಯತೆಗೆ ಪ್ರಾಮುಖ್ಯತೆ ಇರಲಿ: ಬಸವಲಿಂಗ ಶ್ರೀ

ದಿವ್ಯಜ್ಯೋತಿ ಪ್ರೌಢಶಾಲೆಯಲ್ಲಿ ಚಾಂಪ್ಸ್‌-2019

Team Udayavani, Apr 10, 2019, 2:57 PM IST

10-April-20

ಭಾಲ್ಕಿ: ದಿವ್ಯಜ್ಯೋತಿ ಪ್ರೌಢಶಾಲೆಯಲ್ಲಿ ನಡೆದ ಜಾಂಪ್ಸ್‌-2019 ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟನಾಸಮಾರಂಭದಲ್ಲಿ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿದರು.

ಭಾಲ್ಕಿ: ನಮ್ಮ ಬುದ್ಧಿ ಸಾಕಷ್ಟು ಬೆಳೆಯುತ್ತಲಿದೆ. ಆದರೆ ಈ ಬುದ್ಧಿಯ ಜೊತೆಗೆ ಹೃದಯವೂ ವಿಶಾಲವಾಗಬೇಕು ಎಂದು ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು. ಪಟ್ಟಣದ ದಿವ್ಯಜ್ಯೋತಿ ಪ್ರೌಢಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ಆಯೋಜಿಸಿದ್ದ ಚಾಂಪ್ಸ್‌ 2019, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಮಕ್ಕಳ ಮನಸ್ಸು ಹೂವಿನಂತೆ ಮೃದುವಾಗಿರುತ್ತದೆ. ನಾವು ನೂರು ಜನ ಮುದಕರಿಗೆ ಹೇಳುವ ಪ್ರವಚನ ಅವರ ಮುಂದಿನ ಜನ್ಮಕ್ಕೆ ಸಾರ್ಥಕವಾಗುವುದು. ಆದರೆ ಮೂರೇ ಜನ ವಿದ್ಯಾರ್ಥಿಗಳಿಗೆ ಹೇಳುವ ಮಾತು ಈ ಜನ್ಮದಲ್ಲಿಯೇ ಸಾರ್ಥಕ ಪಡೆಯುತ್ತದೆ. ಹೀಗಾಗಿ ವಿದ್ಯಾರ್ಥಿಗಳೊಂದಿಗೆ ನಡೆಸುವ ಸಂವಾದ ಸಾರ್ಥವಾಗುವುದು ಎಂದರು.

ವಿದ್ಯಾರ್ಥಿಗಳು ಒಳ್ಳೆಯ ವಿಚಾರ ತಮ್ಮ ನಡೆಯಲ್ಲಿ ಆಚರಣೆಗೆ ತರುವಂತಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ತಾವು ನಿರ್ಧರಿಸಿದ ಅಂಶದಲ್ಲಿ ಸಾರ್ಥಕವಾಗುವ ಶಕ್ತಿ ಇರುತ್ತದೆ. ಅದಕ್ಕೆ ಆತ್ಮವಿಶ್ವಾಸವಿರಬೇಕು. ಆತ್ಮ ವಿಸ್ವಾಸದ ಕೊರತೆ ಇರುವ
ವ್ಯಕ್ತಿ ಏನೂ ಸಾ ಧಿಸಲಾರ. ನಮ್ಮ ಅಂತರಂಗದಲ್ಲಿ ದೇವರು ಅದ್ಭುತ ಶಕ್ತಿ ಇಟ್ಟಿದ್ದಾನೆ. ನಾವು ಅದರ ಸದುಪಯೋಗ ಪಡೆದುಕೊಳ್ಳಬೇಕು. ನಮ್ಮ ಏಳ್ಗೆಗೆ ನಾವೇ ಶಿಲ್ಪಿಗಳಾಗಿದ್ದೇವೆ.
ನಮ್ಮಲ್ಲಿ ಮಾನವೀಯ ಮೌಲ್ಯ ಬೆಳೆಯಬೇಕು. ದಯೆ ಕರುಣೆ, ಪ್ರೀತಿ ಈ ಶಿಬಿರದಿಂದ ಬೆಳೆಸಿಕೊಳ್ಳಬೇಕು. ಆಗ ಮಾತ್ರ ನೀವು ಈ ಶಿಬಿರದಲ್ಲಿ ಪಾಲ್ಗೊಂಡಿದ್ದಕ್ಕೂ ಸಾರ್ಥಕವಾಗುವುದು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಬಸವಕುಮಾರ ಪಾಟೀಲ ಮಾತನಾಡಿ, ದೇವರು ಇರುವುದು ಮಕ್ಕಳ ಮನಸ್ಸಿನಲ್ಲಿ. ಬೀದರ ಜಿಲ್ಲೆಯ ಮಕ್ಕಳು ವೈಶಿಷ್ಟ್ಯ ಪೂರ್ಣ ವ್ಯಕ್ತಿತ್ವ ಹೊಂದಿದ್ದಾರೆ. ದೇಶದ ಭವಿಷ್ಯ ವಿದ್ಯಾರ್ಥಿಗಳ ಹತ್ತಿರವಿದೆ. ಕಾರಣ ವಿದ್ಯಾರ್ಥಿಗಳು ಉತ್ತಮವಾಗಿದ್ದರೆ ದೇಶದ ಭವಿಷ್ಯ ಉಜ್ವಲವಾಗುವುದು.
ಎಂಟು ದಿವಸಗಳ ಕಾಲ ನಡೆಯುವ ಈ ಶಿಬಿರದಲ್ಲಿ ಪಡೆದ ಉತ್ತಮ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.

ಯೇಸು ನಿಲಯ ಸಂಚಾಲಕ ಫಾದರ್‌ ಕ್ಲೇರಿ ಡಿಸೋಜಾ ನೇತೃತ್ವ ವಹಿಸಿ ಮಾತನಾಡಿದರು. ಫಾದರ್‌ ಜೋಸೆಫ್‌ ಪ್ರವೀಣ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಹುಮನಾಬಾದ ಅಧ್ಯಕ್ಷ ಪಂಡಿತ ಬಾಳೂರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ವ್ಯಕ್ತಿಗಳನ್ನು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು. ಪತ್ರಿಕಾ ಕ್ಷೇತ್ರದ ಸಾಧನೆಗೆ ಅಶೋಕ ರಾಜೋಳೆ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಗೆ ಜಯರಾಜ ದಾಬಶೆಟ್ಟಿ ಅವರನ್ನು ಸತ್ಕರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿ ಕಾರಿ ಸಿದ್ದವೀರಯ್ನಾ ರುದನೂರ, ಸೋಮನಾಥಪ್ಪ ಅಸ್ಟೂರೆ, ತಾಪಂ ಸಹಾಯಕ ನಿರ್ದೇಶಕಿ ಶಿವಲೀಲಾ ತಳಗಾವೆ, ಆನಂದ ಸರ್ನಾಡ, ಗುಣವಾನ ವೈರಾಗೆ, ನಾಗನಾಥ ಪಾಟೀಲ, ರಾಮಶೆಟ್ಟಿ ಕೆಂಚಾ, ಶಿವಕುಮಾರ ಘಂಟೆ, ಸುಭಾಷಚಂದ್ರ ದಾಡಗೆ, ಮಂಜುಳಾ ಸುಭಾಷ, ಸಂಗಮೇಶ ಜವಾದಿ, ಪಾರ್ವತಿ ಚಂದ್ರಕಾಂತ, ಮಲ್ಲಮ್ಮಾ ಪಾಟೀಲ, ರಮೇಶ ಸಲಗರ್‌ ಉಪಸ್ಥಿತರಿದ್ದರು.
ಕ.ಕ.ಪ್ರ. ತಾಲೂಕು ಅಧ್ಯಕ್ಷ ಶಿವಾಜಿರಾವ್‌ ಮಾನೆ ಸ್ವಾಗತಿಸಿದರು. ಹಣಮಂತ ಕಾರಾಮುಂಗೆ ನಿರೂಪಿಸಿದರು. ಮಂಜುನಾಥ ಬೆಳಕೇರೆ ವಂದಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.